ಮಂಡ್ಯ ಭೂವರಾಹನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ ದಂಪತಿ: ತಿಹಾರ ಜೈಲು ನೆನೆದ ಡಿಸಿಎಂ

ಮಂಡ್ಯ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ಮಂಡ್ಯ ಜಿಲ್ಲೆಯ ಸುಪ್ರಸಿದ್ಧ ಭೂವರಾಹನಾಥ ದೇವಾಲಯಕ್ಕೆ ದಂಪತಿ ಸಮೇತ ಭೇಟಿ ನೀಡಿ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದ ಡಿಕೆಶಿ ಭೂವರಾಹನಾಥ ದೇವಾಲಯದ ಹಿನ್ನೆಲೆ ಮತ್ತು ತಮ್ಮ ವೈಯಕ್ತಿಕ ಅನುಭವಗಳನ್ನು ಮೆಲುಕು ಹಾಕಿದ್ರು. ಭೂವರಾಹನಾಥ ದೇವಾಲಯಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ದಂಪತಿ ವಿವಿಧ ಪೂಜಾ ಕಾರ್ಯಗಳಲ್ಲಿ ಭಾಗಿಯಾದರು. ಪೂಜೆಯ ಭಾಗವಾಗಿ ಹೋಮ ಕುಂಡಕ್ಕೆ ಪೂರ್ಣಾಹುತಿ ಸಲ್ಲಿಸಿದ […]

ಮತ್ತಷ್ಟು ಓದಿ..

ವಿಶೇಷಚೇತನರಿಗೆ ಪ್ರತ್ಯೇಕ ನಿಗಮ/ಮಂಡಳಿ ರಚನೆಗೆ ಮುಖ್ಯಮಂತ್ರಿಗೆ ಸಚಿವ ಸಂತೋಷ್ ಲಾಡ್ ಪತ್ರ

ಬೆಂಗಳೂರು: ಸರ್ಕಾರದ ಸವಲತ್ತುಗಳನ್ನು ತ್ವರಿತವಾಗಿ ಮತ್ತು ನೇರವಾಗಿ ತಲುಪಿಸಲು ಸಾಧ್ಯವಾಗುವಂತೆ ವಿಶೇಷ ಚೇತನರಿಗಾಗಿಯೇ ಒಂದು ಪ್ರತ್ಯೇಕ ನಿಗಮ ಅಥವಾ ಮಂಡಳಿಯ ಸ್ಥಾಪನೆಯ ಅಗತ್ಯವಿದೆ ಎಂದು ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಪ್ರತಿಪಾದಿಸಿದ್ದಾರೆ. ಈ ವಿಷಯದ ಸಂಬಂಧ ಶುಕ್ರವಾರ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿರುವ ಸಚಿವರು, ಸದ್ಯ ವಿಶೇಷಚೇತನರ ಇಲಾಖೆಯು ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರನ್ನು ಒಳಗೊಂಡ ಇಲಾಖೆಯಲ್ಲಿ ಇರುವುದರಿಂದ, ಈ ಇಲಾಖೆಯು ಬಹಳ […]

ಮತ್ತಷ್ಟು ಓದಿ..

ಸಿಎಂ ಖುರ್ಚಿ ಕದನ ಉಭಯ ನಾಯಕರ ಜಂಟಿ ಸುದ್ದಿಗೋಷ್ಠಿ: ರಾಜಕೀಯ ಮೇಲಾಟಕ್ಕೆ ತಾತ್ಕಾಲಿಕ ವಿರಾಮ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ ತೆರಳಿ ಬ್ರೇಕ್ ಫಾಸ್ಟ್ ಮೀಂಟಿಂಗ್ ನಲ್ಲಿ ಭಾಗವಹಿಸಿದರು. ಇದೇ ವೇಳೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಸಿಎಂ ಅವರನ್ನು ಸಿಎಂ ಸಿದ್ದರಾಮಯ್ಯ ಬರಮಾಡಿಕೊಂಡರು. ಸಿಎಂ ನಿವಾಸದಲ್ಲೇ ಉಭಯ ನಾಯಕರು ಉಪಹಾರ ಮಾಡುತ್ತ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ಬ್ರೇಕ್ ಫಾಸ್ಟ್ ಮುಗಿಸಿ ಉಭಯ ನಾಯಕರು ನಗುನಗುತ್ತಲೇ ಹೊರಬಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರೊಂದಿಗೆ ಮಾತನಾಡಿದರು. ನಾನು, ಡಿ.ಕೆ.ಶಿವಕುಮಾರ್ ಹಾಗೂ ಪೊನ್ನಣ್ಣ ಬ್ರೇಕ್ […]

ಮತ್ತಷ್ಟು ಓದಿ..

ರಾಜ್ಯದಲ್ಲಿ ಮಾನ್ಸೂನ್ ಅವಧಿಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆ ಹಾನಿ: ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಸರ್ಕಾರ

ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದ ಸಿಎಂ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಚಾಲನೆ ಬೆಂಗಳೂರು: ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾಲನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ. 1033.60 ಕೋಟಿ […]

ಮತ್ತಷ್ಟು ಓದಿ..

ಭೀಕರ ಅಪಘಾತ ಐಎಎಸ್‌ ಅಧಿಕಾರಿ ಮಹಾಂತೇಶ ಬಿಳಗಿ ದುರ್ಮರಣ: ರಾಮದುರ್ಗದ ಮನೆಯಲ್ಲಿ ನೀರವ ಮೌನ

ಕಲಬುರಗಿ: ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬಿಳಗಿ ದುರ್ಮರಣಕ್ಕಿಡಾಗಿದ್ದಾರೆ. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿಯ ಗೌನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಾಂತೇಶ್‌ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯವರಾದ 2012 ಬ್ಯಾಚಿನ ಅಧಿಕಾರಿಯಾಗಿದ್ದ ಮಹಾಂತೇಶ ಬಿಳಗಿ ಕರ್ನಾಟಕ ಸ್ಟೇಟ್‌ ಮಿನರಲ್ಸ್‌ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ವಿಜಯಪುರದಿಂದ ಸಂಬಂಧಿಕರ ಮದುವೆಗೆ ತೆರಳುತ್ತಿದ್ದ ವೇಳೆ ಇವರು ಪ್ರಯಾಣಿಸುತ್ತಿದ್ದ ಇನ್ನೊವಾ ಕಾರು ಅಪಘಾತವಾಗಿದೆ. ಮೂಲಗಳ ಪ್ರಕಾರ ಮಹಾಂತೇಶ ಬಿಳಗಿ ಅವರೊಂದಿಗೆ […]

ಮತ್ತಷ್ಟು ಓದಿ..

2028ರಲ್ಲಿ ಪುನಃ ಕಾಂಗ್ರೆಸ್ ಅಧಿಕಾರಕ್ಕೆ ತರುವುದೇ ನಮಗೆ ಮುಖ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಸದ್ಯದ ರಾಜಕೀಯ ಬೆಳವಣಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಅದೇನಿದ್ದರೂ ಹೈಕಮಾಂಡ್‌ ಗೆ ಬಿಟ್ಟ ವಿಚಾರ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವುದೇ ನಮಗೆಲ್ಲರಿಗೂ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕ‌ರ್ ಹೇಳಿದರು. ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಕಾರ್ಯಕ್ರಮದ ಸಿದ್ಧತೆಯಲ್ಲಿ […]

ಮತ್ತಷ್ಟು ಓದಿ..

ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ, ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 25: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ.‌ ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು. ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕುಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ […]

ಮತ್ತಷ್ಟು ಓದಿ..

ಡಿಕೆಶಿ ಬಳಿ 50 ಶಾಸಕರಿದ್ದರೆ ಈಗಲೇ ಸಿಎಂ ಮಾಡೋಣ: ರಮೇಶ್ ಜಾರಕಿಹೊಳಿ‌ ವ್ಯಂಗ್ಯ

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಿಎಂ ಖುರ್ಚಿ ಹಗ್ಗಜಗ್ಗಾಟ ಮುಂದುವರೆದಿದೆ. ಈ ಮಧ್ಯೆ ದೋಸ್ತಿ ಸರ್ಕಾರ ಬೀಳಿಸಿದ್ದ ರಮೇಶ್ ಜಾರಕಿಹೊಳಿ‌ ದಿಢೀರ್ ಪ್ರತ್ಯಕ್ಷವಾಗಿದ್ದಾರೆ.‌ ಶಾಸಕರ ನಂಬರ್ ಗೇಮ್ ಡಿಕೆಶಿ ಬಳಿಯಿಲ್ಲಾ, 50 ಶಾಸಕರಿದ್ದರೆ ಈಗಲೇ ಸಿಎಂ ಮಾಡೋಣಾ ಅಂತಾ ರಮೇಶ್ ಜಾರಕಿಹೊಳಿ‌ ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಈಗ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ಜೋರಾಗಿದೆ. ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣ ಆಗುತ್ತಿದ್ದಂತೆ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ಶುರುವಾಗಿದ್ದು, ರಾಜಕೀಯ ಚಟುವಟಿಕೆ ಗರಿಗೆದರಿದೆ.‌ ಅಂದು ಕಾಂಗ್ರೆಸ್ […]

ಮತ್ತಷ್ಟು ಓದಿ..

ನಾನು ಯಾವ ಬಣವೂ ಅಲ್ಲಾ, ಸಿಎಂ – ಡಿಸಿಎಂ ಇಬ್ಬರೂ ನಮ್ಮವರೆ: ಯೋಗಿಶ್ವರ್

ರಾಮನಗರ: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಬೆಂಗಳೂರು ‌ದಕ್ಷಿಣ ಜಿಲ್ಲೆ ಚನ್ನಪಟ್ಟಣದಲ್ಲಿ ‌ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಸಿಎಂ, ಡಿಸಿಎಂ ಇಬ್ಬರು ನಮ್ಮವರು. ಕ್ಷೇತ್ರದ ಅಭಿವೃದ್ಧಿ ‌ವಿಚಾರವಾಗಿ ಸಿಎಂ, ಡಿಸಿಎಂ ಅವರನ್ನ ಭೇಟಿಯಾಗಿದ್ದೆ. ಇಂದು ಸಹಾ ಸಿಎಂ ಬಳಿ ಚರ್ಚೆ ಮಾಡಿ ಬಂದಿದಿನಿ. ಆದರೆ ರಾಜಕಾರಣ ಚರ್ಚೆ ಮಾಡಿಲ್ಲ ಎಂದಿದ್ದಾರೆ. ನಾನು ಯಾವ ಬಣನೂ ಅಲ್ಲ. ನಾನು ಕಾಂಗ್ರೆಸ್ ನಲ್ಲಿ ‌ಒಂದು ವರ್ಷದ ಮಗು ಎಂದಿರುವ ಯೋಗಿಶ್ವರ್, ಕೆಲ ಶಾಸಕರು ದೆಹಲಿಗೆ […]

ಮತ್ತಷ್ಟು ಓದಿ..

ವರಿಷ್ಠರ ತೀರ್ಮಾನಕ್ಕೆ ನಾನು, ಡಿಕೆ ಬದ್ಧರಾಗಿರಬೇಕು: ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ (ಶಿಡ್ಲಘಟ್ಟ): ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಅಪಪ್ರಚಾರ:ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ . ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. […]

ಮತ್ತಷ್ಟು ಓದಿ..