ಸಿದ್ದರಾಮಯ್ಯ ರಾಜೀನಾಮೆ ನೋವು ತಂದಿದೆ: ಬಿ.ಸಿ.ಪಾಟೀಲ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಎಲ್ಲೋ ಒಂದು ಕಡೆ ನನಗೆ ಗೊತ್ತಿಲ್ಲದೆ ನೋವು ಕೊಡುತ್ತಿದೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಬಿ.ಸಿ.ಪಾಟೀಲ್‌ ಭಾವುಕರಾಗಿದ್ದಾರೆ. ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು. ಆದರೆ, ಸಿದ್ದರಾಮಯ್ಯ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ. ನಾನು ಅವರನ್ನು ಪೊಲೀಸ್ ಅಧಿಕಾರಿಯಾಗಿ ನೋಡಿದ್ದೇನೆ. 2004 ರಿಂದ ಅವರೊಂದಿಗೆ ಶಾಸಕನಾಗಿದ್ದೆ. 2006ರಲ್ಲಿ ಅವರು ಕಾಂಗ್ರೆಸ್ಸಿಗೆ ಹೋಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಆಗ ನಾನು ವಿರೋಧಿಸಿದ್ದೂ ಇದೆ. ಆದರೆ ನಾನು 2008 […]

ಮತ್ತಷ್ಟು ಓದಿ..

ಮುಖ್ಯಮಂತ್ರಿಯಾಗಿ ರಾಜ್ಯದ ಜನತೆಗೆ ಅಂತಿಮ ವಿದಾಯ ಹೇಳಿದ ಸಿದ್ದರಾಮಯ್ಯ

ಎಲ್ಲರಿಗೂ ನಮಸ್ಕಾರ, – ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ. ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್‌ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ […]

ಮತ್ತಷ್ಟು ಓದಿ..

ಸಿದ್ದರಾಮಯ್ಯ ಮಾರ್ಗದರ್ಶನದಲ್ಲೇ ಸರ್ಕಾರ ಮುನ್ನಡೆಯುತ್ತದೆ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಪ್ರಶ್ನಾತೀತ ನಾಯಕ. ಅವರ ಮುತ್ಸದ್ಧಿತನ, ನಾಯಕತ್ವ, ಮಾರ್ಗದರ್ಶನ ಮುಂದಿಟ್ಟುಕೊಂಡೇ ನಮ್ಮ ಸರ್ಕಾರ ಮುನ್ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ವಿಚಾರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಹೈಕಮಾಂಡ್ ಹೇಳಿದಂತೆ ಸಿದ್ದರಾಮಯ್ಯ ನಡೆದುಕೊಂಡಿದ್ದಾರೆ. ಅವರು ನಮ್ಮ ನಾಯಕರು, ಪ್ರಶ್ನಾತೀತ ನಾಯಕರು. ಅವರ ನಾಯಕತ್ವ, ಮಾರ್ಗದರ್ಶನ ಮುಂದೆಯೂ ಇರುತ್ತದೆ ಎಂದು ಹೇಳಿದರು. ಮುಂದಿನ […]

ಮತ್ತಷ್ಟು ಓದಿ..

ನಂದಗಡ ಕಾರ್ಯಕ್ರಮ: ಸಿದ್ಧತೆ ಪರಿಶೀಲಿಸಿದ ಚನ್ನರಾಜ ಹಟ್ಟಿಹೊಳಿ

ಕಾರ್ಯಕ್ರಮಕ್ಕೆ ಬಂದವರಿಗೆಲ್ಲ ಭೋಜನದ ವ್ಯವಸ್ಥೆ ಮಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಬೆಳಗಾವಿ ಜಿಲ್ಲೆಯ ನಂದಗಡದಲ್ಲಿ ಸೋಮವಾರ ನಡೆಯಲಿರುವ ವೀರಭೂಮಿ ಲೋಕಾರ್ಪಣೆ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿ ಅನಾವರಣ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಪರಿಶೀಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಧ್ಯಾಹ್ನ 12 ಗಂಟೆಗೆ ವೀರಭೂಮಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಕನಕ ಗುರುಪೀಠದ ಡಾ.ನಿರಂಜನಾನಂದ ಪುರಿ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಹಲವಾರು ಸಚಿವರು, ಗಣ್ಯರು ಕಾರ್ಯಕ್ರಮದಲ್ಲಿ […]

ಮತ್ತಷ್ಟು ಓದಿ..

ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳು ಪದಕ ಗೆಲ್ಲುವ ವಿಶ್ವಾಸವಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಡಿಸೆಂಬರ್ 21: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ತಿಳಿಸಿದರು. ಅವರು ಇಂದು ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ […]

ಮತ್ತಷ್ಟು ಓದಿ..

ಮುನವಳ್ಳಿಯನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಲು ಆಗ್ರಹಿಸಿ ಸಿಎಂಗೆ ಮನವಿ

ಬೆಳಗಾವಿ: ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಮಾಡಬೇಕೆಂದು ಆಗ್ರಹಿಸಿ ಸಿಎಂ‌ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ಹಲವಾರು ವರ್ಷಗಳಿಂದ ರೈತ ಮುಖಂಡರು, ಹಲವಾರು ಸಂಘಟನೆಗಳು ಮತ್ತು ಸಂಘ ಸಂಸ್ಥೆಗಳು ಹೋರಾಟ ನಡೆಸಿದ್ದರೂ ಕೂಡ ಈ ವರೆಗೂ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಇನ್ನು ಮುನವಳ್ಳಿ ಪಟ್ಟಣದ ಸುತ್ತಮುತ್ತಲಿನ ಗ್ರಾಮ, ಪಟ್ಟಣಗಳ ಅಭಿವೃದ್ಧಿ ದೃಷ್ಟಿಯಿಂದ ಹಾಗೂ ಮುನವಳ್ಳಿಯು ಮಧ್ಯ ಭಾಗದಲ್ಲಿರುವುದರಿಂದ ಮುನವಳಿಯನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿ  ಶ್ರೀಮುರುಗೇಂದ್ರ ಸ್ವಾಮಿಗಳು, ಬೈಲಹೊಂಗಲದ ಸ್ವಾಮಿಗಳು ಹಾಗೂ […]

ಮತ್ತಷ್ಟು ಓದಿ..

ಮುಖ್ಯಮಂತ್ರಿಗಳಿಂದ ಇ-ಖಾತಾ ಲೋಕಾರ್ಪಣೆ, ಪೌರಕಾರ್ಮಿಕರಿಗೆ ನೇಮಕಾತಿ ಆದೇಶ, ಮನೆಗಳ ಹಕ್ಕುಪತ್ರಗಳ ವಿತರಣೆ

ಬೆಳಗಾವಿ ಸುವರ್ಣಸೌಧ ಡಿ.18. (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಡಿ.18 ರಂದು ಇ-ಖಾತಾ ಸೌಕರ್ಯಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಬೆಳಗಾವಿಯ ಸುವರ್ಣವಿಧಾನಸೌಧದ ಸಭಾಂಗಣದಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳ ಮತ್ತು ಮನೆಯ ಹಕ್ಕುಪತ್ರಗಳ ವಿತರಣೆಗೆ ಸಹ ಅವರು ಚಾಲನೆ ನೀಡಿದರು. ಸಮಾರಂಭದಲ್ಲಿ ಇ-ಖಾತಾ ಕೈಪಿಡಿ ಬಿಡುಗಡೆ ಮಾಡಲಾಯಿತು. ಇದೇ ವೇಳೆ ಬೆಳಗಾವಿಯ 127 ಪೌರ ಕಾರ್ಮಿಕರಿಗೆ ಖಾಯಂ […]

ಮತ್ತಷ್ಟು ಓದಿ..

2023 ರಿಂದಲೇ ನೇಕಾರರಿಗೆ ಉಚಿತ ವಿದ್ಯುತ್‌ ಬೇಡಿಕೆ ಪರಿಶೀಲನೆ ಭರವಸೆ: ಸಚಿವ ಶಿವಾನಂದ ಪಾಟೀಲ್

ಬೆಳಗಾವಿ: ವಿದ್ಯುತ್‌ ಮಗ್ಗಗಳಿಗೆ ಹತ್ತು ಅಶ್ವಶಕ್ತಿವರೆಗೆ ನವೆಂಬರ್‌ 2023ರಿಂದ ಜಾರಿ ಮಾಡಿರುವ ಉಚಿತ ವಿದ್ಯುತ್‌ ಪೂರೈಕೆ ಯೋಜನೆಯನ್ನು ಏಪ್ರಿಲ್‌ನಿಂದ ಅನ್ವಯಗೊಳಿಸುವ ನೇಕಾರರ ಬೇಡಿಕೆಯನ್ನು ಪರಿಗಣಿಸಲಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಶಶಿಕಲಾ ಜೊಲ್ಲೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹತ್ತು ಅಶ್ವಶಕ್ತಿವರೆಗಿನ ವಿದ್ಯುತ್‌ ಮಗ್ಗಗಳಿಗೆ ಉಚಿತ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ಈ ಆದೇಶ ನವಂಬರ್‌ನಿಂದ ಜಾರಿಗೆ ಬಂದಿದ್ದು, ಅಂದಿನಿಂದ […]

ಮತ್ತಷ್ಟು ಓದಿ..

ರಾಜ್ಯ 7ನೇ ವೇತನ ಆಯೋಗದ ಸಂಪುಟ 1ರ ವರದಿಯ ಶಿಫಾರಸ್ಸು ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ ಸುವರ್ಣವಿಧಾನಸೌಧ ಡಿ.11 (ಕ.ವಾ.): ವಿಶೇಷ ಚೇತನ ರಾಜ್ಯ ಸರ್ಕಾರಿ ನೌಕರರಿಗೆ ವಾಹನ ಖರೀದಿಗೆ ಪ್ರಸ್ತುತ ನೀಡಲಾಗುತ್ತಿರುವ ಸಹಾಯಧನದ ಪರಿಷ್ಕರಣೆಯನ್ನೂ ಒಳಗೊಂಡಂತೆ ಸರ್ಕಾರಿ ನೌಕರರಿಗೆ ಲಭ್ಯವಿರುವ ವಿವಿಧ ಭತ್ಯೆ ಮತ್ತು ಸೌಲಭ್ಯಗಳ ಪರಿಷ್ಕರಣೆ ಕುರಿತಂತೆ ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ಸಂಪುಟ-1ರ ವರದಿಯಲ್ಲಿನ ಶಿಫಾರಸ್ಸುಗಳು ಪ್ರಸ್ತುತ ಸರ್ಕಾರದ ಪರಿಶೀಲನೆಯಲ್ಲಿರುತ್ತದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೇಳಿದರು. ಪರಿಷತ್ತಿನಲ್ಲಿ ಡಿ.11ರಂದು ಸದಸ್ಯರಾದ ಬಲ್ಕೀಸ್ ಬಾನು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, 7ನೇ ರಾಜ್ಯ ವೇತನ […]

ಮತ್ತಷ್ಟು ಓದಿ..

ಎಸ್.ನಿಜಲಿಂಗಪ್ಪ ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 10: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿ. ಎಸ್. ನಿಜಲಿಂಗಪ್ಪರವರ ಜನ್ಮ ದಿನದ ಅಂಗವಾಗಿ ಸುವರ್ಣ ವಿಧಾನಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಮಾತನಾಡಿದರು. ನಿಜಲಿಂಗಪ್ಪನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹಾಗೂ ಅವಿಭಜಿತ ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರಾಗಿದ್ದರು. ಪ್ರಧಾನಿ ಇಂದಿರಾ ಗಾಂಧಿ ಯವರೊಂದಿಗೆ ರಾಜಕೀಯ ಭಿನ್ನಾಭಿಪ್ರಾಯ ಬೆಳೆದು ಬೇರೆ […]

ಮತ್ತಷ್ಟು ಓದಿ..