ನಗರ ಸ್ಥಳೀಯ ಸಂಸ್ಥೆಗಳಿಗೆ 15ನೇ ಹಣಕಾಸು ಆಯೋಗದ ₹887 ಕೋಟಿ ಅನುದಾನ ಬಿಡುಗಡೆಗೆ ಕೇಂದ್ರ ಸಚಿವರಿಗೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮನವಿ

ಬೆಂಗಳೂರು: ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಗುರುವಾರ ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವ ತೋಖನ್ ಸಾಹು ಅವರನ್ನು ಕುಮಾರಕೃಪ ಅತಿಥಿಗೃದಲ್ಲಿ ಭೇಟಿ ಮಾಡಿ, ಕರ್ನಾಟಕದ ಅರ್ಹ ನಗರಾಭಿವೃದ್ಧಿ ಸಂಸ್ಥೆಗಳಿಗೆ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊರತುಪಡಿಸಿ) 2025-26ನೇ ಹಣಕಾಸು ವರ್ಷಕ್ಕೆ 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿರುವ ₹887 ಕೋಟಿ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. 15ನೇ ಹಣಕಾಸು ಆಯೋಗದ ನಿಯಮಾವಳಿಗಳ ಪ್ರಕಾರ […]

ಮತ್ತಷ್ಟು ಓದಿ..

ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವರ ಸಚಿವಾಲಯದ ಕಚೇರಿ ಉದ್ಘಾಟನೆ

ಬೆಂಗಳೂರು, ಜು. 2: ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿನ ಸಚಿವಾಲಯದ ತಮ್ಮ ನೂತನ ಕಚೇರಿಯನ್ನು ಉದ್ಘಾಟಿಸಿದರು. ಬಳಿಕ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳು ಹಾಗೂ ಮನವಿಗಳನ್ನು ಆಲಿಸಿದ ಸಚಿವರು, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಜನಪರ, ಪಾರದರ್ಶಕ ಹಾಗೂ ಉತ್ತರದಾಯಿ ಆಡಳಿತಕ್ಕೆ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಪುನರುಚ್ಚರಿಸಿದರು. ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ವಿಷಯಗಳಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ […]

ಮತ್ತಷ್ಟು ಓದಿ..

ಇಡಿ ದಾಳಿ ಮುಕ್ತಾಯ ಬೆನ್ನಲ್ಲೇ ಬೆಳಗಾವಿಗೆ ಧಾವಿಸಿದ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ!

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ, ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸಗಳ ಮೇಲಿನ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ದಾಳಿ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಇಡಿ ಅಧಿಕಾರಿಗಳು ತನಿಖೆ ಮುಗಿಸಿ ಹೊರಡುತ್ತಿದ್ದಂತೆ, ಇತ್ತ ವೈ. ಮಂಜುನಾಥ್ ಅವರು ಬೆಂಗಳೂರಿನಿಂದ ನೇರವಾಗಿ ಬೆಳಗಾವಿಯ ತಮ್ಮ ನಿವಾಸಕ್ಕೆ ಧಾವಿಸಿದ್ದಾರೆ. ಇಡಿ ಅಧಿಕಾರಿಗಳು ಹೋದ ಬೆನ್ನಲ್ಲೇ ಎಂಟ್ರಿ! ಬೆಳಗಾವಿಯ ಟಿವಿ ಸೆಂಟರ್ ಬಳಿ ಇರುವ ಮಂಜುನಾಥ್ ಅವರ ನಿವಾಸದ […]

ಮತ್ತಷ್ಟು ಓದಿ..

ಅಬಕಾರಿ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಬೆಳಗಾವಿ ಮನೆಯಿಂದ ತೆರಳಿದ ಇಡಿ ಅಧಿಕಾರಿಗಳು: ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಳಗಾವಿ/ಬೆಂಗಳೂರು: ರಾಜ್ಯ ರಾಜಕಾರಣ ಹಾಗೂ ಅಬಕಾರಿ ಇಲಾಖೆಯಲ್ಲಿ ತೀವ್ರ ಸಂಚಲನ ಮೂಡಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಭಾಮೈದ (ಸಹೋದರಿ ಪತಿ), ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ. ವೈ. ಮಂಜುನಾಥ್ ಅವರ ಮೇಲಿನ ಜಾರಿ ನಿರ್ದೇಶನಾಲಯದ (ED) ದಾಳಿ ಪ್ರಕ್ರಿಯೆ ಬೆಳಗಿನವರೆಗೂ ಮುಂದುವರಿದಿದ್ದು, ಹಲವು ಮಹತ್ವದ ಮಾಹಿತಿ ಹಾಗೂ ದಾಖಲೆಗಳು ಹೊರಬಂದಿವೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ (DA Case), ಬೇನಾಮಿ ಹೂಡಿಕೆ ಹಾಗೂ ವಿದೇಶಿ ಹವಾಲಾ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜೂನ್ […]

ಮತ್ತಷ್ಟು ಓದಿ..

ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್! ಬೆಳಗಾವಿ ಸೇರಿ 7 ಕಡೆ ಅಧಿಕಾರಿಗಳ ಸರಣಿ ದಾಳಿ! ದಾಳಿ ಕುರಿತು ಸತೀಶ್ ಮೊದಲ ಪ್ರತಿಕ್ರಿಯೆ

ಬೆಳಗಾವಿ: ಲೋಕೋಪಯೋಗಿ ಸಚಿವ ಹಾಗೂ ಕಾಂಗ್ರೆಸ್ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಅವರ ಕುಟುಂಬಕ್ಕೆ ಜಾರಿ ನಿರ್ದೇಶನಾಲಯ (ED) ಭಾರಿ ಶಾಕ್ ನೀಡಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿ ಪತಿ (ಬಾಮೈದ) ಹಾಗೂ ಅಳಿಯನೂ ಆಗಿರುವ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸಗಳು ಮತ್ತು ಕಚೇರಿ ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಇಡಿ ಅಧಿಕಾರಿಗಳು ಬುಧವಾರ ಮುಂಜಾನೆಯಿಂದಲೇ ಏಕಕಾಲಕ್ಕೆ ದಾಳಿ ನಡೆಸಿ, ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ. ಬಳ್ಳಾರಿಯ ಮಾಜಿ ಸಂಸದ […]

ಮತ್ತಷ್ಟು ಓದಿ..

ಕರ್ನಾಟಕದಾದ್ಯಂತ ನೀಟ್ ಮರು ಪರೀಕ್ಷೆ; ಬೆಳಗಾವಿಯ ಪರೀಕ್ಷಾ ಕೇಂದ್ರಗಳಿಗೆ ಡಿಸಿ, ಕಮೀಷನರ್ ದಿಢೀರ್ ಭೇಟಿ, ಪರಿಶೀಲನೆ

ಬೆಳಗಾವಿ: ದೇಶಾದ್ಯಂತ ಇಂದು ಬಹುನಿರೀಕ್ಷಿತ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಮರು ಪರೀಕ್ಷೆ ನಡೆಯುತ್ತಿದ್ದು, ಕರ್ನಾಟಕದಲ್ಲೂ ಕಟ್ಟುನಿಟ್ಟಿನ ಭದ್ರತೆ ಮತ್ತು ವ್ಯವಸ್ಥೆಗಳ ನಡುವೆ ಪರೀಕ್ಷೆ ಆರಂಭವಾಗಿದೆ. ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಇಂದು ವೈದ್ಯಕೀಯ ಸೀಟಿಗಾಗಿ ಭವಿಷ್ಯದ ಪರೀಕ್ಷೆ ಬರೆಯುತ್ತಿದ್ದಾರೆ. ​ಕರ್ನಾಟಕದಲ್ಲಿ ನೀಟ್ ಪರೀಕ್ಷೆಯ ಅಂಕಿ-ಅಂಶಗಳು ​ಕರ್ನಾಟಕದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಇರುವ ಕ್ರೇಜ್ ಈ ಬಾರಿಯೂ ಮುಂದುವರಿದಿದೆ. ರಾಜ್ಯದ ಪ್ರಮುಖ ನಗರಗಳಾದ ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು ಮತ್ತು ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ […]

ಮತ್ತಷ್ಟು ಓದಿ..

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಇಂದಿನಿಂದ ಆರಂಭ: ನಿಮ್ಮ ಹೆಸರು ಡಿಲೀಟ್ ಆಗದಂತೆ ತಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಗೈಡ್!

ಬೆಂಗಳೂರು: ನೀವು ಕಳೆದ ಚುನಾವಣೆಯಲ್ಲಿ ಮತ ಚಲಾಯಿಸಿದ್ದೀರಾ? ಅಷ್ಟಕ್ಕೇ ನಿಮ್ಮ ಜವಾಬ್ದಾರಿ ಮುಗಿಯಿತು ಅಂದುಕೊಳ್ಳಬೇಡಿ. ಚುನಾವಣೆಯಿಂದ ಚುನಾವಣೆಗೆ ಮತದಾರರ ಪಟ್ಟಿಯಿಂದ ಹೆಸರುಗಳು ನಿಗೂಢವಾಗಿ ನಾಪತ್ತೆಯಾಗುವ ದೂರುಗಳು ಹೆಚ್ಚಾಗುತ್ತಿವೆ. ಇದನ್ನು ತಡೆಗಟ್ಟಲು ಭಾರತೀಯ ಚುನಾವಣಾ ಆಯೋಗವು ಇಂದಿನಿಂದ (ಜೂನ್ 20) ಕರ್ನಾಟಕದಾದ್ಯಂತ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಎಂಬ ಬೃಹತ್ ಅಭಿಯಾನವನ್ನು ಹಮ್ಮಿಕೊಂಡಿದೆ. ರಾಜ್ಯದ ಒಟ್ಟು 5.55 ಕೋಟಿಗೂ ಅಧಿಕ ಮತದಾರರ ಪಟ್ಟಿಯನ್ನು ದೋಷಮುಕ್ತಗೊಳಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ನೆನಪಿನಲ್ಲಿಡಬೇಕಾದ ಪ್ರಮುಖ […]

ಮತ್ತಷ್ಟು ಓದಿ..

ಕರ್ನಾಟಕದ ಕರಾವಳಿಗೆ ಮುಂಗಾರು ಪ್ರವೇಶ: ಜೂನ್ 9ರ ವರೆಗೆ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ನೈಋತ್ಯ ಮುಂಗಾರು ಮಾರುತಗಳು (Monsoon) ಕೊನೆಗೂ ಕರ್ನಾಟಕದ ಕರಾವಳಿ ಪ್ರದೇಶವನ್ನು ಪ್ರವೇಶಿಸಿದ್ದು, ರಾಜ್ಯಾದ್ಯಂತ ಮಳೆಗಾಲ ಅಧಿಕೃತವಾಗಿ ಆರಂಭವಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮುಂಗಾರು ಆರ್ಭಟ ಜೋರಾಗಿಯೇ ಇರಲಿದ್ದು, ಜೂನ್ 9ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಹಳದಿ ಅಲರ್ಟ್‌ ಘೋಷಣೆ ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ […]

ಮತ್ತಷ್ಟು ಓದಿ..

‘ಅಹಿಂದ’ ನಾಯಕತ್ವದ ಮುಂದಿನ ವಾರಸುದಾರ: ಕರ್ನಾಟಕ ರಾಜಕಾರಣದ ಸದ್ದಿಲ್ಲದ ಸುಲ್ತಾನ್ ಸತೀಶ್ ಜಾರಕಿಹೊಳಿ!

ಬೆಂಗಳೂರು/ಬೆಳಗಾವಿ: ಕರ್ನಾಟಕ ರಾಜಕಾರಣದಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ನಾಯಕರೆಂದರೆ ನೆನಪಾಗುವುದೇ ಜಾರಕಿಹೊಳಿ ಸಹೋದರರು. ಆದರೆ, ಉಳಿದ ಸಹೋದರರಿಗಿಂತ ವಿಭಿನ್ನವಾದ ವೈಚಾರಿಕ ಹಾದಿ, ಸದ್ದಿಲ್ಲದೆ ಜನಮನ ಗೆಲ್ಲುವ ಸಂಘಟನಾ ಚಾತುರ್ಯ ಹಾಗೂ ತತ್ವ ಸಿದ್ಧಾಂತಗಳ ಮೂಲಕವೇ ರಾಜ್ಯ ರಾಜಕಾರಣದಲ್ಲಿ ಧೀಮಂತ ನಾಯಕರಾಗಿ ಹೊರಹೊಮ್ಮಿದವರು ಸತೀಶ್ ಲಕ್ಷ್ಮಣರಾವ್ ಜಾರಕಿಹೊಳಿ. ಸದ್ಯ ರಾಜ್ಯದ ಲೋಕೋಪಯೋಗಿ (PWD) ಸಚಿವರಾಗಿರುವ ಅವರು, ಕೇವಲ ಒಬ್ಬ ಸಚಿವರಾಗಿ ಅಷ್ಟೇ ಅಲ್ಲದೆ, ರಾಜ್ಯದ ಪ್ರಮುಖ ಸಮಾಜಮುಖಿ ಚಳವಳಿಯ ಮುಂಚೂಣಿ ನಾಯಕರಾಗಿ ಮುನ್ನಡೆಯುತ್ತಿದ್ದಾರೆ. ರಾಜಕೀಯ ಹೆಜ್ಜೆ ಗುರುತು: ಸಹಕಾರಿ […]

ಮತ್ತಷ್ಟು ಓದಿ..

ಸಿದ್ದರಾಮಯ್ಯ ರಾಜೀನಾಮೆ ನೋವು ತಂದಿದೆ: ಬಿ.ಸಿ.ಪಾಟೀಲ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಎಲ್ಲೋ ಒಂದು ಕಡೆ ನನಗೆ ಗೊತ್ತಿಲ್ಲದೆ ನೋವು ಕೊಡುತ್ತಿದೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಬಿ.ಸಿ.ಪಾಟೀಲ್‌ ಭಾವುಕರಾಗಿದ್ದಾರೆ. ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು. ಆದರೆ, ಸಿದ್ದರಾಮಯ್ಯ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ. ನಾನು ಅವರನ್ನು ಪೊಲೀಸ್ ಅಧಿಕಾರಿಯಾಗಿ ನೋಡಿದ್ದೇನೆ. 2004 ರಿಂದ ಅವರೊಂದಿಗೆ ಶಾಸಕನಾಗಿದ್ದೆ. 2006ರಲ್ಲಿ ಅವರು ಕಾಂಗ್ರೆಸ್ಸಿಗೆ ಹೋಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಆಗ ನಾನು ವಿರೋಧಿಸಿದ್ದೂ ಇದೆ. ಆದರೆ ನಾನು 2008 […]

ಮತ್ತಷ್ಟು ಓದಿ..