ಕಲ್ಲು ಹೃದಯದ ತಾಯಿ! ಕಸದಲ್ಲಿದ್ದ ಮಗುವಿಗೆ ಮರುಜನ್ಮ ನೀಡಿದ ಕುರಿಗಾಯಿಗಳು

ಬೆಳಗಾವಿ: ಹೆತ್ತ ಕರುಳನ್ನೇ ಕಸದ ತೊಟ್ಟಿಗೆ ಎಸೆಯುವ ಕಲಿಯುಗದ ಕ್ರೂರ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದ್ದು, ನವಜಾತ ಗಂಡು ಶಿಶುವನ್ನು ಬ್ರಿಡ್ಜ್ ಕೆಳಗೆ ಎಸೆದು ಹೋದ ಅಮಾನವೀಯ ಕೃತ್ಯವೊಂದು ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಿತ್ತೂರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಲ್ಲು ಹೃದಯದ ತಾಯಿಯೊಬ್ಬಳು ತಾನು ಹೆತ್ತ ಮಗುವನ್ನು ರಸ್ತೆಯ ಪಕ್ಕದ ಕಸದಲ್ಲಿ ಎಸೆದು ಪರಾರಿಯಾಗಿದ್ದಾಳೆ. ಕುರಿಗಾಯಿಗಳ ಸಮಯಪ್ರಜ್ಞೆ: ಮಗುವಿಗೆ ಮರುಜನ್ಮ ಕಿತ್ತೂರು-ನರಗುಂದ ರಸ್ತೆಯ ಬಸವಣಕಟ್ಟಿ ಬ್ರಿಡ್ಜ್ ಕೆಳಗಡೆ ಈ ನವಜಾತ ಶಿಶುವನ್ನು ಎಸೆಯಲಾಗಿತ್ತು. […]

ಮತ್ತಷ್ಟು ಓದಿ..

ಜಿಲ್ಲಾ ಪ್ರಕೃತಿ ನಿರ್ವಹಣಾ ಮೇಲುಸ್ತುವಾರಿ ಸಭೆ

ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಿ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, ಜುಲೈ.04 (ಕರ್ನಾಟಕ ವಾರ್ತೆ): ಮಳೆಯ ಕೊರತೆಯಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಸಮಸ್ಯೆ ಬಾರದಂತೆ ಕ್ರಮ ವಹಿಸಲು ಮೀಸಲು ಅನುದಾನವನ್ನು ಬಳಕೆ ಮಾಡಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಖಾಸಗಿ ಕೊಳವೆಬಾವಿ ಹಾಗೂ ಟ್ಯಾಂಕರ್ ಮೂಲಕ ಮೂಲಕ ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಪ್ರಕೃತಿ ನಿರ್ವಹಣಾ ಮೇಲುಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಜು.04) ನಡೆದ ಜಿಲ್ಲಾ ಪ್ರಕೃತಿ […]

ಮತ್ತಷ್ಟು ಓದಿ..

ಯಮಕನಮರಡಿ ಪ್ರಕರಣಕ್ಕೆ ರಾಜಕೀಯ ಬಣ್ಣ: “ಆರೋಪ ಮಾಡುವವರು ಖಾಲಿ ಇದ್ದಾರೆ” ಬಿಜೆಪಿಗೆ ಟಾಂಗ್ ಕೊಟ್ಟ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಯಮಕನಮರಡಿಯಲ್ಲಿ ಸ್ವಾಮೀಜಿಯವರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಚುನಾವಣೆ ಹತ್ತಿರ ಬರುತ್ತಿದ್ದಂತೆ ಈಗ ಇದೊಂದು ಹೊಸ ರಾಜಕೀಯ ಆರಂಭವಾಗಿದೆ. ಎಮ್ಮಿ, ನಾಯಿ ಸತ್ತರೂ ನಮ್ಮ ಮೇಲೆಯೇ ಆರೋಪ ಹೊರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ಮುಂದಿಟ್ಟುಕೊಂಡು ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಬಿಂಬಿಸುತ್ತಿರುವ […]

ಮತ್ತಷ್ಟು ಓದಿ..

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ₹4.96 ಲಕ್ಷ ಮೌಲ್ಯದ ಹೆರಾಯಿನ್ ಜಪ್ತಿ, ಇಬ್ಬರು ಆರೋಪಿಗಳ ಬಂಧನ!

ಬೆಳಗಾವಿ: ನಗರದಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟ ಜಾಲದ ವಿರುದ್ಧ ಬೆಳಗಾವಿ ನಗರ ಸಿಸಿಬಿ (CCB) ಪೊಲೀಸರು ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಹೆರಾಯಿನ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅವರಿಂದ ಸುಮಾರು 4.96 ಲಕ್ಷ ರೂಪಾಯಿ ಮೌಲ್ಯದ ಹೆರಾಯಿನ್ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿವರ:ಬಂಧಿತ ಆರೋಪಿಗಳನ್ನು ಬೆಳಗಾವಿಯ ಕಂಗ್ರಾಳಿ ಕೆ.ಎಚ್‌.ನ ಮಹಾದ್ವಾರ ರೋಡ್, ಪಾಟೀಲ ಗಲ್ಲಿ ನಿವಾಸಿ ಮಹಾದೇವ ಗಜಾನನ ಪಾಟೀಲ ಮತ್ತು ರಾಮದೇವ ಗಲ್ಲಿ ನಿವಾಸಿ ವಿನಾಯಕ […]

ಮತ್ತಷ್ಟು ಓದಿ..

ಬೆಳಗಾವಿ ಜಿಲ್ಲಾ ಪೊಲೀಸರ ಬಿಗ್ ಸಕ್ಸಸ್: ಹತ್ತು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ 12 ಜನರನ್ನು ಪತ್ತೆ ಹಚ್ಚಿದ ‘ಎಐ’ ತಂತ್ರಜ್ಞಾನ!

ಬೆಳಗಾವಿ: ಕಾಲ ಬದಲಾದಂತೆ ಅಪರಾಧ ಜಗತ್ತನ್ನು ಮಟ್ಟಹಾಕಲು ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ತಂತ್ರಜ್ಞಾನದ ಬಳಕೆ ಅನಿವಾರ್ಯವಾಗಿದೆ. ಇದಕ್ಕೆ ಅತ್ಯುತ್ತಮ ಉದಾಹರಣೆ ಎಂಬಂತೆ, ಬೆಳಗಾವಿ ಜಿಲ್ಲಾ ಪೊಲೀಸರು ವಿನೂತನ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನವನ್ನು ಬಳಸಿಕೊಂಡು ದಶಕದ ಹಿಂದೆ ನಾಪತ್ತೆಯಾಗಿದ್ದ ಬರೋಬ್ಬರಿ 12 ಜನರನ್ನು ಪತ್ತೆ ಹಚ್ಚಿ, ಅವರ ಕುಟುಂಬದೊಂದಿಗೆ ಮರುಸಂಘಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ‘ನ್ಯಾಟ್‌ಗ್ರೇಡ್’ ಅಪ್ಲಿಕೇಶನ್ ಚಮತ್ಕಾರ: ಕಾಣೆಯಾದವರನ್ನು ಹುಡುಕಲು ಪೊಲೀಸರು ಈ ಬಾರಿ ಬಳಸಿದ್ದು ನ್ಯಾಟ್‌ಗ್ರೇಡ್ (NATGRID) ಎಂಬ ಅತ್ಯಾಧುನಿಕ ಎಐ ಅಪ್ಲಿಕೇಶನ್. ಈ ತಂತ್ರಜ್ಞಾನದ […]

ಮತ್ತಷ್ಟು ಓದಿ..

ಭರಮ್ಯಾನಟ್ಟಿ ಗ್ರಾಮದಲ್ಲಿ ಕುಕೃತ್ಯ ಎಸಗಿದ್ದ ಮೂವರು ಕಂಬಿ ಹಿಂದೆ: ಮಾರಿಹಾಳ ಪೊಲೀಸರ ಭರ್ಜರಿ ಆಕ್ಷನ್

ಬೆಳಗಾವಿ: ವಿವಾಹಿತ ಮಹಿಳೆಯನ್ನು ಕರೆದೊಯ್ದ ಯುವಕನ ಮನೆ ಮೇಲೆ ದಾಳಿ ನಡೆಸಿ, ಧ್ವಂಸಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬೆಳಗಾವಿಯ ಮಾರಿಹಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಂಧಿತರನ್ನು ನಾಗರಾಜ್ ನಾಯಕ, ರವಿ ಬೀಜಗತ್ತಿ ಹಾಗೂ ಈಶ್ವರ ಮುಚ್ಚಂಡಿ ಎಂದು ಗುರುತಿಸಲಾಗಿದೆ. ಬಂಧಿತ ಮೂವರೂ ಆರೋಪಿಗಳು ವಿವಾಹಿತ ಮಹಿಳೆ ನಾಗವ್ವ ಹಾಗೂ ಆಕೆಯ ಪತಿ ಬಸಪ್ಪನ ಸಂಬಂಧಿಕರು ಎಂದು ತಿಳಿದುಬಂದಿದೆ. ಘಟನೆಯ ಹಿನ್ನೆಲೆ: ಗ್ರಾಮದ ವಿವಾಹಿತೆ ನಾಗವ್ವ ಎಂಬಾಕೆಯನ್ನು […]

ಮತ್ತಷ್ಟು ಓದಿ..

ಗಂಡು ಮಗು ಹುಟ್ಟಿದ್ದಕ್ಕೆ ಪಾರ್ಟಿ ಕೇಳಿದ್ದೇ ತಪ್ಪಾಯ್ತಾ? ಆಪ್ತ ಗೆಳೆಯನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿ!

ಬೆಳಗಾವಿ: ಕ್ಷಣಿಕ ಆವೇಶ ಹಾಗೂ ಮದ್ಯದ ಅಮಲು ಮತ್ತೊಂದು ಬಲಿಯನ್ನ ಪಡೆದಿದೆ. ಗಂಡು ಮಗು ಜನಿಸಿದ ಖುಷಿಗೆ ಪಾರ್ಟಿ ಕೇಳಿದ ಆಪ್ತ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ವಣ್ಣೂರ ಗ್ರಾಮದ ನಿವಾಸಿ ಹಣಮಂತಪ್ಪ ಇಟಗಿ ಕೊಲೆಯಾದ ದುರ್ದೈವಿ. ಕ್ರೈಂ ಹಿನ್ನೆಲೆ: ಪಾರ್ಟಿ ಕೇಳಿದ್ದೇ ಕೊಲೆಯಲ್ಲಿ ಅಂತ್ಯ! ಪೊಲೀಸ್ ಮೂಲಗಳ ಪ್ರಕಾರ, ಆರೋಪಿ ವಿಶ್ವನಾಥ ಪೂಜೇರಿಗೆ ಇತ್ತೀಚೆಗಷ್ಟೇ ಗಂಡು ಮಗು ಜನಿಸಿತ್ತು. ಇದೇ ಖುಷಿಯಲ್ಲಿ […]

ಮತ್ತಷ್ಟು ಓದಿ..

ಇಡಿ ದಾಳಿ ಮುಕ್ತಾಯ ಬೆನ್ನಲ್ಲೇ ಬೆಳಗಾವಿಗೆ ಧಾವಿಸಿದ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ!

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ, ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸಗಳ ಮೇಲಿನ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ದಾಳಿ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಇಡಿ ಅಧಿಕಾರಿಗಳು ತನಿಖೆ ಮುಗಿಸಿ ಹೊರಡುತ್ತಿದ್ದಂತೆ, ಇತ್ತ ವೈ. ಮಂಜುನಾಥ್ ಅವರು ಬೆಂಗಳೂರಿನಿಂದ ನೇರವಾಗಿ ಬೆಳಗಾವಿಯ ತಮ್ಮ ನಿವಾಸಕ್ಕೆ ಧಾವಿಸಿದ್ದಾರೆ. ಇಡಿ ಅಧಿಕಾರಿಗಳು ಹೋದ ಬೆನ್ನಲ್ಲೇ ಎಂಟ್ರಿ! ಬೆಳಗಾವಿಯ ಟಿವಿ ಸೆಂಟರ್ ಬಳಿ ಇರುವ ಮಂಜುನಾಥ್ ಅವರ ನಿವಾಸದ […]

ಮತ್ತಷ್ಟು ಓದಿ..

ಅಬಕಾರಿ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಬೆಳಗಾವಿ ಮನೆಯಿಂದ ತೆರಳಿದ ಇಡಿ ಅಧಿಕಾರಿಗಳು: ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಳಗಾವಿ/ಬೆಂಗಳೂರು: ರಾಜ್ಯ ರಾಜಕಾರಣ ಹಾಗೂ ಅಬಕಾರಿ ಇಲಾಖೆಯಲ್ಲಿ ತೀವ್ರ ಸಂಚಲನ ಮೂಡಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಭಾಮೈದ (ಸಹೋದರಿ ಪತಿ), ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ. ವೈ. ಮಂಜುನಾಥ್ ಅವರ ಮೇಲಿನ ಜಾರಿ ನಿರ್ದೇಶನಾಲಯದ (ED) ದಾಳಿ ಪ್ರಕ್ರಿಯೆ ಬೆಳಗಿನವರೆಗೂ ಮುಂದುವರಿದಿದ್ದು, ಹಲವು ಮಹತ್ವದ ಮಾಹಿತಿ ಹಾಗೂ ದಾಖಲೆಗಳು ಹೊರಬಂದಿವೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ (DA Case), ಬೇನಾಮಿ ಹೂಡಿಕೆ ಹಾಗೂ ವಿದೇಶಿ ಹವಾಲಾ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜೂನ್ […]

ಮತ್ತಷ್ಟು ಓದಿ..

ಕಿತ್ತೂರು ಬಳಿ ಭೀಕರ ರಸ್ತೆ ಅಪಘಾತ: ನಿಯಂತ್ರಣ ತಪ್ಪಿ ಉರುಳಿದ ಮಿನಿ ಟ್ರಕ್; ಮೂವರು ಕಾರ್ಮಿಕರ ದುರ್ಮರಣ

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ 48ರ ಕಿತ್ತೂರು ಪಟ್ಟಣದ ಚನ್ನಮ್ಮ ಸರ್ಕಲ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ನಿಯಂತ್ರಣ ತಪ್ಪಿದ ಮಿನಿ ಟ್ರಕ್ ರಸ್ತೆ ವಿಭಾಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತ ಸಂಭವಿಸಿದ್ದು ಹೇಗೆ? ದಿನಾಂಕ 24/06/2026 ರಂದು ಮಧ್ಯಾಹ್ನ ಸುಮಾರು 02:00 ಗಂಟೆಯ ಸುಮಾರಿಗೆ ಬೆಳಗಾವಿ ಕಡೆಯಿಂದ ಧಾರವಾಡ ಕಡೆಗೆ ಸಿಮೆಂಟ್ ಕಂಬಗಳನ್ನು ಹೇರಿಕೊಂಡು ಸಾಗುತ್ತಿದ್ದ […]

ಮತ್ತಷ್ಟು ಓದಿ..