ಪಾಲಕರು ಎಷ್ಟೇ ಬ್ಯುಸಿ ಇದ್ದರೂ ಮಕ್ಕಳ ಚಟುವಟಿಕೆ ಮೇಲೆ ಗಮನ ಇಡಬೇಕು: ಎಸ್ಪಿ ಡಾ.ಭೀಮಾಶಂಕರ ಗುಳೇದ

ಬೆಳಗಾವಿ: ಜೈನ್ ಹೆರಿಟೇಜ್ ಸ್ಕೂಲ್ ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಒತ್ತು ನೀಡುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಹೇಳಿದ್ದಾರೆ. ಶುಕ್ರವಾರ ಸಂಜೆ, ರಾಣಿ ಚನ್ನಮ್ಮ ನಗರದ ಜೈನ್ ಹೆರಿಟೇಜ್ ಸ್ಕೂಲ್ ನ 15ನೇ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡುತ್ತಿದ್ದರು. ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸೇರಿದಂತೆ ಎಲ್ಲ ವಿಭಾಗಗಳಲ್ಲಿ ಒತ್ತು ಕೊಟ್ಟು ಮಕ್ಕಳನ್ನು ಬೆಳೆಸಲಾಗುತ್ತಿದೆ. ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಇದು ಅಗತ್ಯ ಎಂದು ಅವರು ಹೇಳಿದರು. […]

ಮತ್ತಷ್ಟು ಓದಿ..

ಉ.ಕ ಅಭಿವೃದ್ದಿಗೆ ಸರ್ಕಾರಗಳ ಅಸಡ್ಡೆ  ಬೆಳಗಾವಿ ಅಧಿವೇಶನ ವೇಳೆ ಜೋರಾಗಲಿದೆ ಪ್ರತ್ಯೇಕ ರಾಜ್ಯದ ಹೋರಾಟ

ಬೆಳಗಾವಿ: ಬೆಳಗಾವಿಯ ಚಳಿಗಾಲದ ಅಧಿವೇಶನ ಇಡೀ ರಾಜ್ಯದ ಗಮನ ಸೆಳೆಯಲಿದೆ. ಉತ್ತರ ಕರ್ನಾಟಕಕ್ಕೆ ಆಗ್ತಿರೋ ಅನ್ಯಾಯದ ವಿರುದ್ಧ ಪ್ರತ್ಯೇಕ ರಾಜ್ಯದ ಕೂಗು ಜೋರಾಗಲಿದೆ. ಉತ್ತರ ಕರ್ನಾಟಕ ಹೋರಾಟ ಸಮಿತಿ ಪತ್ರ ಚಳುವಳಿ, ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದೆ. ಅತ್ತ ಕಾಂಗ್ರೆಸ್ ಶಾಸಕ ರಾಜು ಕಾಗೆ ನೇತೃತ್ವದಲ್ಲಿ ಉತ್ತರ ಕರ್ನಾಟಕದ 26 ಜನ ಶಾಸಕರು ಸದನದಲ್ಲಿ ಧ್ವನಿಯತ್ತಲಿದ್ದಾರೆ ಅಂತಾ ಹೋರಾಟ ಸಮಿತಿ ಹೇಳಿಕೊಂಡಿದೆ. ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಕಳೆದ 13 ವರ್ಷಗಳಿಂದ ನಿರಂತರವಾಗಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. […]

ಮತ್ತಷ್ಟು ಓದಿ..

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಬೆಂಗಳೂರು ನ22: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದರು. ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ […]

ಮತ್ತಷ್ಟು ಓದಿ..

ಒತ್ತಡ ಕಡಿಮೆ ಮಾಡಲು ಕ್ರೀಡಾಕೂಟ ಅವಶ್ಯಕ: ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ.

ಬೆಳಗಾವಿ: (ನ.20) ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕ್ರೀಡಾಕೂಟ ಉತ್ಸವವನ್ನು ಪ್ರಾದೇಶಿಕ ಆಯುಕ್ತ ಜಾನಕಿ ಕೆ.ಎಂ. ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಅವರು, ಇಂತಹ ಕ್ರೀಡಾಕೂಟದಿಂದ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಒತ್ತಡ ಕಡಿಮೆ ಆಗುತ್ತದೆ‌. ಅವರಿಗೆ ಮತ್ತಷ್ಟು ಕೆಲಸ ಮಾಡಲು ಮಾನಸಿಕವಾಗಿ ಸದೃಢವಾಗುತ್ತಾರೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಮಾತನಾಡಿ, ಗ್ರಾಮೀಣಾಭಿವೃದ್ಧಿ […]

ಮತ್ತಷ್ಟು ಓದಿ..

ಕಲಿತ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ನವೆಂಬರ್ 11: ನಾವು ಕಲಿಯುವ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು. ಇಲ್ಲದಿದ್ದರೆ ಸಾಕ್ಷರರಾಗಿ ಪ್ರಯೋಜನೆವಿಲ್ಲ. ಶಿಕ್ಷಣ ವೈಚಾರಿಕತೆ ಹಾಗೂ ವೈಜ್ಞಾನಿಕತೆಯಿಂದ ಕೂಡಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ಜಿಲ್ಲಾ ಬಿಸಿಎಂ ವಿದ್ಯಾರ್ಥಿನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘ ಯೋಜಿಸಿದ್ದ ಸಂಘದ ಪ್ರಥಮ ವಾರ್ಷಿಕೋತ್ಸವ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ದೇವರಾಜು ಅರಸು ಮತ್ತು ಹಾವನೂರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಬಿಸಿಎಂ ಹಾಸ್ಟೆಲ್ಗಳಲ್ಲಿ ಓದಿರುವವರಿಗೆ ಉಚಿತ ಶಿಕ್ಷಣ, ಆಹಾರ, ವಸತಿಗಳು ದೊರೆತಿದ್ದು, […]

ಮತ್ತಷ್ಟು ಓದಿ..

ಸುವರ್ಣ ಮಹೋತ್ಸವ ಮುಂದಿನ 50 ವರ್ಷಕ್ಕೆ ಪೀಠಿಕೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಮುಂದಿನ 50 ವರ್ಷಕ್ಕೆ ಪೀಠಿಕೆ ಹಾಕಿದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಪೂರ್ವಭಾವಿ […]

ಮತ್ತಷ್ಟು ಓದಿ..

ಪಾಕಿಸ್ತಾನಕ್ಕೆ ಮಲ್ಫೆಯ ಕೊಚ್ಚಿನ್ ಶಿಪ್ಯಾರ್ಡ್ ರಹಸ್ಯ ಮಾಹಿತಿ ಸೋರಿಕೆ: ಇಬ್ಬರ ಬಂಧನ

ಒಂದೂವರೆ ವರ್ಷಗಳಿಂದ ಮಾಹಿತಿ ರವಾನಿಸಿ ಹಣ ಗಳಿಸುತ್ತಿದ್ದ ಖದೀಮರು! ಉಡುಪಿ: ಮಲ್ಪೆಯ ಕೊಚ್ಚಿನ್‌ ಶಿಪ್ಯಾರ್ಡ್‌ ಕಂಪೆನಿಯಲ್ಲಿ ನೌಕರಿ ಮಾಡುತ್ತಿದ್ದ ಇಬ್ಬರು ಪಾಕಿಸ್ಥಾನಕ್ಕೆ ಗೌಪ್ಯ ಮಾಹಿತಿ ರವಾನಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಇಬ್ಬರನ್ನೂ  ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ರೋಹಿತ್‌ (29) ಮತ್ತು ಸಂತ್ರಿ (37) ಬಂಧಿತರು. ಏನಿದರ ಹಿನ್ನೆಲೆ? ಯಾಕಾಗಿ ಈ ಕೆಲಸ ಮಾಡ್ತಾ ಇದ್ರು? ಈ ಸ್ಟೋರಿ ಓದಿ. ಮಲ್ಪೆಯ ಕೊಚ್ಚಿನ್‌ ಶಿಪ್ಯಾರ್ಡ್‌ ಕಂಪೆನಿ‌ ಕೇಂದ್ರ ಸರ್ಕಾರ ಸ್ವಾಮ್ಯದ ಬಂದರು ಹಡಗು ಮತ್ತು ಜಲಸಾರಿಗೆ ಇಲಾಖೆಯ […]

ಮತ್ತಷ್ಟು ಓದಿ..

ಸಿದ್ಧಾರೂಡರ ಮಠದ ಲಕ್ಷ ದೀಪೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗಿ

ಹುಬ್ಬಳ್ಳಿ: ಕಾರ್ತಿಕ ಮಾಸದ ಅಂಗವಾಗಿ ಹುಬ್ಬಳ್ಳಿಯ ಭೂಕೈಲಾಸ ಶ್ರೀ ಸಿದ್ದಾರೂಢರ ಮಠದಲ್ಲಿ ಲಕ್ಷ ದೀಪೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಈ ದೀಪೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗಿಯಾಗಿ, ದೀಪ ಬೆಳಗಿಸಿ ಗುರು ಸಿದ್ದಾರೂಢರನ್ನು ಆರಾಧಿಸಿ ಪಾವನರಾದರು. ಹುಬ್ಬಳ್ಳಿ ಜನರ ಆರಾಧ್ಯ ದೈವ ಶ್ರೀ ಸಿದ್ದಾರೂಢ ಅಜ್ಜನ ಮಠ ಲಕ್ಷಾಂತರ ದೀಪಗಳಿಂದ ಬೆಳಗುತ್ತಿದೆ. ಹುಬ್ಬಳ್ಳಿ – ಧಾರವಾಡ ಭಕ್ತರು ಅಷ್ಟೇ ಅಲ್ಲದೆ ಬೇರೆ ಬೇರೆ ಜಿಲ್ಲೆ, ರಾಜ್ಯಗಳಿಂದ ಭಕ್ತರು ಆಗಮಿಸಿದ್ದರು. ಮಹಿಳೆಯರು, ಪುರುಷರು, ಮಕ್ಕಳು ದೀಪ ಬೆಳಗಿಸಿ ಪ್ರಾರ್ಥನೆ ಮಾಡಿ ಭಕ್ತಿಭಾವ ಮೆರೆದರು.

ಮತ್ತಷ್ಟು ಓದಿ..

ಸಿಎಂ ಖುರ್ಚಿ ಕಿತ್ತಾಟ ಸಚಿವ ಕೆ.ಹೆಚ್.ಮುನಿಯಪ್ಪ ಶಾಕಿಂಗ್ ಹೇಳಿಕೆ

ದೇವನಹಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನೆಲೆಯಲ್ಲಿರುವಾಗಲೇ ಸಚಿವ ಕೆ.ಹೆಚ್.ಮುನಿಯಪ್ಪ ಶಾಕಿಂಗ್ ಹೇಳಿಕೆಯನ್ನು ಕೊಟ್ಟಿದ್ದಾರೆ. ದೇವನಹಳ್ಳಿಯಲ್ಲಿ ಇಂದು ಮಾತನಾಡಿದ ಸಚಿವ ಮುನಿಯಪ್ಪ, ಪವರ್ ಶೇರಿಂಗ್ ವಿಚಾರ ಎಐಸಿಸಿ ಅಧ್ಯಕ್ಷರ ಬಳಿ ಈಗಾಗಲೇ ಮಾತನಾಡಿದ್ದಾರಂತೆ. ಕೆಲ ದಿನಗಳ ಹಿಂದೆ ಸಚಿವ ಕೆ.ಹೆಚ್.ಮುನಿಯಪ್ಪ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರಂತೆ. ಮಾತುಕತೆ ಸಮಯದಲ್ಲಿ ಸಿಎಂ ಅವಧಿ ಬಗ್ಗೆ ಇಬ್ಬರ ನಡುವೆ ಚರ್ಚೆಯಾಗಿದ್ದು, ನೀವು ತಕ್ಷಣ ಏನಾದ್ರು ಒಂದು ತೀರ್ಮಾನ ಮಾಡಿ ಎಂದಿದ್ದೇನೆ. ಅಧಿಕಾರ ಹಂಚಿಕೆ ವಿಚಾರದಲ್ಲಿ […]

ಮತ್ತಷ್ಟು ಓದಿ..

ಗಡಿ ಜಿಲ್ಲೆ ಬೆಳಗಾವಿಗೂ ವಕ್ಕರಿಸಿತಾ ಗಳಲೆ ರೋಗ..!? 31 ಕೃಷ್ಣಮೃಗಗಳ ಬಲಿ ಪಡೆದಿದ್ದ ಮಾರಕ ಖಾಯಿಲೆ

ಬೆಳಗಾವಿ: ಗಡಿ‌ ಜಿಲ್ಲೆ ಬೆಳಗಾವಿಯಲ್ಲಿ ಗಳಲೆ ರೋಗ ದಾಂಗುಡಿ ಇಟ್ಟಿದೆ. ಬೆಳಗಾವಿಯ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣ ‌ಮೃಗಗಳ ಸಾವಿಗೆ ಕಾರಣವಾಗಿದ್ದ ಈ ಮಾರಕ ಗಳಲೆ ರೋಗ ಇದೀಗ ಬೆಳಗಾವಿ ‌ಜಿಲ್ಲೆಯ ಸಾಕು ಪ್ರಾಣಿಗಳಿಗೂ ವಕ್ಕರಿಸುತ್ತಿದೆ. ಹಿಮೋರೆಜಕ್ ಸೆಪ್ಟಿಸೀಮಿಯಾ ಬ್ಯಾಕ್ಟೀರಿಯಾ ಮತ್ತು ಎಚ್.ಎಸ್ ಬ್ಯಾಕ್ಟೀರಿಯಾ ಸೋಂಕಿನಿಂದ ಬೆಳಗಾವಿ ಜಿಲ್ಲೆಯ ರೈತರು ಆತಂಕಕ್ಕಿಡಾಗಿದ್ದಾರೆ. ಗಂಟು ರೋಗದಿಂದ ಈಗಾಗಲೇ ‌ಏಳು ಜಾನುವಾರುಗಳು ಜಿಲ್ಲೆಯಲ್ಲಿ ಸಾವನ್ನಪ್ಪಿದ್ದು, ಸಾವಿಗೀಡಾದ ಜಾನುವಾರುಗಳಿಗೆ ಹಿಮೋರೆಜಿಕ್ ಸೆಪ್ಟಿಸೆಮೀಯಾ ಸೋಂಕು ತಾಗಿರುವ ಶಂಕೆ ದಟ್ಟವಾಗಿದೆ. ಬೆಳಗಾವಿಯಲ್ಲಿ ಹಿಮೋರೆಜಿಕ್ […]

ಮತ್ತಷ್ಟು ಓದಿ..