ಬೆಂಗಳೂರು, ಜು. 2: ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿನ ಸಚಿವಾಲಯದ ತಮ್ಮ ನೂತನ ಕಚೇರಿಯನ್ನು ಉದ್ಘಾಟಿಸಿದರು.

ಬಳಿಕ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳು ಹಾಗೂ ಮನವಿಗಳನ್ನು ಆಲಿಸಿದ ಸಚಿವರು, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಜನಪರ, ಪಾರದರ್ಶಕ ಹಾಗೂ ಉತ್ತರದಾಯಿ ಆಡಳಿತಕ್ಕೆ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಪುನರುಚ್ಚರಿಸಿದರು.

ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ವಿಷಯಗಳಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ನಿರಂತರ ಸಮನ್ವಯ ಸಾಧಿಸಿ, ಸಮಸ್ಯೆಗಳಿಗೆ ತ್ವರಿತ ಹಾಗೂ ಪರಿಣಾಮಕಾರಿ ಸ್ಪಂದನೆ ನೀಡುವ ಉದ್ದೇಶದಿಂದ ಸಚಿವಾಲಯದ ಕಚೇರಿ ಸದಾ ಎಲ್ಲರಿಗೂ ಮುಕ್ತವಾಗಿರಲಿದೆ ಎಂದು ಸಚಿವರು ತಿಳಿಸಿದರು.


