‘ಸಿದ್ದರಾಮಯ್ಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿಲ್ಲ’; ಸಚಿವ ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸದಿರಬಹುದು ಎಂದು ಹೇಳಿರುವುದನ್ನು ಚುನಾವಣಾ ರಾಜಕಾರಣದಿಂದ ನಿವೃತ್ತಿ ಎಂದು ಅರ್ಥೈಸಬಾರದು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಚುನಾವಣೆಗೆ ಸ್ಪರ್ಧಿಸದಿರಬಹುದು ಎಂದು ಹೇಳಿದ್ದಾರೆಯೇ ಹೊರತು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಹೇಳಿಲ್ಲ ಎಂದು ತಿಳಿಸಿದರು. ಸಿದ್ದರಾಮಯ್ಯ ಅವರು ತಾವು ಮುಂದಿನ ಚುನಾವಣೆಗೆ ರಾಜಕೀಯ ನಿವೃತ್ತಿ ಪಡೆಯಬಹುದು ಎಂದು ಹೇಳಿದ್ದರೂ, ಸಮಾಜದಲ್ಲಿರುವ ದುರ್ಬಲರು ಹಾಗೂ ಶೋಷಿತರ ಪರವಾಗಿ ಧ್ವನಿ ಎತ್ತುವ […]

ಮತ್ತಷ್ಟು ಓದಿ..

ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ: ಬ್ರೈನ್ ಡೆಡ್ ವ್ಯಕ್ತಿಯ ಅಂಗಾಂಗ ದಾನ; ಬಾಗಲಕೋಟೆ ಟು ಬೆಳಗಾವಿ ವರೆಗೆ ಗ್ರೀನ್ ಕಾರಿಡಾರ್

ಬಾಗಲಕೋಟೆ/ಬೆಳಗಾವಿ:‌ ರೈಲು ಅಪಘಾತದಲ್ಲಿ ಸಿಲುಕಿ ತಲೆಗೆ ತೀವ್ರ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯೊಬ್ಬರ ಅಂಗಾಂಗಗಳನ್ನು ದಾನ ಮಾಡಲು ಅವರ ಕುಟುಂಬಸ್ಥರು ಒಪ್ಪಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬಾಗಲಕೋಟೆಯ ಆಸ್ಪತ್ರೆಯಿಂದ ಬೆಳಗಾವಿಯ ಜೆ.ಎನ್.ಎಂ.ಸಿ ಆಸ್ಪತ್ರೆಗೆ ರೋಗಿಯನ್ನು ತಲುಪಿಸಲು ಪೊಲೀಸರು ‘ಗ್ರೀನ್ ಕಾರಿಡಾರ್’ ‘ಜೀರೋ ಟ್ರಾಫಿಕ್’ ವ್ಯವಸ್ಥೆ ಮಾಡುವ ಮೂಲಕ ಸಕಾಲದಲ್ಲಿ ಅಂಗಾಂಗ ದಾನ ಪ್ರಕ್ರಿಯೆ ಯಶಸ್ವಿಯಾಗಲು ನೆರವಾಗಿದ್ದಾರೆ. ಧಾರವಾಡದ ರೈಲ್ವೆ ನಿಲ್ದಾಣದಲ್ಲಿ 55 ವರ್ಷದ ದುಂಡಪ್ಪ ಎಂಬುವವರು ರೈಲು ಹತ್ತುವ ಭರದಲ್ಲಿ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದರು. ಈ […]

ಮತ್ತಷ್ಟು ಓದಿ..

ದಕ್ಷಿಣ ಭಾರತದ ಗಾನಕೋಗಿಲೆ, ಖ್ಯಾತ ಗಾಯಕಿ ಎಸ್. ಜಾನಕಿ ವಿಧಿವಶ!

ಮೈಸೂರು: ದಕ್ಷಿಣ ಭಾರತದ ಚಿತ್ರರಂಗದ ಅಪ್ರತಿಮ ಗಾಯಕಿ, ಕೋಟ್ಯಂತರ ಸಂಗೀತ ಪ್ರೇಮಿಗಳ ಮನಗೆದ್ದ ‘ಗಾನಕೋಗಿಲೆ’ ಎಸ್. ಜಾನಕಿ (ಶಿಸ್ಟ್ಲಾ ಜಾನಕಿ) ಅವರು ಇಂದು ಶನಿವಾರ ಜುಲೈ 11, 2026 ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಉನ್ನತ ಮೂಲಗಳ ಪ್ರಕಾರ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತೀವ್ರ ಹೃದಯಾಘಾತದಿಂದ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯಕೀಯ ಮೂಲಗಳು ಖಚಿತಪಡಿಸಿವೆ. ಅವರ ನಿಧನದೊಂದಿಗೆ ಭಾರತೀಯ ಚಿತ್ರರಂಗದ ಸುವರ್ಣ […]

ಮತ್ತಷ್ಟು ಓದಿ..

ಮುಖ್ಯ ರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕಿಲ್ಲ ಅವಕಾಶ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಎಚ್ಚರಿಕೆ: ಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ: ರಾಜಧಾನಿ ಬೆಂಗಳೂರಿನ ಸಾರ್ವಜನಿಕರ ಸುಗಮ ಸಂಚಾರ ಹಾಗೂ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮುಖ್ಯ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಬೀದಿ ಬದಿಯ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಸ್ತೆಬದಿ ವ್ಯಾಪಾರಿಗಳ ಪುನರ್ವಸತಿ ಮತ್ತು ನಗರದ ಸೌಂದರ್ಯೀಕರಣದ ಕುರಿತು ಸರ್ಕಾರದ ನಿಲುವನ್ನು ಕಡಕ್ ಆಗಿ ತಿಳಿಸಿದರು. ಸರ್ವಪಕ್ಷ ಶಾಸಕರ ಒಮ್ಮತದ ಅಭಿಪ್ರಾಯ: ತಾವು ಈ ಹಿಂದೆ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ಅವಧಿಯನ್ನು […]

ಮತ್ತಷ್ಟು ಓದಿ..

ಬೆಳಗಾವಿ ಸುವರ್ಣ ಸೌಧದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸುದ್ಧಿಗೋಷ್ಠಿ: ಕೃಷಿ, ನೀರಾವರಿ ಹಾಗೂ ಆಡಳಿತ ಸುಧಾರಣೆಗೆ ದಿಕ್ಸೂಚಿ

ಬೆಳಗಾವಿ: ಕಿತ್ತೂರು ಕರ್ನಾಟಕ ಭಾಗದ ಅಭಿವೃದ್ಧಿ, ಜಲಸಂಪನ್ಮೂಲ ನಿರ್ವಹಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುವರ್ಣ ಸೌಧದಲ್ಲಿ ವಿಭಾಗ ಮಟ್ಟದ ಶಾಸಕರು ಮತ್ತು ಅಧಿಕಾರಿಗಳ ಮಹತ್ವದ ಸಭೆ ನಡೆಸಿ, ಬಳಿಕ ಸುದ್ಧಿಗೋಷ್ಠಿಯಲ್ಲಿ ಸರ್ಕಾರದ ಹಲವು ಐತಿಹಾಸಿಕ ತೀರ್ಮಾನಗಳನ್ನು ಪ್ರಕಟಿಸಿದರು.ರಾಜ್ಯದ ಹಿತದೃಷ್ಟಿಯಿಂದ ಪಕ್ಷಾತೀತವಾಗಿ ಎಲ್ಲ ಶಾಸಕರನ್ನು ಈ ಸಭೆಗೆ ಆಹ್ವಾನಿಸಲಾಗಿತ್ತು ಎಂದು ತಿಳಿಸಿದ ಸಿಎಂ, ಪ್ರಸ್ತುತ ಎದುರಾಗಿರುವ ನೀರಿನ ಬಿಕ್ಕಟ್ಟು ಮತ್ತು ಕೃಷಿ ಸವಾಲುಗಳನ್ನು ಎದುರಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದರು. […]

ಮತ್ತಷ್ಟು ಓದಿ..

ಪಶ್ಚಿಮ ಘಟ್ಟ, ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ: ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಭೀತಿ, ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಪಂಚ ನದಿಗಳು

– ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನೇತೃತ್ವದಲ್ಲಿ ತುರ್ತು ಸಭೆ – ಮುನ್ನೆಚ್ಚರಿಕಾ ಕ್ರಮವಾಗಿ 397 ಪರಿಹಾರ ಕೇಂದ್ರಗಳ ಸ್ಥಾಪನೆ; ರಕ್ಷಣೆಗೆ ಎಸ್‌ಡಿಆರ್‌ಎಫ್, ಅಗ್ನಿಶಾಮಕ ದಳ ನಿಯೋಜನೆ ಬೆಳಗಾವಿ: ಪಶ್ಚಿಮ ಘಟ್ಟ ಸಾಲು ಹಾಗೂ ನೆರೆ ರಾಜ್ಯ ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸಂಭವನೀಯ ಪ್ರವಾಹದ ಭೀತಿ ಎದುರಾಗಿದೆ. ಕೃಷ್ಣಾ ಸೇರಿದಂತೆ ಜಿಲ್ಲೆಯ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಯಾವುದೇ ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ […]

ಮತ್ತಷ್ಟು ಓದಿ..

ಬರಗಾಲದ ಭೀತಿ ದೂರ, ರಾಜ್ಯಾದ್ಯಂತ ಹರ್ಷ: ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಆಶಾವಾದ

ಬೆಳಗಾವಿ: “ರಾಜ್ಯದಲ್ಲಿ ಭೀಕರ ಬರಗಾಲ ಆವರಿಸುವ ಹಾಗೂ ಕುಡಿಯುವ ನೀರಿಗೆ ತೀವ್ರ ತತ್ವಾರ ಉಂಟಾಗುವ ಭೀತಿ ಎದುರಾಗಿತ್ತು. ಆದರೆ ಕಳೆದ ಎರಡೂಮೂರು ದಿನಗಳಿಂದ ಮಳೆ ತನ್ನ ದಿಕ್ಕನ್ನು ಬದಲಾಯಿಸಿದ್ದು, ಕರ್ನಾಟಕದಲ್ಲಿ ಸದ್ಯ ಸಂತೋಷದ ವಾತಾವರಣ ನಿರ್ಮಾಣವಾಗಿದೆ” ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಳೆ ಪರಿಸ್ಥಿತಿ, ಜಲಾಶಯಗಳ ಸ್ಥಿತಿಗತಿ, ಮೋಡ ಬಿತ್ತನೆ ಹಾಗೂ ಆರ್‌ಎಸ್‌ಎಸ್ ಬೈಠಕ್ ಸೇರಿದಂತೆ ಹಲವು ಪ್ರಮುಖ ವಿದ್ಯಮಾನಗಳ ಕುರಿತು  ಮಾಹಿತಿ […]

ಮತ್ತಷ್ಟು ಓದಿ..

ಕಲ್ಲು ಹೃದಯದ ತಾಯಿ! ಕಸದಲ್ಲಿದ್ದ ಮಗುವಿಗೆ ಮರುಜನ್ಮ ನೀಡಿದ ಕುರಿಗಾಯಿಗಳು

ಬೆಳಗಾವಿ: ಹೆತ್ತ ಕರುಳನ್ನೇ ಕಸದ ತೊಟ್ಟಿಗೆ ಎಸೆಯುವ ಕಲಿಯುಗದ ಕ್ರೂರ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದ್ದು, ನವಜಾತ ಗಂಡು ಶಿಶುವನ್ನು ಬ್ರಿಡ್ಜ್ ಕೆಳಗೆ ಎಸೆದು ಹೋದ ಅಮಾನವೀಯ ಕೃತ್ಯವೊಂದು ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಿತ್ತೂರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಲ್ಲು ಹೃದಯದ ತಾಯಿಯೊಬ್ಬಳು ತಾನು ಹೆತ್ತ ಮಗುವನ್ನು ರಸ್ತೆಯ ಪಕ್ಕದ ಕಸದಲ್ಲಿ ಎಸೆದು ಪರಾರಿಯಾಗಿದ್ದಾಳೆ. ಕುರಿಗಾಯಿಗಳ ಸಮಯಪ್ರಜ್ಞೆ: ಮಗುವಿಗೆ ಮರುಜನ್ಮ ಕಿತ್ತೂರು-ನರಗುಂದ ರಸ್ತೆಯ ಬಸವಣಕಟ್ಟಿ ಬ್ರಿಡ್ಜ್ ಕೆಳಗಡೆ ಈ ನವಜಾತ ಶಿಶುವನ್ನು ಎಸೆಯಲಾಗಿತ್ತು. […]

ಮತ್ತಷ್ಟು ಓದಿ..

ಬೆಳಗಾವಿಯಲ್ಲಿ ಆರ್.ಎಸ್.ಎಸ್ ರಾಷ್ಟ್ರೀಯ ಬೈಠಕ್: ಮೋಹನ್ ಭಾಗವತ್ ನೇತೃತ್ವದಲ್ಲಿ ಮೂರು ದಿನಗಳ ಕಾಲ ಶಕ್ತಿಪ್ರದರ್ಶನ!

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕುರಿತು ಬರೆದ ಪತ್ರ ತೀವ್ರ ವಿವಾದ ಹಾಗೂ ಚರ್ಚೆಗಳಿಗೆ ಗ್ರಾಸವಾಗಿರುವ ಬೆನ್ನಲ್ಲೇ, ಕುಂದಾನಗರಿ ಬೆಳಗಾವಿಯಲ್ಲಿ ಆರೆಸ್ಸೆಸ್ ಬೃಹತ್ ರಾಷ್ಟ್ರೀಯ ಬೈಠಕ್ ಆಯೋಜಿಸುವ ಮೂಲಕ ತೀವ್ರ ಕುತೂಹಲ ಮೂಡಿಸಿದೆ. ಜುಲೈ ತಿಂಗಳಿನಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಸಭೆಯು ಸಂಘಟನೆಯ ಶಕ್ತಿಪ್ರದರ್ಶನ ಎಂದೇ ವಿಶ್ಲೇಷಿಸಲಾಗುತ್ತಿದೆ.‌ ಆರೆಸ್ಸೆಸ್ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಅವರ ನೇತೃತ್ವದಲ್ಲೇ ಈ ಮಹತ್ವದ ಬೈಠಕ್ ನಡೆಯುತ್ತಿರುವುದು ವಿಶೇಷ ಮಹತ್ವ […]

ಮತ್ತಷ್ಟು ಓದಿ..

ಬೆಳಗಾವಿ ಜಿಲ್ಲಾ ಪೊಲೀಸರ ಬಿಗ್ ಸಕ್ಸಸ್: ಹತ್ತು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ 12 ಜನರನ್ನು ಪತ್ತೆ ಹಚ್ಚಿದ ‘ಎಐ’ ತಂತ್ರಜ್ಞಾನ!

ಬೆಳಗಾವಿ: ಕಾಲ ಬದಲಾದಂತೆ ಅಪರಾಧ ಜಗತ್ತನ್ನು ಮಟ್ಟಹಾಕಲು ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ತಂತ್ರಜ್ಞಾನದ ಬಳಕೆ ಅನಿವಾರ್ಯವಾಗಿದೆ. ಇದಕ್ಕೆ ಅತ್ಯುತ್ತಮ ಉದಾಹರಣೆ ಎಂಬಂತೆ, ಬೆಳಗಾವಿ ಜಿಲ್ಲಾ ಪೊಲೀಸರು ವಿನೂತನ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನವನ್ನು ಬಳಸಿಕೊಂಡು ದಶಕದ ಹಿಂದೆ ನಾಪತ್ತೆಯಾಗಿದ್ದ ಬರೋಬ್ಬರಿ 12 ಜನರನ್ನು ಪತ್ತೆ ಹಚ್ಚಿ, ಅವರ ಕುಟುಂಬದೊಂದಿಗೆ ಮರುಸಂಘಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ‘ನ್ಯಾಟ್‌ಗ್ರೇಡ್’ ಅಪ್ಲಿಕೇಶನ್ ಚಮತ್ಕಾರ: ಕಾಣೆಯಾದವರನ್ನು ಹುಡುಕಲು ಪೊಲೀಸರು ಈ ಬಾರಿ ಬಳಸಿದ್ದು ನ್ಯಾಟ್‌ಗ್ರೇಡ್ (NATGRID) ಎಂಬ ಅತ್ಯಾಧುನಿಕ ಎಐ ಅಪ್ಲಿಕೇಶನ್. ಈ ತಂತ್ರಜ್ಞಾನದ […]

ಮತ್ತಷ್ಟು ಓದಿ..