ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ: ಪೂಜೆ ಸಲ್ಲಿಸಿದ ಮೃಣಾಲ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಸರಸ್ವತಿ ನಗರ, ಲಕ್ಷ್ಮೀ ಟೆಕಡಿ, ಫ್ರೀಡಂ ಫೈಟರ್ಸ್ ಕಾಲೋನಿ ಹಾಗೂ ಶಿವನೇರಿ ಕಾಲೋನಿಯ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಆಸಕ್ತಿಯಿಂದ ಮಂಜೂರಾಗಿರುವ ಸುಮಾರು 1 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು. ಈ ವೇಳೆ ಮೋಹನ್ […]

ಮತ್ತಷ್ಟು ಓದಿ..

ಮುತ್ನಾಳ ಶಿವಾನಂದ ಶಿವಾಚಾರ್ಯ ಶ್ರೀ ನಿಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಬೆಳಗಾವಿ: ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದಲ್ಲಿರುವ ಕೇದಾರ ಪೀಠದ ಶಾಖಾ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಇಂದು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಕೆಲ ದಿನಗಳಿಂದ ಸ್ವಾಮಿಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸ್ವಾಮೀಜಿ ನಿಧನಕ್ಕೆ ಹಲವು ಮಠಾದೀಶರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಸ್ವಾಮಿಜಿ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಮುತ್ನಾಳ ಗ್ರಾಮದ ಕೇದಾರ್ ಶಾಖಾ ಪೀಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ಮನಸ್ಸಿಗೆ ಅತೀವ ನೋವು ತಂದಿದೆ. ಪೂಜ್ಯರ ಅಗಲಿಕೆ ಕೇವಲ ಮುತ್ನಾಳ ಗ್ರಾಮಕ್ಕೆ […]

ಮತ್ತಷ್ಟು ಓದಿ..

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಮಹಾತ್ವಾಕಾಂಕ್ಷೆಯ 3 ಯೋಜನೆಗಳು ಲೋಕಾರ್ಪಣೆ: ಸಿಎಂ, ಡಿಸಿಎಂ ರಿಂದ ಚಾಲನೆ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಕನಸಿನ ಯೋಜನೆಗಳಾದ ಅಕ್ಕ ಪಡೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಅದ್ದೂರಿ ಸಮಾರಂಭದಲ್ಲಿ ಚಾಲನೆ ನೀಡಿದರು. ಅರಮನೆ ಮೈದಾನದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ […]

ಮತ್ತಷ್ಟು ಓದಿ..

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಕ್ಕಿನಕೇರಿ ಗ್ರಾಮದಲ್ಲಿ ಸುಮಾರು 2 ಕೋಟಿ 60 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ರಸ್ತೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಯುವರಾಜ ಕದಂ, ಗ್ರಾಮದ ಹಿರಿಯ ನಾಗರಿಕರು, ಸ್ಥಳೀಯ ಜನಪ್ರತಿನಿಧಿಗಳು, ನಿವಾಸಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

ಮತ್ತಷ್ಟು ಓದಿ..