ಕಾರು-ಲಾರಿ ಡಿಕ್ಕಿ, ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

ಚಿತ್ರದುರ್ಗ: ತುಮಕೂರ್ಲಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿದ್ದು ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣಕ್ಕಿಡಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ‌ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದ್ರೆ, ಉಳಿದ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಪ್ರಕರಣ ನಡೆದಿದ್ದು, ಕಾರಿನ ಟೈರ್ ಸ್ಪೋಟಗೊಂಡ ಪರಿಣಾಮ ಲಾರಿಗೆ ಕಾರ್ ಡಿಕ್ಕಿ ಹೊಡೆದಿದೆ ಎಂದು ಶಂಕಿಸಲಾಗಿದೆ. ಮೃತರೆಲ್ಲರೂ ಚಳ್ಳಕೆರೆ ಮೂಲದವರಾಗಿದ್ದು, ಘಟನಾ ಸ್ಥಳಕ್ಕೆ PSI ಮಹೇಶ್ […]

ಮತ್ತಷ್ಟು ಓದಿ..

ಮುಖ್ಯಮಂತ್ರಿಯಾಗಿ ರಾಜ್ಯದ ಜನತೆಗೆ ಅಂತಿಮ ವಿದಾಯ ಹೇಳಿದ ಸಿದ್ದರಾಮಯ್ಯ

ಎಲ್ಲರಿಗೂ ನಮಸ್ಕಾರ, – ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ. ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್‌ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ […]

ಮತ್ತಷ್ಟು ಓದಿ..

ಹಿರಿಯ ನಾಗರಿಕರಿಗಾಗಿಯೇ ಜನ್ಮದಿನ ಸಮರ್ಪಣೆ: ಅಪರೂಪದ ಕಾರ್ಯಕ್ರಮ

ಮಾನವೀಯ ಮೌಲ್ಯಗಳಿಗೆ ಹೊಸ ಅರ್ಥ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಫೆಬ್ರವರಿ 14, ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಜನ್ಮ ದಿನಾಚರಣೆ. ಹಿರಿಯ ನಾಗರಿಕರೊಂದಿಗೆ, ಅವರನ್ನು ಗೌರವಿಸುವ ಮೂಲಕ ಜನ್ಮ ದಿನಾಚರಣೆ ಮಾಡಲು ಲಕ್ಷ್ಮೀ ಹೆಬ್ಬಾಳಕರ್ ಅವರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಜನ್ಮದಿನವೆಂದರೆ ಕೇಕ್, ಹೂಗುಚ್ಛಗಳು, ಶುಭಾಶಯಗಳ ನಡುವೆ ನಡೆಯುವ ವೈಯಕ್ತಿಕ ಆಚರಣೆ. ಆದರೆ ಇದಕ್ಕೆ ವಿಭಿನ್ನ ಅರ್ಥ ನೀಡುವ ಮೂಲಕ ಮಾನವೀಯ ಮೌಲ್ಯಗಳಿಗೆ ಹೊಸ ಅರ್ಥ ಕೊಟ್ಟಿದ್ದಾರೆ ಸಚಿವೆ […]

ಮತ್ತಷ್ಟು ಓದಿ..

ಬೆಳಗಾವಿ ಎಲೆಕ್ಟ್ರಾನಿಕ್ ಮೀಡಿಯಾ ಅಸೋಷಿಯೇಶನ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಗಾವಿ: ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಾಲಿಸ್ಟ್ ಅಸೋಷಿಯೇಶನ್‌ಗೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುಂದಿನ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ಮಂಗಳವಾರ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸಂಘದ ಸದಸ್ಯರ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ಅವಧಿಗೆ ಸಂಘದ ನೂತನ ಅಧ್ಯಕ್ಷರಾಗಿ ನ್ಯೂಸ್ 18 ಕನ್ನಡದ ಹಿರಿಯ ವರದಿಗಾರ ಚಂದ್ರಕಾಂತ ಸುಗಂಧಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಟಿವಿ-5 ಹಿರಿಯ ವರದಿಗಾರ ಶ್ರೀಧರ್ ಕೋಟಾರಗಸ್ತಿ, ಖಜಾಂಚಿಯಾಗಿ ಟಿವಿ-9 […]

ಮತ್ತಷ್ಟು ಓದಿ..

ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸಂದಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಳಗಾವಿ: ಸೋಮವಾರದಿಂದ ಶನಿವಾರದೊಳಗೆ (ಡಿಸೆಂಬರ್‌ 22 ರಿಂದ 27) ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.  ಬೆಳಗಾವಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಈಗಾಗಲೇ ಅನುಮತಿ ನೀಡಿದ್ದು, ಸೋಮವಾರದಿಂದ ಹಣ ಸಂದಾಯವಾಗಲಿದೆ ಎಂದರು. ಸತ್ತವರ ಅಕೌಂಟ್‌ಗೂ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ ಆಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ […]

ಮತ್ತಷ್ಟು ಓದಿ..

ಮುಖ್ಯಮಂತ್ರಿಗಳಿಂದ ಇ-ಖಾತಾ ಲೋಕಾರ್ಪಣೆ, ಪೌರಕಾರ್ಮಿಕರಿಗೆ ನೇಮಕಾತಿ ಆದೇಶ, ಮನೆಗಳ ಹಕ್ಕುಪತ್ರಗಳ ವಿತರಣೆ

ಬೆಳಗಾವಿ ಸುವರ್ಣಸೌಧ ಡಿ.18. (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಡಿ.18 ರಂದು ಇ-ಖಾತಾ ಸೌಕರ್ಯಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಬೆಳಗಾವಿಯ ಸುವರ್ಣವಿಧಾನಸೌಧದ ಸಭಾಂಗಣದಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳ ಮತ್ತು ಮನೆಯ ಹಕ್ಕುಪತ್ರಗಳ ವಿತರಣೆಗೆ ಸಹ ಅವರು ಚಾಲನೆ ನೀಡಿದರು. ಸಮಾರಂಭದಲ್ಲಿ ಇ-ಖಾತಾ ಕೈಪಿಡಿ ಬಿಡುಗಡೆ ಮಾಡಲಾಯಿತು. ಇದೇ ವೇಳೆ ಬೆಳಗಾವಿಯ 127 ಪೌರ ಕಾರ್ಮಿಕರಿಗೆ ಖಾಯಂ […]

ಮತ್ತಷ್ಟು ಓದಿ..

ಮಂಗಳವಾರ ಸುವರ್ಣ ಸೌಧದಲ್ಲಿ  ಬಾಲವಿಕಾಸ ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳ ಪ್ರಧಾನ: ಅಕಾಡೆಮಿಗೆ ಹೊಸ ಸ್ವರೂಪ ನೀಡಿದ ಸಂಗಮೇಶ ಬಬಲೇಶ್ವರ

2 ಕೋಟಿ ಮಕ್ಕಳ ಏಳಿಗೆಗಾಗಿ ಶ್ರಮಿಸುತ್ತಿರುವ ಬಾಲವಿಕಾಸ ಅಕಾಡೆಮಿ -ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾರ್ಗದರ್ಶನದಲ್ಲಿ ಅಕಾಡೆಮಿಗೆ ಹೊಸಸ್ವರೂಪ ಬೆಳಗಾವಿ: ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳ ಪ್ರಧಾನ ಸಮಾರಂಭ ಹಮ್ಮಿಕೊಂಡಿದ್ದು, 2022-23 ಹಾಗೂ 2023-24 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪುರಸ್ಕೃತರಿಗೆ ವಿತರಿಸಲಾಗುತ್ತಿದೆ.ಕರ್ನಾಟಕ ಬಾಲವಿಕಾಸ ಅಕಾಡೆಮಿಯು ರಾಜ್ಯದ ಸುಮಾರು 2 ಕೋಟಿ ಮಕ್ಕಳ ಶ್ರಯೋಭಿವೃದ್ಧಿಗಾಗಿ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶ್ರಮಿಸುತ್ತಿದೆ. ಮಹಿಳಾ ಮತ್ತು […]

ಮತ್ತಷ್ಟು ಓದಿ..

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಸ್ಥಳದಲ್ಲೇ ಓರ್ವ ಸಾವು: ಇಬ್ಬರು ಯುವಕರಿಗೆ ಗಂಭೀರ ಗಾಯ

ಗದಗ: ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ನಡೆದ ಈ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ದುರ್ಮರಣಕ್ಕಿಡಾಗಿದ್ದರೆ, ಇನ್ನುಳಿದ ಇಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ. ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ಈ ಘಟನೆ ನಡೆದಿದ್ದು, ಕಾರು ಚಾಲನೆ ಮಾಡ್ತಿದ್ದ ಜೀತೇಂದ್ರ (23) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ. ಉಳಿದಂತೆ ಪವನ್ (32), ವೆಂಕಟೇಶ (33) ಹೆಸರಿನ ಇಬ್ಬರು ಯುವಕರು ಗಂಭೀರವಾಗಿ […]

ಮತ್ತಷ್ಟು ಓದಿ..

ಕನ್ನಡ ನಾಮಫಲಕ ಅಳವಡಿಕೆಗೆ ನಿಗಾವಹಿಸಲು ರಾಜ್ಯದ ಎಲ್ಲಾ ಡಿಸಿಗಳಿಗೆ ಸೂಚನೆ: ಸಚಿವ ಶಿವರಾಜ ತಂಗಡಗಿ

ಬೆಳಗಾವಿ ಸುವರ್ಣವಿಧಾನಸೌಧ ಡಿ.12 (ಕ.ವಾ.): ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಡಿ.12ರಂದು ಸದಸ್ಯರಾದ ಡಾ.ಉಮಾಶ್ರೀ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಮೂಲ ಕಾಯಿದೆ 17ನೇ ಪ್ರಕರಣದ ಆರನೇ ಉಪಪ್ರಕರಣದಂತೆ ಸರ್ಕಾರ ಅಥವಾ ಸ್ಥಳೀಯ […]

ಮತ್ತಷ್ಟು ಓದಿ..

2023 ರಿಂದಲೇ ನೇಕಾರರಿಗೆ ಉಚಿತ ವಿದ್ಯುತ್‌ ಬೇಡಿಕೆ ಪರಿಶೀಲನೆ ಭರವಸೆ: ಸಚಿವ ಶಿವಾನಂದ ಪಾಟೀಲ್

ಬೆಳಗಾವಿ: ವಿದ್ಯುತ್‌ ಮಗ್ಗಗಳಿಗೆ ಹತ್ತು ಅಶ್ವಶಕ್ತಿವರೆಗೆ ನವೆಂಬರ್‌ 2023ರಿಂದ ಜಾರಿ ಮಾಡಿರುವ ಉಚಿತ ವಿದ್ಯುತ್‌ ಪೂರೈಕೆ ಯೋಜನೆಯನ್ನು ಏಪ್ರಿಲ್‌ನಿಂದ ಅನ್ವಯಗೊಳಿಸುವ ನೇಕಾರರ ಬೇಡಿಕೆಯನ್ನು ಪರಿಗಣಿಸಲಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಶಶಿಕಲಾ ಜೊಲ್ಲೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹತ್ತು ಅಶ್ವಶಕ್ತಿವರೆಗಿನ ವಿದ್ಯುತ್‌ ಮಗ್ಗಗಳಿಗೆ ಉಚಿತ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ಈ ಆದೇಶ ನವಂಬರ್‌ನಿಂದ ಜಾರಿಗೆ ಬಂದಿದ್ದು, ಅಂದಿನಿಂದ […]

ಮತ್ತಷ್ಟು ಓದಿ..