ಚಿತ್ರದುರ್ಗ: ತುಮಕೂರ್ಲಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿದ್ದು ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣಕ್ಕಿಡಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದ್ರೆ, ಉಳಿದ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಪ್ರಕರಣ ನಡೆದಿದ್ದು, ಕಾರಿನ ಟೈರ್ ಸ್ಪೋಟಗೊಂಡ ಪರಿಣಾಮ ಲಾರಿಗೆ ಕಾರ್ ಡಿಕ್ಕಿ ಹೊಡೆದಿದೆ ಎಂದು ಶಂಕಿಸಲಾಗಿದೆ.
ಮೃತರೆಲ್ಲರೂ ಚಳ್ಳಕೆರೆ ಮೂಲದವರಾಗಿದ್ದು, ಘಟನಾ ಸ್ಥಳಕ್ಕೆ PSI ಮಹೇಶ್ ಹೊಸಪೇಟ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


