ವಿಶೇಷಚೇತನರಿಗೆ ಪ್ರತ್ಯೇಕ ನಿಗಮ/ಮಂಡಳಿ ರಚನೆಗೆ ಮುಖ್ಯಮಂತ್ರಿಗೆ ಸಚಿವ ಸಂತೋಷ್ ಲಾಡ್ ಪತ್ರ

ಬೆಂಗಳೂರು: ಸರ್ಕಾರದ ಸವಲತ್ತುಗಳನ್ನು ತ್ವರಿತವಾಗಿ ಮತ್ತು ನೇರವಾಗಿ ತಲುಪಿಸಲು ಸಾಧ್ಯವಾಗುವಂತೆ ವಿಶೇಷ ಚೇತನರಿಗಾಗಿಯೇ ಒಂದು ಪ್ರತ್ಯೇಕ ನಿಗಮ ಅಥವಾ ಮಂಡಳಿಯ ಸ್ಥಾಪನೆಯ ಅಗತ್ಯವಿದೆ ಎಂದು ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಪ್ರತಿಪಾದಿಸಿದ್ದಾರೆ. ಈ ವಿಷಯದ ಸಂಬಂಧ ಶುಕ್ರವಾರ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿರುವ ಸಚಿವರು, ಸದ್ಯ ವಿಶೇಷಚೇತನರ ಇಲಾಖೆಯು ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರನ್ನು ಒಳಗೊಂಡ ಇಲಾಖೆಯಲ್ಲಿ ಇರುವುದರಿಂದ, ಈ ಇಲಾಖೆಯು ಬಹಳ […]

ಮತ್ತಷ್ಟು ಓದಿ..

ಸಿಎಂ ಖುರ್ಚಿ ಕದನ ಉಭಯ ನಾಯಕರ ಜಂಟಿ ಸುದ್ದಿಗೋಷ್ಠಿ: ರಾಜಕೀಯ ಮೇಲಾಟಕ್ಕೆ ತಾತ್ಕಾಲಿಕ ವಿರಾಮ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ ತೆರಳಿ ಬ್ರೇಕ್ ಫಾಸ್ಟ್ ಮೀಂಟಿಂಗ್ ನಲ್ಲಿ ಭಾಗವಹಿಸಿದರು. ಇದೇ ವೇಳೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಸಿಎಂ ಅವರನ್ನು ಸಿಎಂ ಸಿದ್ದರಾಮಯ್ಯ ಬರಮಾಡಿಕೊಂಡರು. ಸಿಎಂ ನಿವಾಸದಲ್ಲೇ ಉಭಯ ನಾಯಕರು ಉಪಹಾರ ಮಾಡುತ್ತ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ಬ್ರೇಕ್ ಫಾಸ್ಟ್ ಮುಗಿಸಿ ಉಭಯ ನಾಯಕರು ನಗುನಗುತ್ತಲೇ ಹೊರಬಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರೊಂದಿಗೆ ಮಾತನಾಡಿದರು. ನಾನು, ಡಿ.ಕೆ.ಶಿವಕುಮಾರ್ ಹಾಗೂ ಪೊನ್ನಣ್ಣ ಬ್ರೇಕ್ […]

ಮತ್ತಷ್ಟು ಓದಿ..

ಸುಕ್ಷೇತ್ರ ಕೊಣ್ಣೂರ-ಮರಡಿಮಠದ ಶ್ರೀ ಕಾಡಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಬೆಳಗಾವಿ: ಪ್ರತಿ ವರ್ಷದಂತೆ ಈ ವರ್ಷ ಕೂಡ ಲಿಂಗೈಕ್ಯ ಶ್ರೀಮದ್ ಜಗದ್ಗುರು ಶ್ರೀ ಘನಲಿಂಗ ಚಕ್ರವರ್ತಿ ಡಾ. ಶ್ರೀ ಅದೃಶ್ಯ ಗುರುಸಿದ್ದೇಶ್ವರ ಮಹಾಸ್ವಾಮಿಗಳವರ ಆಶೀರ್ವಾದದಿಂದ ಹಾಗೂ ಶ್ರೀ ಮ, ಘ, ಚ, ಡಾ. ಪವಾಡೇಶ್ವರ ಮಹಾಸ್ವಾಮಿಗಳವರ ದಿವ್ಯ ಸನ್ನಿದಿಯಲ್ಲಿ ವಿಜೃಂಭಣೆಯಿಂದ ಜರಗುವ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸುಕ್ಷೇತ್ರ ಕೊಣ್ಣೂರ ಮರಡಿಮಠದ ಆರಾಧ್ಯ ದೈವ ಶ್ರೀ ಕಾಡಸಿದ್ದೇಶ್ವರ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಕಾರ್ತಿಕ ಮಹೋತ್ಸವಕ್ಕೆ ಅದ್ದೂರಿ ಚಾಲನೆ ಸಿಕ್ಕದೆ. ದಿನಾಂಕ 28-11-2025 ರಿಂದ 02-12-2025 ಒಟ್ಟು […]

ಮತ್ತಷ್ಟು ಓದಿ..

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಮಹಾತ್ವಾಕಾಂಕ್ಷೆಯ 3 ಯೋಜನೆಗಳು ಲೋಕಾರ್ಪಣೆ: ಸಿಎಂ, ಡಿಸಿಎಂ ರಿಂದ ಚಾಲನೆ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಕನಸಿನ ಯೋಜನೆಗಳಾದ ಅಕ್ಕ ಪಡೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಅದ್ದೂರಿ ಸಮಾರಂಭದಲ್ಲಿ ಚಾಲನೆ ನೀಡಿದರು. ಅರಮನೆ ಮೈದಾನದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ […]

ಮತ್ತಷ್ಟು ಓದಿ..

“ಶಾಲೆಯ ಅಂಗಳದಲ್ಲಿ ತಾರಾಲಯ” ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ: “ಗ್ರಾಮೀಣ ಮಕ್ಕಳಲ್ಲಿ ವಿಜ್ಞಾನ ಕೌತುಕ ಬಿತ್ತುವುದು ನಮ್ಮ ಗುರಿ”

ಬೆಂಗಳೂರು, ನವೆಂಬರ್ 27: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿಜ್ಞಾನ ಶಿಕ್ಷಣವನ್ನು ತಲುಪಿಸುವ ಮಹತ್ವಾಕಾಂಕ್ಷಿ “ಶಾಲೆಯ ಅಂಗಳದಲ್ಲಿ ತಾರಾಲಯ” ಡಿಜಿಟಲ್ ಮೊಬೈಲ್ ಪ್ಲಾನೆಟೇರಿಯಂ ಯೋಜನೆಗೆ ಇಂದು ವಿಧಾನಸೌಧದ ಆವರಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಸಿರು ನಿಶಾನೆ ತೋರಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು, “ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿ, ವಿಜ್ಞಾನ ಕಲಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಈ ಯೋಜನೆ […]

ಮತ್ತಷ್ಟು ಓದಿ..

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಕ್ಕಿನಕೇರಿ ಗ್ರಾಮದಲ್ಲಿ ಸುಮಾರು 2 ಕೋಟಿ 60 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ರಸ್ತೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಯುವರಾಜ ಕದಂ, ಗ್ರಾಮದ ಹಿರಿಯ ನಾಗರಿಕರು, ಸ್ಥಳೀಯ ಜನಪ್ರತಿನಿಧಿಗಳು, ನಿವಾಸಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

ಮತ್ತಷ್ಟು ಓದಿ..

ರಾಜ್ಯದಲ್ಲಿ ಮಾನ್ಸೂನ್ ಅವಧಿಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆ ಹಾನಿ: ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಸರ್ಕಾರ

ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದ ಸಿಎಂ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಚಾಲನೆ ಬೆಂಗಳೂರು: ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾಲನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ. 1033.60 ಕೋಟಿ […]

ಮತ್ತಷ್ಟು ಓದಿ..

ಭೀಕರ ಅಪಘಾತ ಐಎಎಸ್‌ ಅಧಿಕಾರಿ ಮಹಾಂತೇಶ ಬಿಳಗಿ ದುರ್ಮರಣ: ರಾಮದುರ್ಗದ ಮನೆಯಲ್ಲಿ ನೀರವ ಮೌನ

ಕಲಬುರಗಿ: ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬಿಳಗಿ ದುರ್ಮರಣಕ್ಕಿಡಾಗಿದ್ದಾರೆ. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿಯ ಗೌನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಾಂತೇಶ್‌ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯವರಾದ 2012 ಬ್ಯಾಚಿನ ಅಧಿಕಾರಿಯಾಗಿದ್ದ ಮಹಾಂತೇಶ ಬಿಳಗಿ ಕರ್ನಾಟಕ ಸ್ಟೇಟ್‌ ಮಿನರಲ್ಸ್‌ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ವಿಜಯಪುರದಿಂದ ಸಂಬಂಧಿಕರ ಮದುವೆಗೆ ತೆರಳುತ್ತಿದ್ದ ವೇಳೆ ಇವರು ಪ್ರಯಾಣಿಸುತ್ತಿದ್ದ ಇನ್ನೊವಾ ಕಾರು ಅಪಘಾತವಾಗಿದೆ. ಮೂಲಗಳ ಪ್ರಕಾರ ಮಹಾಂತೇಶ ಬಿಳಗಿ ಅವರೊಂದಿಗೆ […]

ಮತ್ತಷ್ಟು ಓದಿ..

2028ರಲ್ಲಿ ಪುನಃ ಕಾಂಗ್ರೆಸ್ ಅಧಿಕಾರಕ್ಕೆ ತರುವುದೇ ನಮಗೆ ಮುಖ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಸದ್ಯದ ರಾಜಕೀಯ ಬೆಳವಣಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಅದೇನಿದ್ದರೂ ಹೈಕಮಾಂಡ್‌ ಗೆ ಬಿಟ್ಟ ವಿಚಾರ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವುದೇ ನಮಗೆಲ್ಲರಿಗೂ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕ‌ರ್ ಹೇಳಿದರು. ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಕಾರ್ಯಕ್ರಮದ ಸಿದ್ಧತೆಯಲ್ಲಿ […]

ಮತ್ತಷ್ಟು ಓದಿ..

ನಾಲ್ಕನೇಯದು ಹೆಣ್ಣೆಂದು ಕತ್ತು ಹಿಸುಕಿ ಮೂರು ದಿನದ ಹಸುಳೆಯನ್ನ ಕೊಲೆಗೈದ ಪಾಪಿತಾಯಿ: ರಾಮದುರ್ಗ ಪೊಲೀಸರಿಂದ ಕೊಲೆಗಡುಕಿ ಬಂಧನ

ಬೆಳಗಾವಿ: ಬೆಳಗಾವಿಯಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದು ಹೋಗಿದೆ. ಮೂರು ದಿನದ ಹೆಣ್ಣು ಕಂದಮ್ಮನನ್ನ ಕತ್ತುಹಿಸಿಕಿ ಕೊಲೆ ಮಾಡಲಾಗಿದೆ. ಹೆತ್ತವಳೇ ಕಂದಮ್ಮಳನ್ನ ಕೊಂದಿದ್ದು ಪಾಪಿ ಕೊಲೆಗಾರ್ತಿ ತಾಯಿಯನ್ನ ಪೊಲೀಸರು ವಶಕ್ಕೆ ಪಡೆದು ಜೈಲಿಗಟ್ಟಲಿದ್ದಾರೆ. ಗಡಿಜಿಲ್ಲೆ ಬೆಳಗಾವಿಯಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವ, ಎಂಥವರ ಎದೆಯೂ ಝಲ್ ಎನ್ನಿಸುವಂತಹ ಹೃದಯವಿದ್ರಾವಕ ಘಟನೆ ನಡೆದಿದೆ. ನೀವು ಹೀಗೆ ಮೇಲೆ ನೋಡಿರೋ ಪೋಟೋ ನವಜಾತ ಹೆಣ್ಣು ಶಿಶುವಿನದ್ದು. ಕಳೆದ ಮೂರು ದಿನಗಳ ಹಿಂದೆಯಷ್ಟೇ ತಾಯಿ‌ ಗರ್ಭದಿಂದ ಜನ್ಮ ಪಡೆದಿದ್ದ ಹಸುಗುಸಿನ ಕೊಲೆಯಾಗಿದ್ದು, […]

ಮತ್ತಷ್ಟು ಓದಿ..