ವರಿಷ್ಠರ ತೀರ್ಮಾನಕ್ಕೆ ನಾನು, ಡಿಕೆ ಬದ್ಧರಾಗಿರಬೇಕು: ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ (ಶಿಡ್ಲಘಟ್ಟ): ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಅಪಪ್ರಚಾರ:ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ . ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. […]

ಮತ್ತಷ್ಟು ಓದಿ..

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ನವೆಂಬರ್ 28 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆಹ್ವಾನ ನೀಡಿದರು. ಸದಾಶಿವ ನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಅಧಿಕಾರಿಗಳೊಂದಿಗೆ ತೆರಳಿದ ಸಚಿವರು, ಅಂದಿನ ಐತಿಹಾಸಿಕ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಆಹ್ವಾನ ಪತ್ರಿಕೆ […]

ಮತ್ತಷ್ಟು ಓದಿ..

ಉ.ಕ ಅಭಿವೃದ್ದಿಗೆ ಸರ್ಕಾರಗಳ ಅಸಡ್ಡೆ  ಬೆಳಗಾವಿ ಅಧಿವೇಶನ ವೇಳೆ ಜೋರಾಗಲಿದೆ ಪ್ರತ್ಯೇಕ ರಾಜ್ಯದ ಹೋರಾಟ

ಬೆಳಗಾವಿ: ಬೆಳಗಾವಿಯ ಚಳಿಗಾಲದ ಅಧಿವೇಶನ ಇಡೀ ರಾಜ್ಯದ ಗಮನ ಸೆಳೆಯಲಿದೆ. ಉತ್ತರ ಕರ್ನಾಟಕಕ್ಕೆ ಆಗ್ತಿರೋ ಅನ್ಯಾಯದ ವಿರುದ್ಧ ಪ್ರತ್ಯೇಕ ರಾಜ್ಯದ ಕೂಗು ಜೋರಾಗಲಿದೆ. ಉತ್ತರ ಕರ್ನಾಟಕ ಹೋರಾಟ ಸಮಿತಿ ಪತ್ರ ಚಳುವಳಿ, ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದೆ. ಅತ್ತ ಕಾಂಗ್ರೆಸ್ ಶಾಸಕ ರಾಜು ಕಾಗೆ ನೇತೃತ್ವದಲ್ಲಿ ಉತ್ತರ ಕರ್ನಾಟಕದ 26 ಜನ ಶಾಸಕರು ಸದನದಲ್ಲಿ ಧ್ವನಿಯತ್ತಲಿದ್ದಾರೆ ಅಂತಾ ಹೋರಾಟ ಸಮಿತಿ ಹೇಳಿಕೊಂಡಿದೆ. ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಕಳೆದ 13 ವರ್ಷಗಳಿಂದ ನಿರಂತರವಾಗಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. […]

ಮತ್ತಷ್ಟು ಓದಿ..

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಬೆಂಗಳೂರು ನ22: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದರು. ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ […]

ಮತ್ತಷ್ಟು ಓದಿ..

ಕಲಿತ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ನವೆಂಬರ್ 11: ನಾವು ಕಲಿಯುವ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು. ಇಲ್ಲದಿದ್ದರೆ ಸಾಕ್ಷರರಾಗಿ ಪ್ರಯೋಜನೆವಿಲ್ಲ. ಶಿಕ್ಷಣ ವೈಚಾರಿಕತೆ ಹಾಗೂ ವೈಜ್ಞಾನಿಕತೆಯಿಂದ ಕೂಡಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ಜಿಲ್ಲಾ ಬಿಸಿಎಂ ವಿದ್ಯಾರ್ಥಿನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘ ಯೋಜಿಸಿದ್ದ ಸಂಘದ ಪ್ರಥಮ ವಾರ್ಷಿಕೋತ್ಸವ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ದೇವರಾಜು ಅರಸು ಮತ್ತು ಹಾವನೂರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಬಿಸಿಎಂ ಹಾಸ್ಟೆಲ್ಗಳಲ್ಲಿ ಓದಿರುವವರಿಗೆ ಉಚಿತ ಶಿಕ್ಷಣ, ಆಹಾರ, ವಸತಿಗಳು ದೊರೆತಿದ್ದು, […]

ಮತ್ತಷ್ಟು ಓದಿ..

ಸುವರ್ಣ ಮಹೋತ್ಸವ ಮುಂದಿನ 50 ವರ್ಷಕ್ಕೆ ಪೀಠಿಕೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಮುಂದಿನ 50 ವರ್ಷಕ್ಕೆ ಪೀಠಿಕೆ ಹಾಕಿದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಪೂರ್ವಭಾವಿ […]

ಮತ್ತಷ್ಟು ಓದಿ..

ಪಾಕಿಸ್ತಾನಕ್ಕೆ ಮಲ್ಫೆಯ ಕೊಚ್ಚಿನ್ ಶಿಪ್ಯಾರ್ಡ್ ರಹಸ್ಯ ಮಾಹಿತಿ ಸೋರಿಕೆ: ಇಬ್ಬರ ಬಂಧನ

ಒಂದೂವರೆ ವರ್ಷಗಳಿಂದ ಮಾಹಿತಿ ರವಾನಿಸಿ ಹಣ ಗಳಿಸುತ್ತಿದ್ದ ಖದೀಮರು! ಉಡುಪಿ: ಮಲ್ಪೆಯ ಕೊಚ್ಚಿನ್‌ ಶಿಪ್ಯಾರ್ಡ್‌ ಕಂಪೆನಿಯಲ್ಲಿ ನೌಕರಿ ಮಾಡುತ್ತಿದ್ದ ಇಬ್ಬರು ಪಾಕಿಸ್ಥಾನಕ್ಕೆ ಗೌಪ್ಯ ಮಾಹಿತಿ ರವಾನಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಇಬ್ಬರನ್ನೂ  ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ರೋಹಿತ್‌ (29) ಮತ್ತು ಸಂತ್ರಿ (37) ಬಂಧಿತರು. ಏನಿದರ ಹಿನ್ನೆಲೆ? ಯಾಕಾಗಿ ಈ ಕೆಲಸ ಮಾಡ್ತಾ ಇದ್ರು? ಈ ಸ್ಟೋರಿ ಓದಿ. ಮಲ್ಪೆಯ ಕೊಚ್ಚಿನ್‌ ಶಿಪ್ಯಾರ್ಡ್‌ ಕಂಪೆನಿ‌ ಕೇಂದ್ರ ಸರ್ಕಾರ ಸ್ವಾಮ್ಯದ ಬಂದರು ಹಡಗು ಮತ್ತು ಜಲಸಾರಿಗೆ ಇಲಾಖೆಯ […]

ಮತ್ತಷ್ಟು ಓದಿ..

ಸಿಎಂ ಖುರ್ಚಿ ಕಿತ್ತಾಟ ಸಚಿವ ಕೆ.ಹೆಚ್.ಮುನಿಯಪ್ಪ ಶಾಕಿಂಗ್ ಹೇಳಿಕೆ

ದೇವನಹಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನೆಲೆಯಲ್ಲಿರುವಾಗಲೇ ಸಚಿವ ಕೆ.ಹೆಚ್.ಮುನಿಯಪ್ಪ ಶಾಕಿಂಗ್ ಹೇಳಿಕೆಯನ್ನು ಕೊಟ್ಟಿದ್ದಾರೆ. ದೇವನಹಳ್ಳಿಯಲ್ಲಿ ಇಂದು ಮಾತನಾಡಿದ ಸಚಿವ ಮುನಿಯಪ್ಪ, ಪವರ್ ಶೇರಿಂಗ್ ವಿಚಾರ ಎಐಸಿಸಿ ಅಧ್ಯಕ್ಷರ ಬಳಿ ಈಗಾಗಲೇ ಮಾತನಾಡಿದ್ದಾರಂತೆ. ಕೆಲ ದಿನಗಳ ಹಿಂದೆ ಸಚಿವ ಕೆ.ಹೆಚ್.ಮುನಿಯಪ್ಪ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರಂತೆ. ಮಾತುಕತೆ ಸಮಯದಲ್ಲಿ ಸಿಎಂ ಅವಧಿ ಬಗ್ಗೆ ಇಬ್ಬರ ನಡುವೆ ಚರ್ಚೆಯಾಗಿದ್ದು, ನೀವು ತಕ್ಷಣ ಏನಾದ್ರು ಒಂದು ತೀರ್ಮಾನ ಮಾಡಿ ಎಂದಿದ್ದೇನೆ. ಅಧಿಕಾರ ಹಂಚಿಕೆ ವಿಚಾರದಲ್ಲಿ […]

ಮತ್ತಷ್ಟು ಓದಿ..

ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ -25 ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರೊಡನೆ ಮಕ್ಕಳ ಸಮಾಲೋಚನೆ ಎಂಬ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಪ್ರತಿಯೊಬ್ಬರು ಜೀವನದಲ್ಲಿ ತಮ್ಮದೇ ಆದ ಗುರಿ ಇಟ್ಟು ಕೊಳ್ಳಬೇಕು ಎಂದು ಕರೆ ನೀಡಿದರು. ನಾವು ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೂ ನಂಬರ್ 1 ಸ್ಥಾನಕ್ಕೇರಲು ಪ್ರಯತ್ನಿಸಬೇಕು. ತಂದೆ, ತಾಯಿ, ಶಿಕ್ಷಕರ ಕನಸನ್ನು ನನಸಾಗಿಸಬೇಕು. ಪ್ರತಿಯೊಂದಕ್ಕೂ ಗುರಿ ಇಟ್ಟುಕೊಂಡು ಮುಂದೆ ಸಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಕ್ಕಳ […]

ಮತ್ತಷ್ಟು ಓದಿ..

ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ತ್ವರಿತ ಸಾಲ ಸೌಲಭ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

ಬೆಂಗಳೂರು: ರಾಜ್ಯದ ಮಹಿಳೆಯರು ಸಣ್ಣ ಪ್ರಮಾಣದ ಉದ್ಯಮಗಳನ್ನು ಸ್ಥಾಪಿಸಲು ಸರ್ಕಾರವು ಆರ್ಥಿಕವಾಗಿ ಮತ್ತು ಎಲ್ಲ ರೀತಿಯಲ್ಲಿ ಬೆಂಬಲ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ಭರವಸೆ ನೀಡಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ವತಿಯಿಂದ ನಡೆದ ಅಂತಾರಾಷ್ಟ್ರೀಯ ಮಹಿಳಾ ಉದ್ದಿಮೆದಾರರ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮಹಿಳಾ ಉದ್ಯಮಿಗಳಿಗೆ ಅಥವಾ ಸ್ವಂತ ಉದ್ಯಮ ಆರಂಭಿಸಲು ಬಯಸುವ ಮಹಿಳೆಯರಿಗೆ ಸರ್ಕಾರವು ಶೇಕಡಾ 3ರ ವಾರ್ಷಿಕ ಬಡ್ಡಿದರದಲ್ಲಿ 5 […]

ಮತ್ತಷ್ಟು ಓದಿ..