ಸುಕ್ಷೇತ್ರ ಕೊಣ್ಣೂರ-ಮರಡಿಮಠದ ಶ್ರೀ ಕಾಡಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಬೆಳಗಾವಿ: ಪ್ರತಿ ವರ್ಷದಂತೆ ಈ ವರ್ಷ ಕೂಡ ಲಿಂಗೈಕ್ಯ ಶ್ರೀಮದ್ ಜಗದ್ಗುರು ಶ್ರೀ ಘನಲಿಂಗ ಚಕ್ರವರ್ತಿ ಡಾ. ಶ್ರೀ ಅದೃಶ್ಯ ಗುರುಸಿದ್ದೇಶ್ವರ ಮಹಾಸ್ವಾಮಿಗಳವರ ಆಶೀರ್ವಾದದಿಂದ ಹಾಗೂ ಶ್ರೀ ಮ, ಘ, ಚ, ಡಾ. ಪವಾಡೇಶ್ವರ ಮಹಾಸ್ವಾಮಿಗಳವರ ದಿವ್ಯ ಸನ್ನಿದಿಯಲ್ಲಿ ವಿಜೃಂಭಣೆಯಿಂದ ಜರಗುವ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸುಕ್ಷೇತ್ರ ಕೊಣ್ಣೂರ ಮರಡಿಮಠದ ಆರಾಧ್ಯ ದೈವ ಶ್ರೀ ಕಾಡಸಿದ್ದೇಶ್ವರ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಕಾರ್ತಿಕ ಮಹೋತ್ಸವಕ್ಕೆ ಅದ್ದೂರಿ ಚಾಲನೆ ಸಿಕ್ಕದೆ. ದಿನಾಂಕ 28-11-2025 ರಿಂದ 02-12-2025 ಒಟ್ಟು […]

ಮತ್ತಷ್ಟು ಓದಿ..

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಮಹಾತ್ವಾಕಾಂಕ್ಷೆಯ 3 ಯೋಜನೆಗಳು ಲೋಕಾರ್ಪಣೆ: ಸಿಎಂ, ಡಿಸಿಎಂ ರಿಂದ ಚಾಲನೆ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಕನಸಿನ ಯೋಜನೆಗಳಾದ ಅಕ್ಕ ಪಡೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಅದ್ದೂರಿ ಸಮಾರಂಭದಲ್ಲಿ ಚಾಲನೆ ನೀಡಿದರು. ಅರಮನೆ ಮೈದಾನದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ […]

ಮತ್ತಷ್ಟು ಓದಿ..

ರಾಜ್ಯದಲ್ಲಿ ಮಾನ್ಸೂನ್ ಅವಧಿಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆ ಹಾನಿ: ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಸರ್ಕಾರ

ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದ ಸಿಎಂ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಚಾಲನೆ ಬೆಂಗಳೂರು: ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾಲನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ. 1033.60 ಕೋಟಿ […]

ಮತ್ತಷ್ಟು ಓದಿ..

ಭೀಕರ ಅಪಘಾತ ಐಎಎಸ್‌ ಅಧಿಕಾರಿ ಮಹಾಂತೇಶ ಬಿಳಗಿ ದುರ್ಮರಣ: ರಾಮದುರ್ಗದ ಮನೆಯಲ್ಲಿ ನೀರವ ಮೌನ

ಕಲಬುರಗಿ: ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬಿಳಗಿ ದುರ್ಮರಣಕ್ಕಿಡಾಗಿದ್ದಾರೆ. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿಯ ಗೌನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಾಂತೇಶ್‌ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯವರಾದ 2012 ಬ್ಯಾಚಿನ ಅಧಿಕಾರಿಯಾಗಿದ್ದ ಮಹಾಂತೇಶ ಬಿಳಗಿ ಕರ್ನಾಟಕ ಸ್ಟೇಟ್‌ ಮಿನರಲ್ಸ್‌ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ವಿಜಯಪುರದಿಂದ ಸಂಬಂಧಿಕರ ಮದುವೆಗೆ ತೆರಳುತ್ತಿದ್ದ ವೇಳೆ ಇವರು ಪ್ರಯಾಣಿಸುತ್ತಿದ್ದ ಇನ್ನೊವಾ ಕಾರು ಅಪಘಾತವಾಗಿದೆ. ಮೂಲಗಳ ಪ್ರಕಾರ ಮಹಾಂತೇಶ ಬಿಳಗಿ ಅವರೊಂದಿಗೆ […]

ಮತ್ತಷ್ಟು ಓದಿ..

2028ರಲ್ಲಿ ಪುನಃ ಕಾಂಗ್ರೆಸ್ ಅಧಿಕಾರಕ್ಕೆ ತರುವುದೇ ನಮಗೆ ಮುಖ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಸದ್ಯದ ರಾಜಕೀಯ ಬೆಳವಣಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಅದೇನಿದ್ದರೂ ಹೈಕಮಾಂಡ್‌ ಗೆ ಬಿಟ್ಟ ವಿಚಾರ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವುದೇ ನಮಗೆಲ್ಲರಿಗೂ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕ‌ರ್ ಹೇಳಿದರು. ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಕಾರ್ಯಕ್ರಮದ ಸಿದ್ಧತೆಯಲ್ಲಿ […]

ಮತ್ತಷ್ಟು ಓದಿ..

ನಾಲ್ಕನೇಯದು ಹೆಣ್ಣೆಂದು ಕತ್ತು ಹಿಸುಕಿ ಮೂರು ದಿನದ ಹಸುಳೆಯನ್ನ ಕೊಲೆಗೈದ ಪಾಪಿತಾಯಿ: ರಾಮದುರ್ಗ ಪೊಲೀಸರಿಂದ ಕೊಲೆಗಡುಕಿ ಬಂಧನ

ಬೆಳಗಾವಿ: ಬೆಳಗಾವಿಯಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದು ಹೋಗಿದೆ. ಮೂರು ದಿನದ ಹೆಣ್ಣು ಕಂದಮ್ಮನನ್ನ ಕತ್ತುಹಿಸಿಕಿ ಕೊಲೆ ಮಾಡಲಾಗಿದೆ. ಹೆತ್ತವಳೇ ಕಂದಮ್ಮಳನ್ನ ಕೊಂದಿದ್ದು ಪಾಪಿ ಕೊಲೆಗಾರ್ತಿ ತಾಯಿಯನ್ನ ಪೊಲೀಸರು ವಶಕ್ಕೆ ಪಡೆದು ಜೈಲಿಗಟ್ಟಲಿದ್ದಾರೆ. ಗಡಿಜಿಲ್ಲೆ ಬೆಳಗಾವಿಯಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವ, ಎಂಥವರ ಎದೆಯೂ ಝಲ್ ಎನ್ನಿಸುವಂತಹ ಹೃದಯವಿದ್ರಾವಕ ಘಟನೆ ನಡೆದಿದೆ. ನೀವು ಹೀಗೆ ಮೇಲೆ ನೋಡಿರೋ ಪೋಟೋ ನವಜಾತ ಹೆಣ್ಣು ಶಿಶುವಿನದ್ದು. ಕಳೆದ ಮೂರು ದಿನಗಳ ಹಿಂದೆಯಷ್ಟೇ ತಾಯಿ‌ ಗರ್ಭದಿಂದ ಜನ್ಮ ಪಡೆದಿದ್ದ ಹಸುಗುಸಿನ ಕೊಲೆಯಾಗಿದ್ದು, […]

ಮತ್ತಷ್ಟು ಓದಿ..

ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ, ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 25: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ.‌ ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು. ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕುಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ […]

ಮತ್ತಷ್ಟು ಓದಿ..

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ನವೆಂಬರ್ 28 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆಹ್ವಾನ ನೀಡಿದರು. ಸದಾಶಿವ ನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಅಧಿಕಾರಿಗಳೊಂದಿಗೆ ತೆರಳಿದ ಸಚಿವರು, ಅಂದಿನ ಐತಿಹಾಸಿಕ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಆಹ್ವಾನ ಪತ್ರಿಕೆ […]

ಮತ್ತಷ್ಟು ಓದಿ..

ಉ.ಕ ಅಭಿವೃದ್ದಿಗೆ ಸರ್ಕಾರಗಳ ಅಸಡ್ಡೆ  ಬೆಳಗಾವಿ ಅಧಿವೇಶನ ವೇಳೆ ಜೋರಾಗಲಿದೆ ಪ್ರತ್ಯೇಕ ರಾಜ್ಯದ ಹೋರಾಟ

ಬೆಳಗಾವಿ: ಬೆಳಗಾವಿಯ ಚಳಿಗಾಲದ ಅಧಿವೇಶನ ಇಡೀ ರಾಜ್ಯದ ಗಮನ ಸೆಳೆಯಲಿದೆ. ಉತ್ತರ ಕರ್ನಾಟಕಕ್ಕೆ ಆಗ್ತಿರೋ ಅನ್ಯಾಯದ ವಿರುದ್ಧ ಪ್ರತ್ಯೇಕ ರಾಜ್ಯದ ಕೂಗು ಜೋರಾಗಲಿದೆ. ಉತ್ತರ ಕರ್ನಾಟಕ ಹೋರಾಟ ಸಮಿತಿ ಪತ್ರ ಚಳುವಳಿ, ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದೆ. ಅತ್ತ ಕಾಂಗ್ರೆಸ್ ಶಾಸಕ ರಾಜು ಕಾಗೆ ನೇತೃತ್ವದಲ್ಲಿ ಉತ್ತರ ಕರ್ನಾಟಕದ 26 ಜನ ಶಾಸಕರು ಸದನದಲ್ಲಿ ಧ್ವನಿಯತ್ತಲಿದ್ದಾರೆ ಅಂತಾ ಹೋರಾಟ ಸಮಿತಿ ಹೇಳಿಕೊಂಡಿದೆ. ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಕಳೆದ 13 ವರ್ಷಗಳಿಂದ ನಿರಂತರವಾಗಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. […]

ಮತ್ತಷ್ಟು ಓದಿ..

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಬೆಂಗಳೂರು ನ22: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದರು. ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ […]

ಮತ್ತಷ್ಟು ಓದಿ..