ಬಿಜೆಪಿಗರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಾಪ್ರಹಾರ ನಡೆಸಿದರು. ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ರೈತರ ಬಗ್ಗೆ ಬಿಜೆಪಿಯವರಿಗೆ ಕರುಣೆ ಬಂದ ಹಾಗೆ ಇದೆ. ರೈತರ ಪರವಾಗಿ ಬಿಜೆಪಿ ಯವರು ಏನು‌ ಮಾಡಿದ್ದಾರೆ ಅಂತ ಒಂದು ಪಟ್ಟಿ ಬಿಡುಗಡೆ ಮಾಡಲಿ.‌ ಅವರಿಗೆ ನಾಚಿಕೆ ಆಗಬೇಕು. […]

ಮತ್ತಷ್ಟು ಓದಿ..

ತ್ರಿವರ್ಣ ಧ್ವಜ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 9: ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಿ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು […]

ಮತ್ತಷ್ಟು ಓದಿ..

ಬೆಳಗಾವಿ ಮೃಗಾಲಯದ ಕೃಷ್ಣಮೃಗ ವಿಭಾಗಕ್ಕೆ ಖಂಡ್ರೆ ಭೇಟಿ: ವನ್ಯಮೃಗಗಳ ಬಗ್ಗೆ ಹೆಚ್ಚಿನ ಕಾಳಜಿಗೆ ಸೂಚನೆ

ಬೆಳಗಾವಿ, ಡಿ.8: ಗಳಲೆ ರೋಗದಿಂದ 31 ಕೃಷ್ಣಮೃಗಗಳು ಸಾವನ್ನಪ್ಪಿದ ಭೂತರಾಮನಹಟ್ಟಿ, ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಇಂದು ಭೇಟಿ ನೀಡಿ ಪರಿಶೀಲಿಸಿದ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ವನ್ಯಜೀವಿಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಸೂಚಿಸಿದರು. ಕೃಷ್ಣಮೃಗಗಳ ವಿಭಾಗಕ್ಕೆ ಭೇಟಿ ನೀಡಿ ಪಶುವೈದ್ಯರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಮೃಗಾಲಯದಲ್ಲಿರುವ ಎಲ್ಲ ಪ್ರಾಣಿಗಳ ಆರೋಗ್ಯದ ಬಗ್ಗೆ ನಿಗಾ ಇಡಲು ಮತ್ತು ಲಸಿಕೆಗಳನ್ನು ನೀಡಲು ಸೂಚಿಸಿದರು.ಈ ಸಂದರ್ಭದಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ […]

ಮತ್ತಷ್ಟು ಓದಿ..

ಡಿಸೆಂಬರ್ 9ರಂದು ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಪ್ರದರ್ಶನ

ಬೆಳಗಾವಿ, ಡಿಸೆಂಬರ್ 8 (ಕರ್ನಾಟಕ ವಾರ್ತೆ): ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಡಿಸೆಂಬರ್ 9 ನಾಳೆ ಬೆಳಿಗ್ಗೆ 9.30 ಗಂಟೆಗೆ ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪ್ರದರ್ಶಿಸಲಾಗುವುದು. ಕಲಬುರ್ಗಿ ಜಿಲ್ಲೆಯ ಕಾಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಲ್ಪಟ್ಟಿರುವ ಈ ಕೆಲಸ ಮತ್ತೊಮ್ಮೆ ಐತಿಹಾಸಿಕವಾಗಲಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ […]

ಮತ್ತಷ್ಟು ಓದಿ..

ನಾಗನೂರು ರುದ್ರಾಕ್ಷಿ ಮಠದ ಯುವ ವಿಜ್ಞಾನಿ ಕೇಂದ್ರಕ್ಕೆ ಸಚಿವ ಎಂ ಬಿ ಪಾಟೀಲ ಚಾಲನೆ

ಬೆಳಗಾವಿ: ಇಲ್ಲಿನ ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೆ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಶೋಧನೆ ನಡೆಸಲು ಹಾಗೂ ತರಬೇತಿ ನೀಡುವ ಉದ್ದೇಶದಿಂದ ನಿರ್ಮಿಸಿರುವ ‘ಸ್ಟೆಮ್-ಎಚ್’ (STEAM-H) ಯುವವಿಜ್ಞಾನಿ ಕೇಂದ್ರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಉದ್ಘಾಟಿಸಿದರು. ಮಠದ ಲಿಂಗೈಕ್ಯ ಡಾ.ಶಿವಬಸವ ಮಹಾಸ್ವಾಮಿಗಳ 136ನೇ ಜಯಂತಿ ಮಹೋತ್ಸವದಲ್ಲಿ ಅವರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಬೆಳಗಾವಿ ಭಾಗದಲ್ಲಿ ನಾಗನೂರು ರುದ್ರಾಕ್ಷಿ ಮಠಕ್ಕೆ ಭವ್ಯ ಪರಂಪರೆ […]

ಮತ್ತಷ್ಟು ಓದಿ..

ಗಡಿ ಭಾಗದ ಸಮಸ್ಯೆಗಳ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಭೇಟಿಗೆ ಕನ್ನಡ ಸಂಘಟನೆಗಳ ನಿರ್ಧಾರ

ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಗಡಿ ಭಾಗದ ವಿವಿಧ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗಡಿ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಅವರೊಂದಿಗೆ ಚರ್ಚಿಸಲು ರವಿವಾರ ಸಂಜೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ಸೇರಿದ್ದ ವಿವಿಧ ಕನ್ನಡಪರ ಸಂಘಟನೆಗಳು ತೀರ್ಮಾನ ಮಾಡಿದವು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಮತ್ತು ಗಡಿ ಸಂರಕ್ಷಣಾ ಆಯೋಗದ ಪ್ರಾದೇಶಿಕ ಕಚೇರಿ ಸ್ಥಾಪನೆ, ರಾಜ್ಯ ಸರಕಾರದ ಏಳು ಕೋಟಿ ರೂಪಾಯಿ […]

ಮತ್ತಷ್ಟು ಓದಿ..

ಕ್ಷೇತ್ರದಲ್ಲಿ 151ನೇ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ

ಬೆಳಗಾವಿ ಅಧಿವೇಶನ ಮುನ್ನಾದಿನ ಗ್ರಾಮೀಣ ಕ್ಷೇತ್ರದ ಸುಳಗಾ ಗ್ರಾಮದಲ್ಲಿ ಚಾಲನೆ ಬೆಳಗಾವಿ: ಶಾಸಕರಾಗಿ ಏಳೂವರೆ ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 150 ದೇವಸ್ಥಾನಗಳ ಜೀರ್ಣೋದ್ಧಾರ ಮಾಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗುವ ಮುನ್ನಾದಿನ, ಭಾನುವಾರ ಸುಳಗಾ ಗ್ರಾಮದಲ್ಲಿ 151ನೇ ದೇವಸ್ಥಾನದ ಕಾಲಂ ಪೂಜೆ ನೆರವೇರಿಸಿದರು. ತಲಾ 25 ಲಕ್ಷ ರೂ.ಗಳಿಂದ ಆರಂಭವಾಗಿ 5 ಕೋಟಿ ರೂ.ವರೆಗಿನ ಅನುದಾನ ನೀಡುವ ಮೂಲಕ, 114 ಗ್ರಾಮಗಳನ್ನು ಒಳಗೊಂಡಿರುವ […]

ಮತ್ತಷ್ಟು ಓದಿ..

ರಮೇಶ್ ಕತ್ತಿ ಮೇಲಿನ ಜಾತಿ ನಿಂದನೆ ಕೇಸ್ – ಹುಕ್ಕೇರಿ ಗ್ರೇಡ್2 ತಹಶಿಲ್ದಾರ ವಿರುದ್ಧ ಸದನದಲ್ಲಿ ಹೋರಾಟ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಚಿಕ್ಕೋಡಿ ಮಾಜಿ ಸಂಸದ ರಮೇಶ್ ಕತ್ತಿ ಅವರ ಮೇಲಿನ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕೇರಿ ಗ್ರೇಡ್-2 ತಹಶಿಲ್ದಾರ ಮೇಲೆ ಸರಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಇದೇ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷ ನಾಯಕ ಆರ್.ಅಶೋಕ‌ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಶನಿವಾರ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಕ್ಕೇರಿ ಗ್ರೇಡ್-2 ತಹಶಿಲ್ದಾರ ವಾಲ್ಮೀಕಿ ಸಮಾಜಕ್ಕೆ ‌ಮಾಡಿರುವ ಅನ್ಯಾಯದ ಕುರಿತು ಚಳಿಗಾಲದ ‌ಅಧಿವೇಶನದಲ್ಲಿ ಸರಕಾರದ ಗಮನಕ್ಕೆ […]

ಮತ್ತಷ್ಟು ಓದಿ..

ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ: ಪೂಜೆ ಸಲ್ಲಿಸಿದ ಮೃಣಾಲ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಸರಸ್ವತಿ ನಗರ, ಲಕ್ಷ್ಮೀ ಟೆಕಡಿ, ಫ್ರೀಡಂ ಫೈಟರ್ಸ್ ಕಾಲೋನಿ ಹಾಗೂ ಶಿವನೇರಿ ಕಾಲೋನಿಯ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಆಸಕ್ತಿಯಿಂದ ಮಂಜೂರಾಗಿರುವ ಸುಮಾರು 1 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು. ಈ ವೇಳೆ ಮೋಹನ್ […]

ಮತ್ತಷ್ಟು ಓದಿ..

ನಮ್ಮೂರ ಶಾಲೆ ಮುಚ್ಚಲು ಬಿಡುವುದಿಲ್ಲ: ಸರ್ಕಾರಕ್ಕೆ ಸೆಡ್ಡು ಹೊಡೆದ ಹೊನ್ನಿಹಾಳ ಗ್ರಾಮಸ್ಥರು

ಬೆಳಗಾವಿ: ಏಳು ದಶಕಗಳಿಗೂ ಹಿರಿದಾದ ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ‌ ಎಂದು ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮಸ್ಥರು ಊರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬೇಕೆ ಬೇಕು ನ್ಯಾಯ ಬೇಕು ಅಂತ ತಮ್ಮೂರಿನ ಶಾಲೆಯ ಉಳಿವಿಗಾಗಿ ಸರ್ಕಾರದ ವಿರುದ್ಧ ಒಕ್ಕೊರಲಿನಿಂದ ಧ್ವನಿಯೆತ್ತಿದರು. ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಬಾಳೆಕುಂದ್ರಿ ಬಿಕೆ ಉರ್ದು […]

ಮತ್ತಷ್ಟು ಓದಿ..