ನಾಗನೂರು ರುದ್ರಾಕ್ಷಿ ಮಠದ ಯುವ ವಿಜ್ಞಾನಿ ಕೇಂದ್ರಕ್ಕೆ ಸಚಿವ ಎಂ ಬಿ ಪಾಟೀಲ ಚಾಲನೆ

ಬೆಳಗಾವಿ: ಇಲ್ಲಿನ ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೆ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಶೋಧನೆ ನಡೆಸಲು ಹಾಗೂ ತರಬೇತಿ ನೀಡುವ ಉದ್ದೇಶದಿಂದ ನಿರ್ಮಿಸಿರುವ ‘ಸ್ಟೆಮ್-ಎಚ್’ (STEAM-H) ಯುವವಿಜ್ಞಾನಿ ಕೇಂದ್ರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಉದ್ಘಾಟಿಸಿದರು. ಮಠದ ಲಿಂಗೈಕ್ಯ ಡಾ.ಶಿವಬಸವ ಮಹಾಸ್ವಾಮಿಗಳ 136ನೇ ಜಯಂತಿ ಮಹೋತ್ಸವದಲ್ಲಿ ಅವರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಬೆಳಗಾವಿ ಭಾಗದಲ್ಲಿ ನಾಗನೂರು ರುದ್ರಾಕ್ಷಿ ಮಠಕ್ಕೆ ಭವ್ಯ ಪರಂಪರೆ […]

ಮತ್ತಷ್ಟು ಓದಿ..

ಗಡಿ ಭಾಗದ ಸಮಸ್ಯೆಗಳ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಭೇಟಿಗೆ ಕನ್ನಡ ಸಂಘಟನೆಗಳ ನಿರ್ಧಾರ

ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಗಡಿ ಭಾಗದ ವಿವಿಧ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗಡಿ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಅವರೊಂದಿಗೆ ಚರ್ಚಿಸಲು ರವಿವಾರ ಸಂಜೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ಸೇರಿದ್ದ ವಿವಿಧ ಕನ್ನಡಪರ ಸಂಘಟನೆಗಳು ತೀರ್ಮಾನ ಮಾಡಿದವು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಮತ್ತು ಗಡಿ ಸಂರಕ್ಷಣಾ ಆಯೋಗದ ಪ್ರಾದೇಶಿಕ ಕಚೇರಿ ಸ್ಥಾಪನೆ, ರಾಜ್ಯ ಸರಕಾರದ ಏಳು ಕೋಟಿ ರೂಪಾಯಿ […]

ಮತ್ತಷ್ಟು ಓದಿ..

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಸ್ಥಳದಲ್ಲೇ ಮೂವರ ದುರ್ಮರಣ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ದುರ್ಮರಣಕ್ಕಿಡಾಗಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಬಳಿ ನಡೆದಿರುವ ಕಾರು ಅಪಘಾತದಲ್ಲಿ ಚಿಕ್ಕಮಗಳೂರು ಮೂಲದ ಚನ್ನೆಗೌಡ (60), ಸರೋಜಮ್ಮ (55), ಜಯಮ್ಮ (70) ಮೃತ ದುರ್ದೈವಿಗಳಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಚಿಕ್ಕಮಗಳೂರುಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಕಾರು ತಿರುವಿನಲ್ಲಿ ಡಿವೈಡರ್ ಗೆ ಡಿಕ್ಕಿ […]

ಮತ್ತಷ್ಟು ಓದಿ..

ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ನಾಳೆಯಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಗೆ ಆಗಮಿಸಿದರು. ಸುವರ್ಣ ಸೌಧದ ಹೆಲಿಪ್ಯಾಡ್ ಗೆ ಆಗಮಿಸಿದ ಸಿಎಂಗೆ ಸಚಿವರಾದ ಕೆ ಜೆ ಜಾರ್ಜ್, ಎಚ್ ಸಿ ಮಹಾದೇವಪ್ಪ ಹಾಗೂ ಕೃಷ್ಣ ಬೈರೇಗೌಡ ಸಾಥ್ ನೀಡಿದ್ದಾರೆ. ಬೆಳಗಾವಿಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಆಸೀಫ್ ಸೇಠ್, ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ, ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಸ್ವಾಗತಿಸಿದರು. ಬಳಿಕ ಸಿದ್ದರಾಮಯ್ಯ ಅವರು ಪೊಲೀಸ್ ಗೌರವ ವಂದನೆ ಸ್ವೀಕರಿಸಿ, ಪ್ರವಾಸಿ […]

ಮತ್ತಷ್ಟು ಓದಿ..

ಬೆಳಗಾವಿ ಅಧಿವೇಶನ ಪ್ರತಿಭಟನೆಯ ವೇದಿಕೆ, ಪಿಕ್‌ನಿಕ್ ಎಂಬ ಭಾವ ಸರಿಯಲ್ಲ: ಸಚಿವ ಎಚ್.ಕೆ.ಪಾಟೀಲ್

ಹುಬ್ಬಳ್ಳಿ: ಬೆಳಗಾವಿ ಅಧಿವೇಶನವು ಪ್ರತಿಭಟನೆಯ ವೇದಿಕೆ, ಪಿಕ್‌ನಿಕ್ ಎಂಬ ಭಾವದಿಂದ ನಡೆದುಕೊಳ್ಳುವುದು ಸರಿಯಲ್ಲ. ಅಧಿವೇಶನದ ಪಾವಿತ್ರ್ಯ ಮತ್ತು ಶಕ್ತಿಯನ್ನು ಕುಂದಿಸುವ ಕೆಲಸ ಆಗಬಾರದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ,  ಶಾಸಕರು ಮತ್ತು ವಿಪಕ್ಷಗಳಿಗೆ ಕರೆ ನೀಡಿದರು. ಭಾನುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಅಸಮಾನತೆ ದೂರಮಾಡಲು ಉತ್ತರ ಕರ್ನಾಟಕ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚಿಸುವ ಜವಾಬ್ದಾರಿ ಶಾಸಕರ ಮೇಲಿದೆ ಎಂದರು. ಸಾಮಾಜಿಕ ಬಹಿಷ್ಕಾರ ನಿಷೇಧ, ಧಾರ್ಮಿಕ ಸಂಸ್ಥೆಗಳ ಪರಿಣಾಮಕಾರಿ ನಿರ್ವಹಣೆ, ಹಸ್ತಪ್ರತಿಗಳ […]

ಮತ್ತಷ್ಟು ಓದಿ..

ಕ್ಷೇತ್ರದಲ್ಲಿ 151ನೇ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ

ಬೆಳಗಾವಿ ಅಧಿವೇಶನ ಮುನ್ನಾದಿನ ಗ್ರಾಮೀಣ ಕ್ಷೇತ್ರದ ಸುಳಗಾ ಗ್ರಾಮದಲ್ಲಿ ಚಾಲನೆ ಬೆಳಗಾವಿ: ಶಾಸಕರಾಗಿ ಏಳೂವರೆ ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 150 ದೇವಸ್ಥಾನಗಳ ಜೀರ್ಣೋದ್ಧಾರ ಮಾಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗುವ ಮುನ್ನಾದಿನ, ಭಾನುವಾರ ಸುಳಗಾ ಗ್ರಾಮದಲ್ಲಿ 151ನೇ ದೇವಸ್ಥಾನದ ಕಾಲಂ ಪೂಜೆ ನೆರವೇರಿಸಿದರು. ತಲಾ 25 ಲಕ್ಷ ರೂ.ಗಳಿಂದ ಆರಂಭವಾಗಿ 5 ಕೋಟಿ ರೂ.ವರೆಗಿನ ಅನುದಾನ ನೀಡುವ ಮೂಲಕ, 114 ಗ್ರಾಮಗಳನ್ನು ಒಳಗೊಂಡಿರುವ […]

ಮತ್ತಷ್ಟು ಓದಿ..

ರಮೇಶ್ ಕತ್ತಿ ಮೇಲಿನ ಜಾತಿ ನಿಂದನೆ ಕೇಸ್ – ಹುಕ್ಕೇರಿ ಗ್ರೇಡ್2 ತಹಶಿಲ್ದಾರ ವಿರುದ್ಧ ಸದನದಲ್ಲಿ ಹೋರಾಟ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಚಿಕ್ಕೋಡಿ ಮಾಜಿ ಸಂಸದ ರಮೇಶ್ ಕತ್ತಿ ಅವರ ಮೇಲಿನ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕೇರಿ ಗ್ರೇಡ್-2 ತಹಶಿಲ್ದಾರ ಮೇಲೆ ಸರಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಇದೇ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷ ನಾಯಕ ಆರ್.ಅಶೋಕ‌ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಶನಿವಾರ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಕ್ಕೇರಿ ಗ್ರೇಡ್-2 ತಹಶಿಲ್ದಾರ ವಾಲ್ಮೀಕಿ ಸಮಾಜಕ್ಕೆ ‌ಮಾಡಿರುವ ಅನ್ಯಾಯದ ಕುರಿತು ಚಳಿಗಾಲದ ‌ಅಧಿವೇಶನದಲ್ಲಿ ಸರಕಾರದ ಗಮನಕ್ಕೆ […]

ಮತ್ತಷ್ಟು ಓದಿ..

ಪ್ರತಿಷ್ಠಿತ ವೈದ್ಯೆ ಮತ್ತು ವೈದ್ಯೆಯ ಪುತ್ರ ನೆಣಿಗೆ ಶರಣು: ಈ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದು ಬರೋಬ್ಬರಿ ಐದು ಮಂದಿ

ಶಿವಮೊಗ್ಗ: ಆ ಮನೆಯಲ್ಲಿ ಬರೋಬ್ಬರಿ ಐವರು ನೇಣಿಗೆ ಶರಣಾಗಿದ್ದಾರೆ. ಇದು ಆಶ್ಚರ್ಯ ಅನ್ನಿಸಿದ್ರೂ ಸತ್ಯ. ಅದ್ರಲ್ಲೂ ನಿನ್ನೆ ತಾಯಿ ಮತ್ತು ಮಗ ಇಬ್ಬರೂ, ಒಬ್ಬರಿಗೆ ಗೊತ್ತಿಲ್ಲದೇ, ಮತ್ತೊಬ್ಬರು ನೇಣಿಗೆ ಶರಣಾಗಿದ್ದಾರೆ. ಮತ್ತೊಬ್ಬರಿಗೆ ಬುದ್ಧಿ ಹೇಳಿ, ಧೈರ್ಯ ತುಂಬಿ ತಿದ್ದಬೇಕಿದ್ದ ವೈದ್ಯೆಯೇ ನೇಣಿಗೆ ಶರಣಾಗಿರೋದು ಒಂದೆಡೆಯಾದ್ರೆ ಅಮ್ಮನ ಹತ್ರ ಜಗಳವಾಡಿಕೊಂಡ ಮಗ ಕೂಡ ನೇಣಿನ ಕುಣಿಕೆಗೆ ಕೊರಳು ಕೊಟ್ಟು ದುರಂತ ಅಂತ್ಯ ಕಂಡಿದ್ದಾರೆ. ಹೌದು, ಇಲ್ಲಿ ಥೇಟ್ ವಿಲ್ಲಾ ರೀತಿಯಲ್ಲಿ ಕಾಣುತ್ತಿರುವ ಈ ಐಷಾರಾಮಿ ಮನೆಯಲ್ಲಿ ಇದುವರೆಗೂ ಬರೋಬ್ಬರಿ […]

ಮತ್ತಷ್ಟು ಓದಿ..

ಧಾರವಾಡಕ್ಕೆ ಬಂದ ಸಾಲಿಮಠ ಪಾರ್ಥೀವ ಶರೀರ: ಅಂತಿಮ ನಮನ ಸಲ್ಲಿಸಿದ ಪೊಲೀಸ್ ಸಿಬ್ಬಂದಿ

ಧಾರವಾಡ: ಜೀವ ನೀರ ಮೇಲಿನ ಗುಳ್ಳೆ ಇದ್ದಂತೆ. ಯಾವಾಗ ಬೇಕಾದರೂ ಏನಾದರೂ ಆಗಬಹುದು ಎಂಬುದಕ್ಕೆ ಮತ್ತೊಂದು  ನಿದರ್ಶನವೇ ಪಂಚಾಕ್ಷಿರಿ ಸಾಲಿಮಠ ಅವರ ದುರಂತ ಅಂತ್ಯ. ಮೊನ್ನೆಯಷ್ಟೇ ಧಾರವಾಡದಲ್ಲೇ ಕರ್ತವ್ಯ ನಿರ್ವಹಿಸಿ ಸಾಕಷ್ಟು ಹೆಸರು ಮಾಡಿದ್ದ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ದುರಂತ ಅಂತ್ಯವಾದರೆ, ಇದೀಗ ಧಾರವಾಡದಲ್ಲೇ ಕರ್ತವ್ಯ ನಿರ್ವಹಿಸಿ ಹೋಗಿದ್ದ ಇನ್‌ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರ ಮತ್ತೊಂದು ದುರಂತ ಅಂತ್ಯವಾಗಿದೆ. ನಿನ್ನೆ ಅಣ್ಣಿಗೇರಿ ಪಟ್ಟಣದ‌ ಹೊರವಲಯದಲ್ಲಿ ದುರಂತ ಅಂತ್ಯ ಕಂಡ ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಆಗಿದ್ದ […]

ಮತ್ತಷ್ಟು ಓದಿ..

ಇಂಡಿಗೋ ವಿಮಾನ ಹಾರಾಟದಲ್ಲಿ ಏರುಪೇರು: ಐದನೇ ದಿನವೂ ನಿಲ್ಲದ ಪ್ರಯಾಣಿಕರ ಗೋಳಾಟ

ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ 5ನೇ ದಿನವೂ ವ್ಯತ್ಯಯ ಕಂಡುಬಂದಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ ಹೇಳತೀರದಾಗಿದೆ. ನೂರಾರು ಸಂಖ್ಯೆಯಲ್ಲಿ ಪ್ರಯಾಣಿರರು ವಿಮಾನ ನಿಲ್ದಾಣದಲ್ಲೇ ಸಮತ ಕಳೆಯುವಂತಾಗಿದೆ. ಈ ಕುರಿತು ಪ್ರಯಾಣಿಕರು ಮಾಧ್ಯಮಗಳ ಜೊತೆಗೆ ಮಾತನಾಡಿ ಇಂಡಿಗೋ ವಿಮಾನಯಾನ ಸಂಸ್ಥೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ವಿಮಾನ ನಿಲ್ದಾಣದ ಸಿಬ್ಬಂದಿ ತಮಗೆ ಸರಿಯಾದ ಮಾಹಿತಿ ನಿಡುತ್ತಿಲ್ಲ. ಕೊನೆಯ ಕ್ಷಣದಲ್ಲಿ ವಿಮಾನ ಹಾರಾಟ ರದ್ದಾಗಿದೆ ಅಂತಾ ಹೇಳುತ್ತಿದ್ದು, ಮುಂದಿನ ಎರಡು ದಿನಗಳಲ್ಲಿ ನಿಮ್ಮ ಹಣ ಮರುಪಾವತಿ ಆಗುತ್ತೆ […]

ಮತ್ತಷ್ಟು ಓದಿ..