ಮುತ್ನಾಳ ಶಿವಾನಂದ ಶಿವಾಚಾರ್ಯ ಶ್ರೀ ನಿಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಬೆಳಗಾವಿ: ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದಲ್ಲಿರುವ ಕೇದಾರ ಪೀಠದ ಶಾಖಾ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಇಂದು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಕೆಲ ದಿನಗಳಿಂದ ಸ್ವಾಮಿಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸ್ವಾಮೀಜಿ ನಿಧನಕ್ಕೆ ಹಲವು ಮಠಾದೀಶರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಸ್ವಾಮಿಜಿ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಮುತ್ನಾಳ ಗ್ರಾಮದ ಕೇದಾರ್ ಶಾಖಾ ಪೀಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ಮನಸ್ಸಿಗೆ ಅತೀವ ನೋವು ತಂದಿದೆ. ಪೂಜ್ಯರ ಅಗಲಿಕೆ ಕೇವಲ ಮುತ್ನಾಳ ಗ್ರಾಮಕ್ಕೆ […]

ಮತ್ತಷ್ಟು ಓದಿ..

ಸುಕ್ಷೇತ್ರ ಕೊಣ್ಣೂರ-ಮರಡಿಮಠದ ಶ್ರೀ ಕಾಡಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಬೆಳಗಾವಿ: ಪ್ರತಿ ವರ್ಷದಂತೆ ಈ ವರ್ಷ ಕೂಡ ಲಿಂಗೈಕ್ಯ ಶ್ರೀಮದ್ ಜಗದ್ಗುರು ಶ್ರೀ ಘನಲಿಂಗ ಚಕ್ರವರ್ತಿ ಡಾ. ಶ್ರೀ ಅದೃಶ್ಯ ಗುರುಸಿದ್ದೇಶ್ವರ ಮಹಾಸ್ವಾಮಿಗಳವರ ಆಶೀರ್ವಾದದಿಂದ ಹಾಗೂ ಶ್ರೀ ಮ, ಘ, ಚ, ಡಾ. ಪವಾಡೇಶ್ವರ ಮಹಾಸ್ವಾಮಿಗಳವರ ದಿವ್ಯ ಸನ್ನಿದಿಯಲ್ಲಿ ವಿಜೃಂಭಣೆಯಿಂದ ಜರಗುವ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸುಕ್ಷೇತ್ರ ಕೊಣ್ಣೂರ ಮರಡಿಮಠದ ಆರಾಧ್ಯ ದೈವ ಶ್ರೀ ಕಾಡಸಿದ್ದೇಶ್ವರ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಕಾರ್ತಿಕ ಮಹೋತ್ಸವಕ್ಕೆ ಅದ್ದೂರಿ ಚಾಲನೆ ಸಿಕ್ಕದೆ. ದಿನಾಂಕ 28-11-2025 ರಿಂದ 02-12-2025 ಒಟ್ಟು […]

ಮತ್ತಷ್ಟು ಓದಿ..

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಕ್ಕಿನಕೇರಿ ಗ್ರಾಮದಲ್ಲಿ ಸುಮಾರು 2 ಕೋಟಿ 60 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ರಸ್ತೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಯುವರಾಜ ಕದಂ, ಗ್ರಾಮದ ಹಿರಿಯ ನಾಗರಿಕರು, ಸ್ಥಳೀಯ ಜನಪ್ರತಿನಿಧಿಗಳು, ನಿವಾಸಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

ಮತ್ತಷ್ಟು ಓದಿ..

ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಕರ್ನಾಟಕದ ಕೊಡುಗೆ ಅಪಾರ: ಪ್ರೋ.ವಿದ್ಯಾಶಂಕರ್ ಎಸ್.

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಬೆಳಗಾವಿಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಶ್ರೀಮತಿ ರಾಜಶ್ರೀ ಹಲಗೆಕರ್, ಶ್ರೀ ಪುಂಡಲೀಕ ಶಾಸ್ತ್ರಿ ಮತ್ತು ಶ್ರೀ ಸನ್ನಿಂಗಪ್ಪ ಮುಷೆನಗೋಳ ಅವರಿಗೆ ಸನ್ಮಾನಿಸುವ ಮುಖಾಂತರ ವಿಟಿಯು ಕನ್ನಡ ಹಬ್ಬವನ್ನು ಆಚರಿಸಲಾಯಿತು. ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಪುಷ್ಪಾರ್ಪಣೆ ಮೂಲಕ ಸಾಂಕೇತಕವಾಗಿ ಆರಂಭವಾದ ಹಬ್ಬ ನಂತರ ಡೊಳ್ಳು ಕುಣಿತ ಮತ್ತು ವೀರಗಾಸೆ ಕಲಾ ತಂಡಗಳ ಪ್ರದರ್ಶನದೊಂದಿಗೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನ ಮುಖ್ಯ […]

ಮತ್ತಷ್ಟು ಓದಿ..

ಪಾಲಕರು ಎಷ್ಟೇ ಬ್ಯುಸಿ ಇದ್ದರೂ ಮಕ್ಕಳ ಚಟುವಟಿಕೆ ಮೇಲೆ ಗಮನ ಇಡಬೇಕು: ಎಸ್ಪಿ ಡಾ.ಭೀಮಾಶಂಕರ ಗುಳೇದ

ಬೆಳಗಾವಿ: ಜೈನ್ ಹೆರಿಟೇಜ್ ಸ್ಕೂಲ್ ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಒತ್ತು ನೀಡುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಹೇಳಿದ್ದಾರೆ. ಶುಕ್ರವಾರ ಸಂಜೆ, ರಾಣಿ ಚನ್ನಮ್ಮ ನಗರದ ಜೈನ್ ಹೆರಿಟೇಜ್ ಸ್ಕೂಲ್ ನ 15ನೇ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡುತ್ತಿದ್ದರು. ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸೇರಿದಂತೆ ಎಲ್ಲ ವಿಭಾಗಗಳಲ್ಲಿ ಒತ್ತು ಕೊಟ್ಟು ಮಕ್ಕಳನ್ನು ಬೆಳೆಸಲಾಗುತ್ತಿದೆ. ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಇದು ಅಗತ್ಯ ಎಂದು ಅವರು ಹೇಳಿದರು. […]

ಮತ್ತಷ್ಟು ಓದಿ..

ಒತ್ತಡ ಕಡಿಮೆ ಮಾಡಲು ಕ್ರೀಡಾಕೂಟ ಅವಶ್ಯಕ: ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ.

ಬೆಳಗಾವಿ: (ನ.20) ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕ್ರೀಡಾಕೂಟ ಉತ್ಸವವನ್ನು ಪ್ರಾದೇಶಿಕ ಆಯುಕ್ತ ಜಾನಕಿ ಕೆ.ಎಂ. ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಅವರು, ಇಂತಹ ಕ್ರೀಡಾಕೂಟದಿಂದ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಒತ್ತಡ ಕಡಿಮೆ ಆಗುತ್ತದೆ‌. ಅವರಿಗೆ ಮತ್ತಷ್ಟು ಕೆಲಸ ಮಾಡಲು ಮಾನಸಿಕವಾಗಿ ಸದೃಢವಾಗುತ್ತಾರೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಮಾತನಾಡಿ, ಗ್ರಾಮೀಣಾಭಿವೃದ್ಧಿ […]

ಮತ್ತಷ್ಟು ಓದಿ..

ಗಡಿ ಜಿಲ್ಲೆ ಬೆಳಗಾವಿಗೂ ವಕ್ಕರಿಸಿತಾ ಗಳಲೆ ರೋಗ..!? 31 ಕೃಷ್ಣಮೃಗಗಳ ಬಲಿ ಪಡೆದಿದ್ದ ಮಾರಕ ಖಾಯಿಲೆ

ಬೆಳಗಾವಿ: ಗಡಿ‌ ಜಿಲ್ಲೆ ಬೆಳಗಾವಿಯಲ್ಲಿ ಗಳಲೆ ರೋಗ ದಾಂಗುಡಿ ಇಟ್ಟಿದೆ. ಬೆಳಗಾವಿಯ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣ ‌ಮೃಗಗಳ ಸಾವಿಗೆ ಕಾರಣವಾಗಿದ್ದ ಈ ಮಾರಕ ಗಳಲೆ ರೋಗ ಇದೀಗ ಬೆಳಗಾವಿ ‌ಜಿಲ್ಲೆಯ ಸಾಕು ಪ್ರಾಣಿಗಳಿಗೂ ವಕ್ಕರಿಸುತ್ತಿದೆ. ಹಿಮೋರೆಜಕ್ ಸೆಪ್ಟಿಸೀಮಿಯಾ ಬ್ಯಾಕ್ಟೀರಿಯಾ ಮತ್ತು ಎಚ್.ಎಸ್ ಬ್ಯಾಕ್ಟೀರಿಯಾ ಸೋಂಕಿನಿಂದ ಬೆಳಗಾವಿ ಜಿಲ್ಲೆಯ ರೈತರು ಆತಂಕಕ್ಕಿಡಾಗಿದ್ದಾರೆ. ಗಂಟು ರೋಗದಿಂದ ಈಗಾಗಲೇ ‌ಏಳು ಜಾನುವಾರುಗಳು ಜಿಲ್ಲೆಯಲ್ಲಿ ಸಾವನ್ನಪ್ಪಿದ್ದು, ಸಾವಿಗೀಡಾದ ಜಾನುವಾರುಗಳಿಗೆ ಹಿಮೋರೆಜಿಕ್ ಸೆಪ್ಟಿಸೆಮೀಯಾ ಸೋಂಕು ತಾಗಿರುವ ಶಂಕೆ ದಟ್ಟವಾಗಿದೆ. ಬೆಳಗಾವಿಯಲ್ಲಿ ಹಿಮೋರೆಜಿಕ್ […]

ಮತ್ತಷ್ಟು ಓದಿ..

ಕೊನೆಗೂ ಬಯಲಾಯ್ತು 31 ಕೃಷ್ಣಮೃಗ ಸಾವಿನ ರಹಸ್ಯ: ಡಿಎಫ್ಓ ಕ್ರಾಂತಿ ಹೇಳಿದ್ದೇನು

ಬೆಳಗಾವಿ: ಬೆಳಗಾವಿಯ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಡೆಗೂ ಕೃಷ್ಣ ಮೃಗಗಳ ಸಾವಿನ ರಹಸ್ಯ ಬಹಿರಂಗವಾಗಿದೆ. ಕೃಷ್ಣ ಮೃಗಗಳ ಮರಣೋತ್ತರ ಪರೀಕ್ಷೆಯ ಲ್ಯಾಬ್ ವರದಿ ಬಂದಿದೆ. ದಕ್ಷಿಣ ಪ್ರಾದೇಶಿಕ ರೋಗಪತ್ತೆ ಪ್ರಯೋಗಾಲಯ ಪ್ರಾಣಿ ಆರೋಗ್ಯ ಮತ್ತು ಪಶುವೈದ್ಯಕೀಯ ಜೀವಶಾಸ್ತ್ರ ರೋಗ ಪತ್ತೆ ಬ್ಯಾಕ್ಟೀರಿಯಾಲಜಿ ಮತ್ತು ಮೈಕಾಲಜಿ ಬೆಂಗಳೂರು ಈ ವರದಿ ನೀಡಿದ್ದು, ಹಿಮೋರಿಜಿಕ್ ಸೆಪ್ಟಿಸೀಮಿಯಾ ಬ್ಯಾಕ್ಟೀರಿಯಾದಿಂದ ಮತ್ತು ಗಳಲೆ ರೋಗದಿಂದ ಮೃತಪಟ್ಟ ಬಗ್ಗೆ ವರದಿ ಬಂದಿದೆ ಈ ಕುರಿತು ಸುದ್ಧಿಗೋಷ್ಠಿ […]

ಮತ್ತಷ್ಟು ಓದಿ..

ಬೆಳಗಾವಿ ಚಳಿಗಾಲ‌ ಅಧಿವೇಶನ-2025: ಉಭಯ ಸದನಗಳ ಸಭಾಧ್ಯಕ್ಷರಿಂದ ಪರಿಶೀಲನೆ

ವಸತಿ, ಸಾರಿಗೆ, ಊಟೋಪಹಾರದ ಸಮರ್ಪಕ ವ್ಯವಸ್ಥೆ ಕಲ್ಪಿಸಲು: ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಸೂಚನೆ ಬೆಳಗಾವಿ (ಕರ್ನಾಟಕ ವಾರ್ತೆ)ನ.19: ಡಿಸೆಂಬರ್ 8ರಿಂದ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ‌ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಬೆಳಗಾವಿ ಚಳಿಗಾಲ‌ ಅಧಿವೇಶನ ಯಶಸ್ವಿಗೊಳಿಸಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಸೂಚಿಸಿದರು. ಸುವರ್ಣ ವಿಧಾನಸೌಧದಲ್ಲಿ ಬುಧವಾರ (ನ.19) ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

ಮತ್ತಷ್ಟು ಓದಿ..

ಕೋರ್ಟ್ ನಲ್ಲಿ ಜಡ್ಜ್ ಎದುರಲ್ಲೇ ಮಾರಕಾಸ್ತ್ರದಿಂದ ಹೊಡೆದು ಮಹಿಳೆಯ ಕೊಲೆ ಯತ್ನ

ಅಥಣಿ: ಕೋರ್ಟ್ ಕಲಾಪ ನಡೆಯುವ ವೇಳೆ ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಅಥಣಿ ನ್ಯಾಯಾಲಯದಲ್ಲಿ ನಡೆದಿದೆ. ಮೀನಾಕ್ಷಿ ರಾಮಚಂದ್ರ ಶಿಂಧೆ (50) ಹಲ್ಲೆಗೊಳಗಾದ ಮಹಿಳೆಯಾಗಿದ್ದು, ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೋತನಟ್ಟಿ ಗ್ರಾಮದ ಬಾಬಾಸಾಹೇಬ್ ಚೌಹಾಣ ಎಂಬಾತ ಹಲ್ಲೆ ಮಾಡಿದ್ದ ಆರೋಪಿ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಬಾಬಾಸಾಹೇಬ್ ಸೋದರತ್ತೆ ಮೀನಾಕ್ಷಿ ಕೋರ್ಟ್ ಮೆಟ್ಟಿಲೇರಿದ್ದಳು. ಇದೇ ವಿಚಾರವಾಗಿ ಅನೇಕ ಬಾರಿ ಜಗಳವಾಗಿತ್ತು. ಇವತ್ತು ಸೋದರತ್ತೆ […]

ಮತ್ತಷ್ಟು ಓದಿ..