ಬೆಳಗಾವಿ ಚಳಿಗಾಲ‌ ಅಧಿವೇಶನ-2025: ಉಭಯ ಸದನಗಳ ಸಭಾಧ್ಯಕ್ಷರಿಂದ ಪರಿಶೀಲನೆ

ವಸತಿ, ಸಾರಿಗೆ, ಊಟೋಪಹಾರದ ಸಮರ್ಪಕ ವ್ಯವಸ್ಥೆ ಕಲ್ಪಿಸಲು: ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಸೂಚನೆ ಬೆಳಗಾವಿ (ಕರ್ನಾಟಕ ವಾರ್ತೆ)ನ.19: ಡಿಸೆಂಬರ್ 8ರಿಂದ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ‌ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಬೆಳಗಾವಿ ಚಳಿಗಾಲ‌ ಅಧಿವೇಶನ ಯಶಸ್ವಿಗೊಳಿಸಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಸೂಚಿಸಿದರು. ಸುವರ್ಣ ವಿಧಾನಸೌಧದಲ್ಲಿ ಬುಧವಾರ (ನ.19) ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

ಮತ್ತಷ್ಟು ಓದಿ..

ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಬಸ್ ಪಲ್ಟಿ: 33 ಮಾಲಾಧಾರಿಗಳು ಪ್ರಣಾಪಾಯದಿಂದ ಪಾರು

ಕೇರಳ: ಮಂಡ್ಯದಿಂದ ಅಯ್ಯಪ್ಪ ಮಾಲಾಧಾರಿಗಳನ್ನು ಹೊತ್ತು ಶಬರಿಮಲೇಗೆ ತರಳುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಅಯ್ಯಪ್ಪ ಮಾಲಾಧಾರಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 33 ಅಯ್ಯಪ್ಪ ಮಾಲಧಾರಿಗಳು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದದಿಂದ ಶಬರಿಮಲೇಗೆ ತರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕೇರಳದ ಏರಿಮಲೈ ತಟ್ಟಿಪಿಟ್ಟಮ್ ಪ್ರದೇಶದಲ್ಲಿ ಬಸ್ ಪಲ್ಟಿಯಾಗಿದೆ. K.R.ಪೇಟೆ ತಾಲೂಕಿನ ಯಾತ್ರಾರ್ಥಿಗಳ ವಾಹನ ಪಲ್ಟಿಯಾದ ಹಿನ್ನಲೆ ವಿಷಯ ತಿಳಿದ ತಕ್ಷಣವೇ ಗಾಯಾಳುಗಳನ್ನು […]

ಮತ್ತಷ್ಟು ಓದಿ..

ಕೋರ್ಟ್ ನಲ್ಲಿ ಜಡ್ಜ್ ಎದುರಲ್ಲೇ ಮಾರಕಾಸ್ತ್ರದಿಂದ ಹೊಡೆದು ಮಹಿಳೆಯ ಕೊಲೆ ಯತ್ನ

ಅಥಣಿ: ಕೋರ್ಟ್ ಕಲಾಪ ನಡೆಯುವ ವೇಳೆ ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಅಥಣಿ ನ್ಯಾಯಾಲಯದಲ್ಲಿ ನಡೆದಿದೆ. ಮೀನಾಕ್ಷಿ ರಾಮಚಂದ್ರ ಶಿಂಧೆ (50) ಹಲ್ಲೆಗೊಳಗಾದ ಮಹಿಳೆಯಾಗಿದ್ದು, ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೋತನಟ್ಟಿ ಗ್ರಾಮದ ಬಾಬಾಸಾಹೇಬ್ ಚೌಹಾಣ ಎಂಬಾತ ಹಲ್ಲೆ ಮಾಡಿದ್ದ ಆರೋಪಿ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಬಾಬಾಸಾಹೇಬ್ ಸೋದರತ್ತೆ ಮೀನಾಕ್ಷಿ ಕೋರ್ಟ್ ಮೆಟ್ಟಿಲೇರಿದ್ದಳು. ಇದೇ ವಿಚಾರವಾಗಿ ಅನೇಕ ಬಾರಿ ಜಗಳವಾಗಿತ್ತು. ಇವತ್ತು ಸೋದರತ್ತೆ […]

ಮತ್ತಷ್ಟು ಓದಿ..

ಬೆಳಗಾವಿಯಲ್ಲಿ ಉಸಿರುಗಟ್ಟಿ ಮೂವರ ದಾರುಣ ಸಾವು; ಓರ್ವ‌ನ ಸ್ಥಿತಿ ಚಿಂತಾಜನಕ

ಬೆಳಗಾವಿ: ಕಾರ್ಯಕ್ರಮವೊಂದಕ್ಕೆ ಹೋಗಿ ಮನೆಗೆ ಬಂದಿದ್ದ ನಾಲ್ವರು ಯುವಕರ ಪೈಕಿ ಮೂವರು ಯುವಕರು ಉಸಿರುಗಟ್ಟಿ ಸಾವನ್ನಪ್ಪದ್ದು, ಓರ್ವ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಬೆಳಗಾವಿಯಲ್ಲಿ ವಿಪರೀತ ಚಳಿ ಇರುವ ಹಿನ್ನೆಲೆ ಮನೆಯ ರೂಮಿನಲ್ಲಿ ಇದ್ದಿಲಿನಿಂದ ಬೆಂಕಿ ಹಚ್ಚಿ ಕೆಂಡ ಮಾಡಿ ಹತ್ತಿರದಲ್ಲೇ ಇಟ್ಟುಕೊಂಡು ಮಲಗಿದ್ದ ನಾಲ್ವರು ಯುವಕರು ತೀವ್ರ ನಿದ್ರೆಗೆ ಜಾರಿದ್ದಾರೆ. ಚಳಿಗೆ ಬಿಸಿಯಾಗಲೇಂದು ಪಕ್ಕದಲ್ಲೇ ಇದ್ದಿಲು ಕೆಂಡ ಇಟ್ಟುಕೊಂಡು ಮಲಗಿದ್ದ ನಾಲ್ವರು ಯುವಕರ ಪೈಕಿ ಮೂವರಿಗೆ ಉಸಿರುಗಟ್ಟಿದೆ ಎನ್ನಲಾಗಿದೆ. ನಿದ್ರೆಗೆ ಜಾರಿದಾಗ ರೂಮನಲ್ಲೇ ಹೊಗೆಯಾಡಿ ಉಸಿರಾಟದ ಸಮಸ್ಯೆಯಿಂದ […]

ಮತ್ತಷ್ಟು ಓದಿ..

ರಾಜ್ಯದಲ್ಲಿ ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ: ಹೂಡಿಕೆದಾರರಿಗೆ ಸಿಎಂ ಕರೆ

ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ನವೆಂಬರ್ 18: ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’ 28 ನೇ […]

ಮತ್ತಷ್ಟು ಓದಿ..

ನೈರುತ್ಯ ವಲಯದ ಮಹಾ ಪ್ರಬಂಧಕರು, ಅಧಿಕಾರಿಗಳೊಂದಿಗೆ ಸಂಸದ ಜಗದೀಶ ಶೆಟ್ಟರ್ ಸಭೆ

ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ ಶೆಟ್ಟರ, ಇವರು ಇಂದು ನೈರುತ್ಯ ವಲಯದ ಮಹಾ ಪ್ರಬಂಧಕರು ಹಾಗೂ ಇತರೆ ಅಧಿಕಾರಿಗಳೊಂದಿಗೆ ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರೇಲ್ವೆ ಇಲಾಖೆ ಕಾಮಗಾರಿಗಳ ಸ್ಥಿತಿಗತಿಯ ಬಗ್ಗೆ ಚರ್ಚಿಸಿದರು. 1) ಬೆಳಗಾವಿ – ಕಿತ್ತೂರು – ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣ:ಪ್ರಸ್ತಾಪಿತ ನೂತನ ರೈಲು ಮಾರ್ಗ ನಿರ್ಮಾಣ ಕುರಿತು ಸಂಸದರು ಅಧಿಕಾರಿಗಳನ್ನು ಪ್ರಶ್ನಿಸಲಾಗಿ ಕಾಮಗಾರಿ ಪ್ರಾರಂಭಕ್ಕೆ ಅವಶ್ಯವೆನಿಸಿದ ಭೂ ಸಮೀಕ್ಷೆ ಬೆಳಗಾವಿ – […]

ಮತ್ತಷ್ಟು ಓದಿ..

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಧಾನಿಗಳಿಗೆ ಐದು ಅಂಶಗಳ ಮನವಿ ಪತ್ರ ಸಲ್ಲಿಕೆ ಏಮ್ಸ್, ಪ್ರವಾಹ ಪರಿಹಾರ ಹಾಗೂ ನೀರಾವರಿ ಯೋಜನೆಗಳಿಗೆ ತೀರುವಳಿ ನೀಡಲು ಆಗ್ರಹ ನವದೆಹಲಿ, ನವೆಂಬರ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2100 ಕೋಟಿ ಪ್ರವಾಹ ಪರಿಹಾರ ಹಾಗೂ ಪ್ರಮುಖ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ತೀರುವಳಿಗಳನ್ನು ನೀಡಲು […]

ಮತ್ತಷ್ಟು ಓದಿ..