ಬೆಳಗಾವಿ ಸುವರ್ಣ ಸೌಧದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸುದ್ಧಿಗೋಷ್ಠಿ: ಕೃಷಿ, ನೀರಾವರಿ ಹಾಗೂ ಆಡಳಿತ ಸುಧಾರಣೆಗೆ ದಿಕ್ಸೂಚಿ

ಬೆಳಗಾವಿ: ಕಿತ್ತೂರು ಕರ್ನಾಟಕ ಭಾಗದ ಅಭಿವೃದ್ಧಿ, ಜಲಸಂಪನ್ಮೂಲ ನಿರ್ವಹಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುವರ್ಣ ಸೌಧದಲ್ಲಿ ವಿಭಾಗ ಮಟ್ಟದ ಶಾಸಕರು ಮತ್ತು ಅಧಿಕಾರಿಗಳ ಮಹತ್ವದ ಸಭೆ ನಡೆಸಿ, ಬಳಿಕ ಸುದ್ಧಿಗೋಷ್ಠಿಯಲ್ಲಿ ಸರ್ಕಾರದ ಹಲವು ಐತಿಹಾಸಿಕ ತೀರ್ಮಾನಗಳನ್ನು ಪ್ರಕಟಿಸಿದರು.ರಾಜ್ಯದ ಹಿತದೃಷ್ಟಿಯಿಂದ ಪಕ್ಷಾತೀತವಾಗಿ ಎಲ್ಲ ಶಾಸಕರನ್ನು ಈ ಸಭೆಗೆ ಆಹ್ವಾನಿಸಲಾಗಿತ್ತು ಎಂದು ತಿಳಿಸಿದ ಸಿಎಂ, ಪ್ರಸ್ತುತ ಎದುರಾಗಿರುವ ನೀರಿನ ಬಿಕ್ಕಟ್ಟು ಮತ್ತು ಕೃಷಿ ಸವಾಲುಗಳನ್ನು ಎದುರಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದರು. […]

ಮತ್ತಷ್ಟು ಓದಿ..

ಬೆಳಗಾವಿ ಮೃಗಾಲಯದ ಕೃಷ್ಣಮೃಗ ವಿಭಾಗಕ್ಕೆ ಖಂಡ್ರೆ ಭೇಟಿ: ವನ್ಯಮೃಗಗಳ ಬಗ್ಗೆ ಹೆಚ್ಚಿನ ಕಾಳಜಿಗೆ ಸೂಚನೆ

ಬೆಳಗಾವಿ, ಡಿ.8: ಗಳಲೆ ರೋಗದಿಂದ 31 ಕೃಷ್ಣಮೃಗಗಳು ಸಾವನ್ನಪ್ಪಿದ ಭೂತರಾಮನಹಟ್ಟಿ, ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಇಂದು ಭೇಟಿ ನೀಡಿ ಪರಿಶೀಲಿಸಿದ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ವನ್ಯಜೀವಿಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಸೂಚಿಸಿದರು. ಕೃಷ್ಣಮೃಗಗಳ ವಿಭಾಗಕ್ಕೆ ಭೇಟಿ ನೀಡಿ ಪಶುವೈದ್ಯರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಮೃಗಾಲಯದಲ್ಲಿರುವ ಎಲ್ಲ ಪ್ರಾಣಿಗಳ ಆರೋಗ್ಯದ ಬಗ್ಗೆ ನಿಗಾ ಇಡಲು ಮತ್ತು ಲಸಿಕೆಗಳನ್ನು ನೀಡಲು ಸೂಚಿಸಿದರು.ಈ ಸಂದರ್ಭದಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ […]

ಮತ್ತಷ್ಟು ಓದಿ..