ಸಿದ್ದರಾಮಯ್ಯ ಮನೆಗೆ ನೂತನ ಕೆಪಿಸಿಸಿ ಸಾರಥಿ ಬಿ.ಕೆ. ಹರಿಪ್ರಸಾದ್ ಭೇಟಿ: ಕೈ ಪಾಳಯದಲ್ಲಿ ಒಗ್ಗಟ್ಟಿನ ಮಂತ್ರ!

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಕೆಪಿಸಿಸಿಯ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಸಮರ್ಪಿಸಿದರು. ಬೆಂಗಳೂರಿನ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸದಲ್ಲಿ ನಡೆದ ಈ ಭೇಟಿ ಜಂಟಿ ನಾಯಕತ್ವದ ಬಲಪ್ರದರ್ಶನ ಹಾಗೂ ಮುಂಬರುವ ಚುನಾವಣೆಗಳಿಗೆ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿ ಹೊರಹೊಮ್ಮಿದೆ. ಸೌಹಾರ್ದಯುತ ಭೇಟಿ ಮತ್ತು ಅಭಿನಂದನೆ ತಮಗೆ ಕೆಪಿಸಿಸಿ ಸಾರಥ್ಯ ಒಲಿದು […]

ಮತ್ತಷ್ಟು ಓದಿ..

ಸತೀಶ್ ಜಾರಕಿಹೊಳಿಗೆ ಕೈತಪ್ಪಿದ ಕೆಪಿಸಿಸಿ ಗದ್ದುಗೆ; ಮಂತ್ರಿಗಿರಿಯೇ ಲೇಸೆಂದ ‘ಸಾಹುಕಾರ್’!

ಬೆಳಗಾವಿ: ರಾಜ್ಯ ರಾಜಕಾರಣದ ಅತ್ಯಂತ ಪ್ರಭಾವಿ ಜಿಲ್ಲೆಗಳಲ್ಲೊಂದಾದ ಬೆಳಗಾವಿಯ ಮಟ್ಟಿಗೆ ಇದೀಗ ಹೈಕಮಾಂಡ್ ಮಟ್ಟದ ಪ್ರಮುಖ ಬೆಳವಣಿಗೆಯೊಂದು ಮುನ್ನೆಲೆಗೆ ಬಂದಿದೆ. ದೀರ್ಘಕಾಲದಿಂದ ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನದ ರೇಸ್‌ನಿಂದ ಸಚಿವ ಸತೀಶ್ ಜಾರಕಿಹೊಳಿ ಹೊರಗುಳಿದಂತಾಗಿದ್ದು, ಬೆಳಗಾವಿ ಜಿಲ್ಲೆಗೆ ಕೆಪಿಸಿಸಿ ಗದ್ದುಗೆ ಕೈತಪ್ಪಿದೆ. ಇದರೊಂದಿಗೆ ಸತೀಶ್ ಜಾರಕಿಹೊಳಿ ಅವರ ದೆಹಲಿ ಮಟ್ಟದ ರಾಜಕೀಯ ಲೆಕ್ಕಾಚಾರಗಳು ಸದ್ಯಕ್ಕೆ ಕೈಗೂಡಿಲ್ಲ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿವೆ. ಅಹಿಂದ ನಾಯಕತ್ವದ ಮೇಲೆ ಕಣ್ಣಿಟ್ಟಿದ್ದ […]

ಮತ್ತಷ್ಟು ಓದಿ..

ಬಿ.ಕೆ.ಹರಿಪ್ರಸಾದ್‌ಗೆ ಒಲಿದ ಕೆಪಿಸಿಸಿ ಅಧ್ಯಕ್ಷ ಪಟ್ಟ: ಕೈ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಹಿರಿಯ ನಾಯಕ, ಮಾಜಿ ಸಂಸದ ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಸಾರಥ್ಯವನ್ನು ವಹಿಸಲು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಹಸಿರು ನಿಶಾನೆ (ಗ್ರೀನ್ ಸಿಗ್ನಲ್) ನೀಡಿದೆ. ಹಾಲಿ ಅಧ್ಯಕ್ಷರ ಅವಧಿ ಮುಕ್ತಾಯ ಹಾಗೂ ರಾಜ್ಯ ರಾಜಕೀಯದ ಸದ್ಯದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಈ ಮಹತ್ವದ ಬದಲಾವಣೆ ಮಾಡಲಾಗಿದ್ದು, ದೆಹಲಿ ಮಟ್ಟದಲ್ಲಿ ನಡೆದ ಸರಣಿ ಸಭೆಗಳ […]

ಮತ್ತಷ್ಟು ಓದಿ..

ಸಿದ್ದರಾಮಯ್ಯ ರಾಜೀನಾಮೆ ನೋವು ತಂದಿದೆ: ಬಿ.ಸಿ.ಪಾಟೀಲ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಎಲ್ಲೋ ಒಂದು ಕಡೆ ನನಗೆ ಗೊತ್ತಿಲ್ಲದೆ ನೋವು ಕೊಡುತ್ತಿದೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಬಿ.ಸಿ.ಪಾಟೀಲ್‌ ಭಾವುಕರಾಗಿದ್ದಾರೆ. ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು. ಆದರೆ, ಸಿದ್ದರಾಮಯ್ಯ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ. ನಾನು ಅವರನ್ನು ಪೊಲೀಸ್ ಅಧಿಕಾರಿಯಾಗಿ ನೋಡಿದ್ದೇನೆ. 2004 ರಿಂದ ಅವರೊಂದಿಗೆ ಶಾಸಕನಾಗಿದ್ದೆ. 2006ರಲ್ಲಿ ಅವರು ಕಾಂಗ್ರೆಸ್ಸಿಗೆ ಹೋಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಆಗ ನಾನು ವಿರೋಧಿಸಿದ್ದೂ ಇದೆ. ಆದರೆ ನಾನು 2008 […]

ಮತ್ತಷ್ಟು ಓದಿ..

ಮುಖ್ಯಮಂತ್ರಿಯಾಗಿ ರಾಜ್ಯದ ಜನತೆಗೆ ಅಂತಿಮ ವಿದಾಯ ಹೇಳಿದ ಸಿದ್ದರಾಮಯ್ಯ

ಎಲ್ಲರಿಗೂ ನಮಸ್ಕಾರ, – ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ. ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್‌ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ […]

ಮತ್ತಷ್ಟು ಓದಿ..

ಸಿದ್ದರಾಮಯ್ಯ ಮಾರ್ಗದರ್ಶನದಲ್ಲೇ ಸರ್ಕಾರ ಮುನ್ನಡೆಯುತ್ತದೆ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಪ್ರಶ್ನಾತೀತ ನಾಯಕ. ಅವರ ಮುತ್ಸದ್ಧಿತನ, ನಾಯಕತ್ವ, ಮಾರ್ಗದರ್ಶನ ಮುಂದಿಟ್ಟುಕೊಂಡೇ ನಮ್ಮ ಸರ್ಕಾರ ಮುನ್ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ವಿಚಾರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಹೈಕಮಾಂಡ್ ಹೇಳಿದಂತೆ ಸಿದ್ದರಾಮಯ್ಯ ನಡೆದುಕೊಂಡಿದ್ದಾರೆ. ಅವರು ನಮ್ಮ ನಾಯಕರು, ಪ್ರಶ್ನಾತೀತ ನಾಯಕರು. ಅವರ ನಾಯಕತ್ವ, ಮಾರ್ಗದರ್ಶನ ಮುಂದೆಯೂ ಇರುತ್ತದೆ ಎಂದು ಹೇಳಿದರು. ಮುಂದಿನ […]

ಮತ್ತಷ್ಟು ಓದಿ..

ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಳಗಾವಿ, ಡಿಸೆಂಬರ್ 09: ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಇಂದು ಕಿವಿಮಾತು ಹೇಳಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡುವ ಸಂದರ್ಭದಲ್ಲಿ ರೈತರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ, ರೈತರಿಗೆ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದಾಗ ಮಧ್ಯ ಪ್ರವೇಶ ಮಾಡಿ ಮಾತನಾಡಿದ […]

ಮತ್ತಷ್ಟು ಓದಿ..

ಬೆಳಗಾವಿ ಅಧಿವೇಶನ ಪ್ರತಿಭಟನೆಯ ವೇದಿಕೆ, ಪಿಕ್‌ನಿಕ್ ಎಂಬ ಭಾವ ಸರಿಯಲ್ಲ: ಸಚಿವ ಎಚ್.ಕೆ.ಪಾಟೀಲ್

ಹುಬ್ಬಳ್ಳಿ: ಬೆಳಗಾವಿ ಅಧಿವೇಶನವು ಪ್ರತಿಭಟನೆಯ ವೇದಿಕೆ, ಪಿಕ್‌ನಿಕ್ ಎಂಬ ಭಾವದಿಂದ ನಡೆದುಕೊಳ್ಳುವುದು ಸರಿಯಲ್ಲ. ಅಧಿವೇಶನದ ಪಾವಿತ್ರ್ಯ ಮತ್ತು ಶಕ್ತಿಯನ್ನು ಕುಂದಿಸುವ ಕೆಲಸ ಆಗಬಾರದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ,  ಶಾಸಕರು ಮತ್ತು ವಿಪಕ್ಷಗಳಿಗೆ ಕರೆ ನೀಡಿದರು. ಭಾನುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಅಸಮಾನತೆ ದೂರಮಾಡಲು ಉತ್ತರ ಕರ್ನಾಟಕ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚಿಸುವ ಜವಾಬ್ದಾರಿ ಶಾಸಕರ ಮೇಲಿದೆ ಎಂದರು. ಸಾಮಾಜಿಕ ಬಹಿಷ್ಕಾರ ನಿಷೇಧ, ಧಾರ್ಮಿಕ ಸಂಸ್ಥೆಗಳ ಪರಿಣಾಮಕಾರಿ ನಿರ್ವಹಣೆ, ಹಸ್ತಪ್ರತಿಗಳ […]

ಮತ್ತಷ್ಟು ಓದಿ..

ಸಿಎಂ ಖುರ್ಚಿ ಕದನ ಉಭಯ ನಾಯಕರ ಜಂಟಿ ಸುದ್ದಿಗೋಷ್ಠಿ: ರಾಜಕೀಯ ಮೇಲಾಟಕ್ಕೆ ತಾತ್ಕಾಲಿಕ ವಿರಾಮ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ ತೆರಳಿ ಬ್ರೇಕ್ ಫಾಸ್ಟ್ ಮೀಂಟಿಂಗ್ ನಲ್ಲಿ ಭಾಗವಹಿಸಿದರು. ಇದೇ ವೇಳೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಸಿಎಂ ಅವರನ್ನು ಸಿಎಂ ಸಿದ್ದರಾಮಯ್ಯ ಬರಮಾಡಿಕೊಂಡರು. ಸಿಎಂ ನಿವಾಸದಲ್ಲೇ ಉಭಯ ನಾಯಕರು ಉಪಹಾರ ಮಾಡುತ್ತ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ಬ್ರೇಕ್ ಫಾಸ್ಟ್ ಮುಗಿಸಿ ಉಭಯ ನಾಯಕರು ನಗುನಗುತ್ತಲೇ ಹೊರಬಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರೊಂದಿಗೆ ಮಾತನಾಡಿದರು. ನಾನು, ಡಿ.ಕೆ.ಶಿವಕುಮಾರ್ ಹಾಗೂ ಪೊನ್ನಣ್ಣ ಬ್ರೇಕ್ […]

ಮತ್ತಷ್ಟು ಓದಿ..

ಡಿಕೆಶಿ ಬಳಿ 50 ಶಾಸಕರಿದ್ದರೆ ಈಗಲೇ ಸಿಎಂ ಮಾಡೋಣ: ರಮೇಶ್ ಜಾರಕಿಹೊಳಿ‌ ವ್ಯಂಗ್ಯ

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಿಎಂ ಖುರ್ಚಿ ಹಗ್ಗಜಗ್ಗಾಟ ಮುಂದುವರೆದಿದೆ. ಈ ಮಧ್ಯೆ ದೋಸ್ತಿ ಸರ್ಕಾರ ಬೀಳಿಸಿದ್ದ ರಮೇಶ್ ಜಾರಕಿಹೊಳಿ‌ ದಿಢೀರ್ ಪ್ರತ್ಯಕ್ಷವಾಗಿದ್ದಾರೆ.‌ ಶಾಸಕರ ನಂಬರ್ ಗೇಮ್ ಡಿಕೆಶಿ ಬಳಿಯಿಲ್ಲಾ, 50 ಶಾಸಕರಿದ್ದರೆ ಈಗಲೇ ಸಿಎಂ ಮಾಡೋಣಾ ಅಂತಾ ರಮೇಶ್ ಜಾರಕಿಹೊಳಿ‌ ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಈಗ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ಜೋರಾಗಿದೆ. ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣ ಆಗುತ್ತಿದ್ದಂತೆ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ಶುರುವಾಗಿದ್ದು, ರಾಜಕೀಯ ಚಟುವಟಿಕೆ ಗರಿಗೆದರಿದೆ.‌ ಅಂದು ಕಾಂಗ್ರೆಸ್ […]

ಮತ್ತಷ್ಟು ಓದಿ..