ಪಾಲಕರು ಎಷ್ಟೇ ಬ್ಯುಸಿ ಇದ್ದರೂ ಮಕ್ಕಳ ಚಟುವಟಿಕೆ ಮೇಲೆ ಗಮನ ಇಡಬೇಕು: ಎಸ್ಪಿ ಡಾ.ಭೀಮಾಶಂಕರ ಗುಳೇದ
ಬೆಳಗಾವಿ: ಜೈನ್ ಹೆರಿಟೇಜ್ ಸ್ಕೂಲ್ ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಒತ್ತು ನೀಡುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಹೇಳಿದ್ದಾರೆ. ಶುಕ್ರವಾರ ಸಂಜೆ, ರಾಣಿ ಚನ್ನಮ್ಮ ನಗರದ ಜೈನ್ ಹೆರಿಟೇಜ್ ಸ್ಕೂಲ್ ನ 15ನೇ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡುತ್ತಿದ್ದರು. ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸೇರಿದಂತೆ ಎಲ್ಲ ವಿಭಾಗಗಳಲ್ಲಿ ಒತ್ತು ಕೊಟ್ಟು ಮಕ್ಕಳನ್ನು ಬೆಳೆಸಲಾಗುತ್ತಿದೆ. ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಇದು ಅಗತ್ಯ ಎಂದು ಅವರು ಹೇಳಿದರು. […]
ಮತ್ತಷ್ಟು ಓದಿ..
