ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ -25 ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರೊಡನೆ ಮಕ್ಕಳ ಸಮಾಲೋಚನೆ ಎಂಬ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಪ್ರತಿಯೊಬ್ಬರು ಜೀವನದಲ್ಲಿ ತಮ್ಮದೇ ಆದ ಗುರಿ ಇಟ್ಟು ಕೊಳ್ಳಬೇಕು ಎಂದು ಕರೆ ನೀಡಿದರು. ನಾವು ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೂ ನಂಬರ್ 1 ಸ್ಥಾನಕ್ಕೇರಲು ಪ್ರಯತ್ನಿಸಬೇಕು. ತಂದೆ, ತಾಯಿ, ಶಿಕ್ಷಕರ ಕನಸನ್ನು ನನಸಾಗಿಸಬೇಕು. ಪ್ರತಿಯೊಂದಕ್ಕೂ ಗುರಿ ಇಟ್ಟುಕೊಂಡು ಮುಂದೆ ಸಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಕ್ಕಳ […]

ಮತ್ತಷ್ಟು ಓದಿ..

ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ತ್ವರಿತ ಸಾಲ ಸೌಲಭ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

ಬೆಂಗಳೂರು: ರಾಜ್ಯದ ಮಹಿಳೆಯರು ಸಣ್ಣ ಪ್ರಮಾಣದ ಉದ್ಯಮಗಳನ್ನು ಸ್ಥಾಪಿಸಲು ಸರ್ಕಾರವು ಆರ್ಥಿಕವಾಗಿ ಮತ್ತು ಎಲ್ಲ ರೀತಿಯಲ್ಲಿ ಬೆಂಬಲ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ಭರವಸೆ ನೀಡಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ವತಿಯಿಂದ ನಡೆದ ಅಂತಾರಾಷ್ಟ್ರೀಯ ಮಹಿಳಾ ಉದ್ದಿಮೆದಾರರ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮಹಿಳಾ ಉದ್ಯಮಿಗಳಿಗೆ ಅಥವಾ ಸ್ವಂತ ಉದ್ಯಮ ಆರಂಭಿಸಲು ಬಯಸುವ ಮಹಿಳೆಯರಿಗೆ ಸರ್ಕಾರವು ಶೇಕಡಾ 3ರ ವಾರ್ಷಿಕ ಬಡ್ಡಿದರದಲ್ಲಿ 5 […]

ಮತ್ತಷ್ಟು ಓದಿ..

ಕೊನೆಗೂ ಬಯಲಾಯ್ತು 31 ಕೃಷ್ಣಮೃಗ ಸಾವಿನ ರಹಸ್ಯ: ಡಿಎಫ್ಓ ಕ್ರಾಂತಿ ಹೇಳಿದ್ದೇನು

ಬೆಳಗಾವಿ: ಬೆಳಗಾವಿಯ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಡೆಗೂ ಕೃಷ್ಣ ಮೃಗಗಳ ಸಾವಿನ ರಹಸ್ಯ ಬಹಿರಂಗವಾಗಿದೆ. ಕೃಷ್ಣ ಮೃಗಗಳ ಮರಣೋತ್ತರ ಪರೀಕ್ಷೆಯ ಲ್ಯಾಬ್ ವರದಿ ಬಂದಿದೆ. ದಕ್ಷಿಣ ಪ್ರಾದೇಶಿಕ ರೋಗಪತ್ತೆ ಪ್ರಯೋಗಾಲಯ ಪ್ರಾಣಿ ಆರೋಗ್ಯ ಮತ್ತು ಪಶುವೈದ್ಯಕೀಯ ಜೀವಶಾಸ್ತ್ರ ರೋಗ ಪತ್ತೆ ಬ್ಯಾಕ್ಟೀರಿಯಾಲಜಿ ಮತ್ತು ಮೈಕಾಲಜಿ ಬೆಂಗಳೂರು ಈ ವರದಿ ನೀಡಿದ್ದು, ಹಿಮೋರಿಜಿಕ್ ಸೆಪ್ಟಿಸೀಮಿಯಾ ಬ್ಯಾಕ್ಟೀರಿಯಾದಿಂದ ಮತ್ತು ಗಳಲೆ ರೋಗದಿಂದ ಮೃತಪಟ್ಟ ಬಗ್ಗೆ ವರದಿ ಬಂದಿದೆ ಈ ಕುರಿತು ಸುದ್ಧಿಗೋಷ್ಠಿ […]

ಮತ್ತಷ್ಟು ಓದಿ..

ಹೊಸ ಇತಿಹಾಸ ಸೃಷ್ಟಿಸಲಿದೆ ನವೆಂಬರ್ 28ರ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ರಾಮನಗರ : ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು‌ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ‌ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ […]

ಮತ್ತಷ್ಟು ಓದಿ..

ಬೆಳಗಾವಿ ಚಳಿಗಾಲ‌ ಅಧಿವೇಶನ-2025: ಉಭಯ ಸದನಗಳ ಸಭಾಧ್ಯಕ್ಷರಿಂದ ಪರಿಶೀಲನೆ

ವಸತಿ, ಸಾರಿಗೆ, ಊಟೋಪಹಾರದ ಸಮರ್ಪಕ ವ್ಯವಸ್ಥೆ ಕಲ್ಪಿಸಲು: ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಸೂಚನೆ ಬೆಳಗಾವಿ (ಕರ್ನಾಟಕ ವಾರ್ತೆ)ನ.19: ಡಿಸೆಂಬರ್ 8ರಿಂದ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ‌ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಬೆಳಗಾವಿ ಚಳಿಗಾಲ‌ ಅಧಿವೇಶನ ಯಶಸ್ವಿಗೊಳಿಸಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಸೂಚಿಸಿದರು. ಸುವರ್ಣ ವಿಧಾನಸೌಧದಲ್ಲಿ ಬುಧವಾರ (ನ.19) ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

ಮತ್ತಷ್ಟು ಓದಿ..

ಆನೆ ದಾಳಿ 70 ವರ್ಷದ ವೃದ್ದ ಸಾವು

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ‌ ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ನಲ್ಲಿಕತ್ರಿ ಗ್ರಾಮದಲ್ಲಿ  ಆನೆ ದಾಳಿಗೆ ವೃದ್ದ ಬಲಿಯಾಗಿದ್ದಾನೆ. ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೊಂಬೆಗಲ್ಲು ಪೋಡಿನ ಹಿರಿಯ ಮುಖಂಡ ಶಿಕಾರಿ ಕೇತೇಗೌಡ (70) ಆನೆ ದಾಳಿಯಿಂದ ಮೃತಪಟ್ಟ ದುರ್ದೈವಿ. ಘಟನೆ ವಿವರ: ಪಿ.ಜಿ ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೊಂಬೆಗಲ್ಲು ಪೋಡಿನ ಹಿರಿಯ ಮುಖಂಡ ಶಿಕಾರಿ ಕೇತೇಗೌಡ ಕೆಲಸ ನಿಮಿತ್ತ ತಮ್ಮ ದ್ವಿಚಕ್ರ ವಾಹನದಲ್ಲಿ ಒಡೆಯರಪಾಳ್ಯ ಗ್ರಾಮಕ್ಕೆ ಬರುತ್ತಿರುವಾಗ ಬೈಲೂರು […]

ಮತ್ತಷ್ಟು ಓದಿ..

ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಬಸ್ ಪಲ್ಟಿ: 33 ಮಾಲಾಧಾರಿಗಳು ಪ್ರಣಾಪಾಯದಿಂದ ಪಾರು

ಕೇರಳ: ಮಂಡ್ಯದಿಂದ ಅಯ್ಯಪ್ಪ ಮಾಲಾಧಾರಿಗಳನ್ನು ಹೊತ್ತು ಶಬರಿಮಲೇಗೆ ತರಳುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಅಯ್ಯಪ್ಪ ಮಾಲಾಧಾರಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 33 ಅಯ್ಯಪ್ಪ ಮಾಲಧಾರಿಗಳು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದದಿಂದ ಶಬರಿಮಲೇಗೆ ತರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕೇರಳದ ಏರಿಮಲೈ ತಟ್ಟಿಪಿಟ್ಟಮ್ ಪ್ರದೇಶದಲ್ಲಿ ಬಸ್ ಪಲ್ಟಿಯಾಗಿದೆ. K.R.ಪೇಟೆ ತಾಲೂಕಿನ ಯಾತ್ರಾರ್ಥಿಗಳ ವಾಹನ ಪಲ್ಟಿಯಾದ ಹಿನ್ನಲೆ ವಿಷಯ ತಿಳಿದ ತಕ್ಷಣವೇ ಗಾಯಾಳುಗಳನ್ನು […]

ಮತ್ತಷ್ಟು ಓದಿ..

ಕೋರ್ಟ್ ನಲ್ಲಿ ಜಡ್ಜ್ ಎದುರಲ್ಲೇ ಮಾರಕಾಸ್ತ್ರದಿಂದ ಹೊಡೆದು ಮಹಿಳೆಯ ಕೊಲೆ ಯತ್ನ

ಅಥಣಿ: ಕೋರ್ಟ್ ಕಲಾಪ ನಡೆಯುವ ವೇಳೆ ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಅಥಣಿ ನ್ಯಾಯಾಲಯದಲ್ಲಿ ನಡೆದಿದೆ. ಮೀನಾಕ್ಷಿ ರಾಮಚಂದ್ರ ಶಿಂಧೆ (50) ಹಲ್ಲೆಗೊಳಗಾದ ಮಹಿಳೆಯಾಗಿದ್ದು, ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೋತನಟ್ಟಿ ಗ್ರಾಮದ ಬಾಬಾಸಾಹೇಬ್ ಚೌಹಾಣ ಎಂಬಾತ ಹಲ್ಲೆ ಮಾಡಿದ್ದ ಆರೋಪಿ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಬಾಬಾಸಾಹೇಬ್ ಸೋದರತ್ತೆ ಮೀನಾಕ್ಷಿ ಕೋರ್ಟ್ ಮೆಟ್ಟಿಲೇರಿದ್ದಳು. ಇದೇ ವಿಚಾರವಾಗಿ ಅನೇಕ ಬಾರಿ ಜಗಳವಾಗಿತ್ತು. ಇವತ್ತು ಸೋದರತ್ತೆ […]

ಮತ್ತಷ್ಟು ಓದಿ..

ಬೆಳಗಾವಿಯಲ್ಲಿ ಉಸಿರುಗಟ್ಟಿ ಮೂವರ ದಾರುಣ ಸಾವು; ಓರ್ವ‌ನ ಸ್ಥಿತಿ ಚಿಂತಾಜನಕ

ಬೆಳಗಾವಿ: ಕಾರ್ಯಕ್ರಮವೊಂದಕ್ಕೆ ಹೋಗಿ ಮನೆಗೆ ಬಂದಿದ್ದ ನಾಲ್ವರು ಯುವಕರ ಪೈಕಿ ಮೂವರು ಯುವಕರು ಉಸಿರುಗಟ್ಟಿ ಸಾವನ್ನಪ್ಪದ್ದು, ಓರ್ವ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಬೆಳಗಾವಿಯಲ್ಲಿ ವಿಪರೀತ ಚಳಿ ಇರುವ ಹಿನ್ನೆಲೆ ಮನೆಯ ರೂಮಿನಲ್ಲಿ ಇದ್ದಿಲಿನಿಂದ ಬೆಂಕಿ ಹಚ್ಚಿ ಕೆಂಡ ಮಾಡಿ ಹತ್ತಿರದಲ್ಲೇ ಇಟ್ಟುಕೊಂಡು ಮಲಗಿದ್ದ ನಾಲ್ವರು ಯುವಕರು ತೀವ್ರ ನಿದ್ರೆಗೆ ಜಾರಿದ್ದಾರೆ. ಚಳಿಗೆ ಬಿಸಿಯಾಗಲೇಂದು ಪಕ್ಕದಲ್ಲೇ ಇದ್ದಿಲು ಕೆಂಡ ಇಟ್ಟುಕೊಂಡು ಮಲಗಿದ್ದ ನಾಲ್ವರು ಯುವಕರ ಪೈಕಿ ಮೂವರಿಗೆ ಉಸಿರುಗಟ್ಟಿದೆ ಎನ್ನಲಾಗಿದೆ. ನಿದ್ರೆಗೆ ಜಾರಿದಾಗ ರೂಮನಲ್ಲೇ ಹೊಗೆಯಾಡಿ ಉಸಿರಾಟದ ಸಮಸ್ಯೆಯಿಂದ […]

ಮತ್ತಷ್ಟು ಓದಿ..

ರಾಜ್ಯದಲ್ಲಿ ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ: ಹೂಡಿಕೆದಾರರಿಗೆ ಸಿಎಂ ಕರೆ

ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ನವೆಂಬರ್ 18: ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’ 28 ನೇ […]

ಮತ್ತಷ್ಟು ಓದಿ..