ಮಂಡ್ಯ: ಮಂಡ್ಯದಲ್ಲಿ ರೌಡಿ ಶೀಟರ್ ಒಬ್ಬನ ಬರ್ಬರ ಹತ್ಯೆಯಾಗಿದೆ. ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಬಳಿ ತಡರಾತ್ರಿ ಈ ಘಟನೆ ನಡೆದಿದೆ.

ಲಕ್ಷ್ಮೀ ಸಾಗರ ಗ್ರಾಮದ ಮಹೇಶ್ (26) ಕೊಲೆಯಾದ ರೌಡಿ ಶೀಟರ್ ಆಗಿದ್ದು, ತಡರಾತ್ರಿ ಬಾರ್ ನಲ್ಲಿ ಯುವಕರ ನಡುವೆ ನಡೆದ ಘರ್ಷಣೆ ಕೊಲೆಯಲ್ಲಿ ಅಂತ್ಯವಾಗಿದೆ. ಬಾರ್ ನಲ್ಲಿ ನಡೆದ ಗಲಾಟೆ ಬಳಿಕ ಅಮೃತಿ ಗ್ರಾಮದ ಹೆದ್ದಾರಿ ಬಳಿ ರೌಡಿಶೀಟರ್ ಮಹೇಶ್ ಕೊಲೆಯಾಗಿದ್ದು, ಮಾರಕಾಸ್ತ್ರದಿಂದ ಕೊಚ್ಚಿ, ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ತಡರಾತ್ರಿ ನಡೆದ ಕೊಲೆಗೆ ಇಡಿ ಗ್ರಾಮ ಬೆಚ್ಚಿ ಬಿದ್ದಿದ್ದು ಸ್ಥಳಕ್ಕೆ ಮೇಲುಕೋಟೆ ಪೊಲೀಸರು ಭೇಟಿ ಪರಿಶೀಲನೆ. ನಡೆಸಿದ್ದಾರೆ. ಪಾಂಡವಪುರ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತ ವ್ಯಕ್ತಿ ಶವ ರವಾನೆ ಮಾಡಲಾಗಿದ್ದು, ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದು ಹಂತಕರ ಬಂಧನಕ್ಕಾಗಿ ಬಲೆ ಬೀಸಲಾಗಿದೆ.


