ಡಿಸೆಂಬರ್ 9ರಂದು ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಪ್ರದರ್ಶನ

ಬೆಳಗಾವಿ, ಡಿಸೆಂಬರ್ 8 (ಕರ್ನಾಟಕ ವಾರ್ತೆ): ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಡಿಸೆಂಬರ್ 9 ನಾಳೆ ಬೆಳಿಗ್ಗೆ 9.30 ಗಂಟೆಗೆ ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪ್ರದರ್ಶಿಸಲಾಗುವುದು. ಕಲಬುರ್ಗಿ ಜಿಲ್ಲೆಯ ಕಾಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಲ್ಪಟ್ಟಿರುವ ಈ ಕೆಲಸ ಮತ್ತೊಮ್ಮೆ ಐತಿಹಾಸಿಕವಾಗಲಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ […]

ಮತ್ತಷ್ಟು ಓದಿ..

ದಿನೇ ದಿನೇ ಬಿಗಡಾಯುಸುತ್ತಿದೆ ಸರ್ಕಾರಿ ಉದ್ಯೋಗದ ಸಮಸ್ಯೆ – ಸರ್ಕಾರ ನೀಡುವುದೇ ಭರವಸೆ?

‘ಕಣ್ಣು ಬಿಡು ಸರ್ಕಾರ’ ಧಾರವಾಡ: ಎಲ್ಲೆಡೆ ಉದ್ಯೋಗಾಕಾಂಕ್ಷಿಗಳ ಆಕ್ರೋಶ. ಮತ್ತೊಂದೆಡೆ ಸರ್ಕಾರಿ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿಕೊಳ್ಳುತ್ತಿಲ್ಲ ಎಂಬ ಉದ್ಯೋಗಾಕಾಂಕ್ಷಿಗಳ ಹತಾಶ ಭಾವನೆ. ಪೊಲೀಸ್ ಆಯುಕ್ತರ ಎದುರೇ ಕಣ್ಣೀರು ಹಾಕುತ್ತಿರುವ ಉದ್ಯೋಗಾಕಾಂಕ್ಷಿಗಳು. ಇದೆಲ್ಲ ಸದ್ಯದ ಉದ್ಯೋಗಾಕಾಂಕ್ಷಿಗಳ ಪರಿಸ್ಥಿತಿ. ಒಂದೆಡೆ ವಯಸ್ಸು ಮೀರುತ್ತಿದ್ದರೆ, ಮತ್ತೊಂದೆಡೆ ಸರ್ಕಾರ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮೊಂಡುತನ ತೋರಿಸುತ್ತಿದೆ. ಧಾರವಾಡ ಅದೆಷ್ಟೋ ಉದ್ಯೋಗಾಕಾಂಕ್ಷಿಗಳಿಗೆ ನೆಲೆ ಕೊಟ್ಟಿದೆ. ಆದರೆ, ಅವರಿಗಿರುವ ಕಳವಳ ಏನೆಂದರೆ ಸರ್ಕಾರ ಅದ್ಯಾವಾಗ ಉದ್ಯೋಗಕ್ಕೆ ಅರ್ಜಿ ಕರೆಯುತ್ತದೆಯೋ […]

ಮತ್ತಷ್ಟು ಓದಿ..

ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ನಲ್ಲಿ ಅಕ್ರಮ ನಡೆದಿಲ್ಲ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್.

ಬೆಳಗಾವಿ ಸುವರ್ಣಸೌಧ,ಡಿ.08 (ಕರ್ನಾಟಕ ವಾರ್ತೆ): ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ರಾಜ್ಯದ 32 ಕಡೆಗಳಲ್ಲಿ ಸುಮಾರು 784 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಗೋವಿಂದ ರಾಜು ಅವರ ಗಮನ ಸೆಳೆಯುವ ಸೂಚನೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ […]

ಮತ್ತಷ್ಟು ಓದಿ..

ನಾಗನೂರು ರುದ್ರಾಕ್ಷಿ ಮಠದ ಯುವ ವಿಜ್ಞಾನಿ ಕೇಂದ್ರಕ್ಕೆ ಸಚಿವ ಎಂ ಬಿ ಪಾಟೀಲ ಚಾಲನೆ

ಬೆಳಗಾವಿ: ಇಲ್ಲಿನ ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೆ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಶೋಧನೆ ನಡೆಸಲು ಹಾಗೂ ತರಬೇತಿ ನೀಡುವ ಉದ್ದೇಶದಿಂದ ನಿರ್ಮಿಸಿರುವ ‘ಸ್ಟೆಮ್-ಎಚ್’ (STEAM-H) ಯುವವಿಜ್ಞಾನಿ ಕೇಂದ್ರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಉದ್ಘಾಟಿಸಿದರು. ಮಠದ ಲಿಂಗೈಕ್ಯ ಡಾ.ಶಿವಬಸವ ಮಹಾಸ್ವಾಮಿಗಳ 136ನೇ ಜಯಂತಿ ಮಹೋತ್ಸವದಲ್ಲಿ ಅವರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಬೆಳಗಾವಿ ಭಾಗದಲ್ಲಿ ನಾಗನೂರು ರುದ್ರಾಕ್ಷಿ ಮಠಕ್ಕೆ ಭವ್ಯ ಪರಂಪರೆ […]

ಮತ್ತಷ್ಟು ಓದಿ..

ಗಡಿ ಭಾಗದ ಸಮಸ್ಯೆಗಳ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಭೇಟಿಗೆ ಕನ್ನಡ ಸಂಘಟನೆಗಳ ನಿರ್ಧಾರ

ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಗಡಿ ಭಾಗದ ವಿವಿಧ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗಡಿ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಅವರೊಂದಿಗೆ ಚರ್ಚಿಸಲು ರವಿವಾರ ಸಂಜೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ಸೇರಿದ್ದ ವಿವಿಧ ಕನ್ನಡಪರ ಸಂಘಟನೆಗಳು ತೀರ್ಮಾನ ಮಾಡಿದವು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಮತ್ತು ಗಡಿ ಸಂರಕ್ಷಣಾ ಆಯೋಗದ ಪ್ರಾದೇಶಿಕ ಕಚೇರಿ ಸ್ಥಾಪನೆ, ರಾಜ್ಯ ಸರಕಾರದ ಏಳು ಕೋಟಿ ರೂಪಾಯಿ […]

ಮತ್ತಷ್ಟು ಓದಿ..

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಸ್ಥಳದಲ್ಲೇ ಮೂವರ ದುರ್ಮರಣ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ದುರ್ಮರಣಕ್ಕಿಡಾಗಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಬಳಿ ನಡೆದಿರುವ ಕಾರು ಅಪಘಾತದಲ್ಲಿ ಚಿಕ್ಕಮಗಳೂರು ಮೂಲದ ಚನ್ನೆಗೌಡ (60), ಸರೋಜಮ್ಮ (55), ಜಯಮ್ಮ (70) ಮೃತ ದುರ್ದೈವಿಗಳಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಚಿಕ್ಕಮಗಳೂರುಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಕಾರು ತಿರುವಿನಲ್ಲಿ ಡಿವೈಡರ್ ಗೆ ಡಿಕ್ಕಿ […]

ಮತ್ತಷ್ಟು ಓದಿ..

ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ನಾಳೆಯಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಗೆ ಆಗಮಿಸಿದರು. ಸುವರ್ಣ ಸೌಧದ ಹೆಲಿಪ್ಯಾಡ್ ಗೆ ಆಗಮಿಸಿದ ಸಿಎಂಗೆ ಸಚಿವರಾದ ಕೆ ಜೆ ಜಾರ್ಜ್, ಎಚ್ ಸಿ ಮಹಾದೇವಪ್ಪ ಹಾಗೂ ಕೃಷ್ಣ ಬೈರೇಗೌಡ ಸಾಥ್ ನೀಡಿದ್ದಾರೆ. ಬೆಳಗಾವಿಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಆಸೀಫ್ ಸೇಠ್, ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ, ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಸ್ವಾಗತಿಸಿದರು. ಬಳಿಕ ಸಿದ್ದರಾಮಯ್ಯ ಅವರು ಪೊಲೀಸ್ ಗೌರವ ವಂದನೆ ಸ್ವೀಕರಿಸಿ, ಪ್ರವಾಸಿ […]

ಮತ್ತಷ್ಟು ಓದಿ..

ಬೆಳಗಾವಿ ಅಧಿವೇಶನ ಪ್ರತಿಭಟನೆಯ ವೇದಿಕೆ, ಪಿಕ್‌ನಿಕ್ ಎಂಬ ಭಾವ ಸರಿಯಲ್ಲ: ಸಚಿವ ಎಚ್.ಕೆ.ಪಾಟೀಲ್

ಹುಬ್ಬಳ್ಳಿ: ಬೆಳಗಾವಿ ಅಧಿವೇಶನವು ಪ್ರತಿಭಟನೆಯ ವೇದಿಕೆ, ಪಿಕ್‌ನಿಕ್ ಎಂಬ ಭಾವದಿಂದ ನಡೆದುಕೊಳ್ಳುವುದು ಸರಿಯಲ್ಲ. ಅಧಿವೇಶನದ ಪಾವಿತ್ರ್ಯ ಮತ್ತು ಶಕ್ತಿಯನ್ನು ಕುಂದಿಸುವ ಕೆಲಸ ಆಗಬಾರದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ,  ಶಾಸಕರು ಮತ್ತು ವಿಪಕ್ಷಗಳಿಗೆ ಕರೆ ನೀಡಿದರು. ಭಾನುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಅಸಮಾನತೆ ದೂರಮಾಡಲು ಉತ್ತರ ಕರ್ನಾಟಕ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚಿಸುವ ಜವಾಬ್ದಾರಿ ಶಾಸಕರ ಮೇಲಿದೆ ಎಂದರು. ಸಾಮಾಜಿಕ ಬಹಿಷ್ಕಾರ ನಿಷೇಧ, ಧಾರ್ಮಿಕ ಸಂಸ್ಥೆಗಳ ಪರಿಣಾಮಕಾರಿ ನಿರ್ವಹಣೆ, ಹಸ್ತಪ್ರತಿಗಳ […]

ಮತ್ತಷ್ಟು ಓದಿ..

ಕ್ಷೇತ್ರದಲ್ಲಿ 151ನೇ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ

ಬೆಳಗಾವಿ ಅಧಿವೇಶನ ಮುನ್ನಾದಿನ ಗ್ರಾಮೀಣ ಕ್ಷೇತ್ರದ ಸುಳಗಾ ಗ್ರಾಮದಲ್ಲಿ ಚಾಲನೆ ಬೆಳಗಾವಿ: ಶಾಸಕರಾಗಿ ಏಳೂವರೆ ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 150 ದೇವಸ್ಥಾನಗಳ ಜೀರ್ಣೋದ್ಧಾರ ಮಾಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗುವ ಮುನ್ನಾದಿನ, ಭಾನುವಾರ ಸುಳಗಾ ಗ್ರಾಮದಲ್ಲಿ 151ನೇ ದೇವಸ್ಥಾನದ ಕಾಲಂ ಪೂಜೆ ನೆರವೇರಿಸಿದರು. ತಲಾ 25 ಲಕ್ಷ ರೂ.ಗಳಿಂದ ಆರಂಭವಾಗಿ 5 ಕೋಟಿ ರೂ.ವರೆಗಿನ ಅನುದಾನ ನೀಡುವ ಮೂಲಕ, 114 ಗ್ರಾಮಗಳನ್ನು ಒಳಗೊಂಡಿರುವ […]

ಮತ್ತಷ್ಟು ಓದಿ..

ರಮೇಶ್ ಕತ್ತಿ ಮೇಲಿನ ಜಾತಿ ನಿಂದನೆ ಕೇಸ್ – ಹುಕ್ಕೇರಿ ಗ್ರೇಡ್2 ತಹಶಿಲ್ದಾರ ವಿರುದ್ಧ ಸದನದಲ್ಲಿ ಹೋರಾಟ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಚಿಕ್ಕೋಡಿ ಮಾಜಿ ಸಂಸದ ರಮೇಶ್ ಕತ್ತಿ ಅವರ ಮೇಲಿನ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕೇರಿ ಗ್ರೇಡ್-2 ತಹಶಿಲ್ದಾರ ಮೇಲೆ ಸರಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಇದೇ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷ ನಾಯಕ ಆರ್.ಅಶೋಕ‌ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಶನಿವಾರ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಕ್ಕೇರಿ ಗ್ರೇಡ್-2 ತಹಶಿಲ್ದಾರ ವಾಲ್ಮೀಕಿ ಸಮಾಜಕ್ಕೆ ‌ಮಾಡಿರುವ ಅನ್ಯಾಯದ ಕುರಿತು ಚಳಿಗಾಲದ ‌ಅಧಿವೇಶನದಲ್ಲಿ ಸರಕಾರದ ಗಮನಕ್ಕೆ […]

ಮತ್ತಷ್ಟು ಓದಿ..