ಭೀಕರ ರಸ್ತೆ ಅಪಘಾತ ಸಿಪಿಐ ಪಂಚಾಕ್ಷರಿ ಸಾಲಿಮಠ ಸಜೀವ ದಹನ: ಕಂಬನಿ ಮಿಡಿದ ಪೊಲೀಸ್ ಇಲಾಖೆ

ಧಾರವಾಡ: ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಅಣ್ಣಿಗೇರಿ ಹೊರವಲಯದಲ್ಲಿ ನಡೆದಿದೆ. ಪ್ರಸ್ತುತ ಹಾವೇರಿಯಲ್ಲಿ ಲೋಕಾಯುಕ್ತ ಸಿಪಿಐ ಆಗಿ ಕರ್ತವ್ಯದಲ್ಲಿದ್ದ 2003 ರ ಬ್ಯಾಚ್ ನ ದಕ್ಷ ಅಧಿಕಾರಿ ಪಂಚಾಕ್ಷರಿ ಸಾಲೀಮಠ ಮೃತ ದುರ್ದೈವಿಯಾಗಿದ್ದು, ಕರ್ನಾಟಕ ಪೊಲೀಸ್ ಇಲಾಖೆ ಸೇರಿದಂತೆ ಪಂಚಾಕ್ಷರಿ ಸಾಲಿಮಠ ಅವರ ಆಪ್ತ ವರ್ಗ ಕಂಬನಿ ಮಿಡಿದಿದೆ. ಬೈಲಹೊಂಗಲ, ಗದಗ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವೆಡೆ ಕರ್ತವ್ಯ ನಿರ್ವಹಿಸಿದ್ದ ಇವರು ಸಧ್ಯ ಹಾವೇರಿಯ ಲೋಕಾಯುಕ್ತ ಸಿಪಿಐ […]

ಮತ್ತಷ್ಟು ಓದಿ..

ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ: ಪೂಜೆ ಸಲ್ಲಿಸಿದ ಮೃಣಾಲ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಸರಸ್ವತಿ ನಗರ, ಲಕ್ಷ್ಮೀ ಟೆಕಡಿ, ಫ್ರೀಡಂ ಫೈಟರ್ಸ್ ಕಾಲೋನಿ ಹಾಗೂ ಶಿವನೇರಿ ಕಾಲೋನಿಯ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಆಸಕ್ತಿಯಿಂದ ಮಂಜೂರಾಗಿರುವ ಸುಮಾರು 1 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು. ಈ ವೇಳೆ ಮೋಹನ್ […]

ಮತ್ತಷ್ಟು ಓದಿ..

ನಮ್ಮೂರ ಶಾಲೆ ಮುಚ್ಚಲು ಬಿಡುವುದಿಲ್ಲ: ಸರ್ಕಾರಕ್ಕೆ ಸೆಡ್ಡು ಹೊಡೆದ ಹೊನ್ನಿಹಾಳ ಗ್ರಾಮಸ್ಥರು

ಬೆಳಗಾವಿ: ಏಳು ದಶಕಗಳಿಗೂ ಹಿರಿದಾದ ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ‌ ಎಂದು ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮಸ್ಥರು ಊರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬೇಕೆ ಬೇಕು ನ್ಯಾಯ ಬೇಕು ಅಂತ ತಮ್ಮೂರಿನ ಶಾಲೆಯ ಉಳಿವಿಗಾಗಿ ಸರ್ಕಾರದ ವಿರುದ್ಧ ಒಕ್ಕೊರಲಿನಿಂದ ಧ್ವನಿಯೆತ್ತಿದರು. ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಬಾಳೆಕುಂದ್ರಿ ಬಿಕೆ ಉರ್ದು […]

ಮತ್ತಷ್ಟು ಓದಿ..

ದೆಹಲಿಯಲ್ಲಿ ಆಕ್ಟೀವ್ ಆದ ರೆಬೆಲ್ ಟಿಂ: ಬದಲಾಗುತ್ತಾ ವಿಜಯೇಂದ್ರ ರಾಜ್ಯಾಧ್ಯಕ್ಷ ಪಟ್ಟ.!?

ದೆಹಲಿ: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ರಾಜಕೀಯ ಚದುರಂಗದಾಟ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿತಾ ಅನ್ನೋ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ಸದ್ದಿಲ್ಲದೇ ಗದ್ದಲವೇಬಿಸಿದೆ. ಕಾಂಗ್ರೆಸ್‌ನಲ್ಲಿ ಸಿಎಂ ಖುರ್ಚಿ ಕದನ ಮುನ್ನೆಲೆಯಲ್ಲಿರುವಾಗಲೇ ರಾಜ್ಯ ಬಿಜೆಪಿಯಲ್ಲೂ ರೆಬೆಲ್ಸ್ ನಾಯಕರ ಟೀಮ್ ಮತ್ತೆ ಸಕ್ರಿಯವಾಗಿದೆ. ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಕುಮಾರ್ ಬಂಗಾರಪ್ಪ, ಶ್ರೀಮಂತ್ ಪಾಟೀಲ್, ಬಿ.ವಿ. ನಾಯಕ್, ಬಿ.ಪಿ. ಹರೀಶ್, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಮತ್ತು ಎನ್.ಆರ್. ಸಂತೋಷ್ ಸೇರಿದಂತೆ ಹಲವು ನಾಯಕರು ದೆಹಲಿಗೆ ತೆರಳಿದ್ದು, ಕೇಂದ್ರ ಗೃಹ ಸಚಿವ […]

ಮತ್ತಷ್ಟು ಓದಿ..

ಪಂಚ ಗ್ಯಾರಂಟಿ ಕಾರ್ಯಗಾರ: ಫಲಾನುಭವಿಗಳ ಪ್ರಗತಿ ಸಮಾವೇಶ

ಬೆಳಗಾವಿ, ನ.30(ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರ ಬಡವರ ಪರವಾಗಿದ್ದು, ಸುಮಾರು 70 ವರ್ಷಗಳಿಂದ ಪ್ರತಿ ಸರ್ಕಾರದ ಅವಧಿಯಲ್ಲಿ ಭೂಮಿ ಮಂಜೂರು, ಶೈಕ್ಷಣಿಕ ಪ್ರಗತಿ, ಸಾರಿಗೆ ವ್ಯವಸ್ಥೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಸ್ತುತ ರಾಜ್ಯ ಸರ್ಕಾರದ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶಕ್ಕೆ ಮಾದರಿಯಾಗಿದೆ ಎಂದು ಲೋಕೋಪಯೋಗಿ ಹಾಗೂ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ನಗರದ ಕುಮಾರ ಗಂದರ್ವ ರಂಗಂಮದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಇವರ ಸಹಯೋಹದಲ್ಲಿ ರವಿವಾರ (ನ.30) ಜರುಗಿದ […]

ಮತ್ತಷ್ಟು ಓದಿ..

ಹಾಸ್ಯ ನಟ ಉಮೇಶ್ ರವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಬೆಂಗಳೂರು, ನವೆಂಬರ್ 30 : ಸುಮಾರು 900 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಖ್ಯಾತ ಹಾಸ್ಯ ನಟರಾಗಿದ್ದ ಉಮೇಶ್ ರವರ ನಿಧನದಿಂದ ದು:ಖ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು. ಅವರು ಇಂದು ಚಲನಚಿತ್ರ ನಟ ಉಮೇಶ್ ರವರ ಪಾರ್ಥೀವ ಶರೀರವನ್ನು ದರ್ಶನ ಮಾಡಿ ಕುಟುಂಬಕ್ಕೆ ಸಾಂತ್ವನ ತಿಳಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ರವರು ನಿಧನರಾಗಿದ್ದಾರೆ. ಮೈಸೂರಿನವರಾದ ಉಮೇಶ್ ರವರು ತಮ್ಮ ಕಿರಿಯ ವಯಸ್ಸಿನಲ್ಲಿಯೇ ರಂಗಭೂಮಿಯ ನಟರಾಗಿ, ನಂತರ […]

ಮತ್ತಷ್ಟು ಓದಿ..

ಮಾರಕಾಸ್ತ್ರದಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ಮಂಡ್ಯ: ಮಂಡ್ಯದಲ್ಲಿ ರೌಡಿ ಶೀಟರ್ ಒಬ್ಬನ ಬರ್ಬರ ಹತ್ಯೆಯಾಗಿದೆ. ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಲಕ್ಷ್ಮೀ ಸಾಗರ ಗ್ರಾಮದ ಮಹೇಶ್ (26) ಕೊಲೆಯಾದ ರೌಡಿ ಶೀಟರ್ ಆಗಿದ್ದು, ತಡರಾತ್ರಿ ಬಾರ್ ನಲ್ಲಿ ಯುವಕರ ನಡುವೆ ನಡೆದ ಘರ್ಷಣೆ ಕೊಲೆಯಲ್ಲಿ ಅಂತ್ಯವಾಗಿದೆ. ಬಾರ್ ನಲ್ಲಿ ನಡೆದ ಗಲಾಟೆ ಬಳಿಕ ಅಮೃತಿ ಗ್ರಾಮದ ಹೆದ್ದಾರಿ ಬಳಿ ರೌಡಿಶೀಟರ್ ಮಹೇಶ್ ಕೊಲೆಯಾಗಿದ್ದು, ಮಾರಕಾಸ್ತ್ರದಿಂದ ಕೊಚ್ಚಿ, ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಡರಾತ್ರಿ ನಡೆದ ಕೊಲೆಗೆ ಇಡಿ […]

ಮತ್ತಷ್ಟು ಓದಿ..

ಮುತ್ನಾಳ ಶಿವಾನಂದ ಶಿವಾಚಾರ್ಯ ಶ್ರೀ ನಿಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಬೆಳಗಾವಿ: ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದಲ್ಲಿರುವ ಕೇದಾರ ಪೀಠದ ಶಾಖಾ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಇಂದು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಕೆಲ ದಿನಗಳಿಂದ ಸ್ವಾಮಿಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸ್ವಾಮೀಜಿ ನಿಧನಕ್ಕೆ ಹಲವು ಮಠಾದೀಶರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಸ್ವಾಮಿಜಿ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಮುತ್ನಾಳ ಗ್ರಾಮದ ಕೇದಾರ್ ಶಾಖಾ ಪೀಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ಮನಸ್ಸಿಗೆ ಅತೀವ ನೋವು ತಂದಿದೆ. ಪೂಜ್ಯರ ಅಗಲಿಕೆ ಕೇವಲ ಮುತ್ನಾಳ ಗ್ರಾಮಕ್ಕೆ […]

ಮತ್ತಷ್ಟು ಓದಿ..

ಡಿ.1 ಉದ್ಯೋಗಾಂಕ್ಷಿಗಳ ಧಾರವಾಡ ಚಲೋ ಹೋರಾಟ: ಅನುಮತಿ ನಿರಾಕರಿಸಿದ ಪೊಲೀಸ್ ಇಲಾಖೆ

ಧಾರವಾಡ: ರಾಜ್ಯ ಸರ್ಕಾರ ಯಾವುದೇ ಸರ್ಕಾರಿ ಉದ್ಯೋಗಗಳ ನೇಮಕಾತಿ ಮಾಡಿಕೊಳ್ಳುತ್ತಿಲ್ಲ ಮತ್ತು ವಯೋಮಿತಿ ಸಡಿಲಿಕೆ ಕೂಡ ಮಾಡುತ್ತಿಲ್ಲ ಎಂದು ಸರ್ಕಾರದ ವಿರುದ್ದ ರೊಚ್ಚಿಗೆದ್ದಿರುವ ವಿದ್ಯಾರ್ಥಿ ಸಂಘಟನೆ ಮತ್ತು ಸಾವಿರಾರು ಉದ್ಯೋಗಾಕಾಂಕ್ಷಿಗಳು ನಾಳೆ ಡಿಸೆಂಬರ್ 1ನೇ ತಾರೀಖಿನಂದು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ಆಯೋಜನೆ ಮಾಡಲು ಮುಂದಾಗಿದ್ದು, ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ. ಡಿಸೆಂಬರ್ 1 ಕ್ಕೆ ಧಾರವಾಡ ಚಲೋ‌ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ಆಯೋಜನೆ ಮಾಡಿ ಈ ಕುರಿತು ಸಾಮಾಜಿಕ ಜಾಲ ತಾಣದಲ್ಲಿ ಕರೆ ನೀಡಲಾಗಿದೆ. ವಯೋಮಿತಿ ಸಡಿಲಿಕೆ, […]

ಮತ್ತಷ್ಟು ಓದಿ..

ಮಂಡ್ಯ ಭೂವರಾಹನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ ದಂಪತಿ: ತಿಹಾರ ಜೈಲು ನೆನೆದ ಡಿಸಿಎಂ

ಮಂಡ್ಯ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ಮಂಡ್ಯ ಜಿಲ್ಲೆಯ ಸುಪ್ರಸಿದ್ಧ ಭೂವರಾಹನಾಥ ದೇವಾಲಯಕ್ಕೆ ದಂಪತಿ ಸಮೇತ ಭೇಟಿ ನೀಡಿ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದ ಡಿಕೆಶಿ ಭೂವರಾಹನಾಥ ದೇವಾಲಯದ ಹಿನ್ನೆಲೆ ಮತ್ತು ತಮ್ಮ ವೈಯಕ್ತಿಕ ಅನುಭವಗಳನ್ನು ಮೆಲುಕು ಹಾಕಿದ್ರು. ಭೂವರಾಹನಾಥ ದೇವಾಲಯಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ದಂಪತಿ ವಿವಿಧ ಪೂಜಾ ಕಾರ್ಯಗಳಲ್ಲಿ ಭಾಗಿಯಾದರು. ಪೂಜೆಯ ಭಾಗವಾಗಿ ಹೋಮ ಕುಂಡಕ್ಕೆ ಪೂರ್ಣಾಹುತಿ ಸಲ್ಲಿಸಿದ […]

ಮತ್ತಷ್ಟು ಓದಿ..