ಬೆಳಗಾವಿ ಸುವರ್ಣ ಸೌಧದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸುದ್ಧಿಗೋಷ್ಠಿ: ಕೃಷಿ, ನೀರಾವರಿ ಹಾಗೂ ಆಡಳಿತ ಸುಧಾರಣೆಗೆ ದಿಕ್ಸೂಚಿ

ಬೆಳಗಾವಿ: ಕಿತ್ತೂರು ಕರ್ನಾಟಕ ಭಾಗದ ಅಭಿವೃದ್ಧಿ, ಜಲಸಂಪನ್ಮೂಲ ನಿರ್ವಹಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುವರ್ಣ ಸೌಧದಲ್ಲಿ ವಿಭಾಗ ಮಟ್ಟದ ಶಾಸಕರು ಮತ್ತು ಅಧಿಕಾರಿಗಳ ಮಹತ್ವದ ಸಭೆ ನಡೆಸಿ, ಬಳಿಕ ಸುದ್ಧಿಗೋಷ್ಠಿಯಲ್ಲಿ ಸರ್ಕಾರದ ಹಲವು ಐತಿಹಾಸಿಕ ತೀರ್ಮಾನಗಳನ್ನು ಪ್ರಕಟಿಸಿದರು.ರಾಜ್ಯದ ಹಿತದೃಷ್ಟಿಯಿಂದ ಪಕ್ಷಾತೀತವಾಗಿ ಎಲ್ಲ ಶಾಸಕರನ್ನು ಈ ಸಭೆಗೆ ಆಹ್ವಾನಿಸಲಾಗಿತ್ತು ಎಂದು ತಿಳಿಸಿದ ಸಿಎಂ, ಪ್ರಸ್ತುತ ಎದುರಾಗಿರುವ ನೀರಿನ ಬಿಕ್ಕಟ್ಟು ಮತ್ತು ಕೃಷಿ ಸವಾಲುಗಳನ್ನು ಎದುರಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದರು. […]

ಮತ್ತಷ್ಟು ಓದಿ..

ಎರಡನೇ ಹಂತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ಫಿಕ್ಸ್: ಸಿಎಂ ಡಿಕೆಶಿಯಿಂದ ಬೆಳಗಾವಿಗೆ ವಿಶೇಷ ಪ್ಯಾಕೇಜ್ ನಿರೀಕ್ಷೆ – ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನಾರಚನೆ ಹಾಗೂ ವಿಸ್ತರಣೆಯ ಚಟುವಟಿಕೆಗಳು ಗರಿಗೆದರಿರುವ ಬೆನ್ನಲ್ಲೇ, ದ್ವಿತೀಯ ಹಂತದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಗುವುದು ಖಚಿತ ಎಂದು ಅವರ ಸಹೋದರ ಹಾಗೂ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ ತೀವ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.‌ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸುದೀರ್ಘ ರಾಜಕೀಯ ಸೇವೆ ಹಾಗೂ ಪಕ್ಷ ಸಂಘಟನೆಯನ್ನು ಹೈಕಮಾಂಡ್ ಗುರುತಿಸಲಿದೆ ಎಂದರು. 27 ವರ್ಷಗಳ ಸೇವೆ, ‘ಗೃಹಲಕ್ಷ್ಮಿ’ […]

ಮತ್ತಷ್ಟು ಓದಿ..

ಸಿದ್ದರಾಮಯ್ಯ ಮಾರ್ಗದರ್ಶನದಲ್ಲೇ ಸರ್ಕಾರ ಮುನ್ನಡೆಯುತ್ತದೆ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಪ್ರಶ್ನಾತೀತ ನಾಯಕ. ಅವರ ಮುತ್ಸದ್ಧಿತನ, ನಾಯಕತ್ವ, ಮಾರ್ಗದರ್ಶನ ಮುಂದಿಟ್ಟುಕೊಂಡೇ ನಮ್ಮ ಸರ್ಕಾರ ಮುನ್ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ವಿಚಾರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಹೈಕಮಾಂಡ್ ಹೇಳಿದಂತೆ ಸಿದ್ದರಾಮಯ್ಯ ನಡೆದುಕೊಂಡಿದ್ದಾರೆ. ಅವರು ನಮ್ಮ ನಾಯಕರು, ಪ್ರಶ್ನಾತೀತ ನಾಯಕರು. ಅವರ ನಾಯಕತ್ವ, ಮಾರ್ಗದರ್ಶನ ಮುಂದೆಯೂ ಇರುತ್ತದೆ ಎಂದು ಹೇಳಿದರು. ಮುಂದಿನ […]

ಮತ್ತಷ್ಟು ಓದಿ..

ನಂದಗಡ ಕಾರ್ಯಕ್ರಮ: ಸಿದ್ಧತೆ ಪರಿಶೀಲಿಸಿದ ಚನ್ನರಾಜ ಹಟ್ಟಿಹೊಳಿ

ಕಾರ್ಯಕ್ರಮಕ್ಕೆ ಬಂದವರಿಗೆಲ್ಲ ಭೋಜನದ ವ್ಯವಸ್ಥೆ ಮಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಬೆಳಗಾವಿ ಜಿಲ್ಲೆಯ ನಂದಗಡದಲ್ಲಿ ಸೋಮವಾರ ನಡೆಯಲಿರುವ ವೀರಭೂಮಿ ಲೋಕಾರ್ಪಣೆ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿ ಅನಾವರಣ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಪರಿಶೀಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಧ್ಯಾಹ್ನ 12 ಗಂಟೆಗೆ ವೀರಭೂಮಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಕನಕ ಗುರುಪೀಠದ ಡಾ.ನಿರಂಜನಾನಂದ ಪುರಿ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಹಲವಾರು ಸಚಿವರು, ಗಣ್ಯರು ಕಾರ್ಯಕ್ರಮದಲ್ಲಿ […]

ಮತ್ತಷ್ಟು ಓದಿ..

ಪಾಲಕರಿಗೆ ನೀವೇ ಸರ್ವಸ್ವ, ಅವರ ಕನಸು ನನಸು ಮಾಡಿ: ಚನ್ನರಾಜ ಹಟ್ಟಿಹೊಳಿ

ಹಿರೇಬಾಗೇವಾಡಿ: ಪಾಲಕರಿಗೆ ಮಕ್ಕಳೇ ಸರ್ವಸ್ವ, ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡುತ್ತಾರೆ. ಅಂತಹ ಪಾಲಕರ ಕನಸನ್ನು ನನಸು ಮಾಡುವ ಸಂಕಲ್ಪ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕರೆ ನೀಡಿದ್ದಾರೆ. ಹಿರೇಬಾಗೇವಾಡಿಯ ಗ್ರೂಪ್ ವಿದ್ಯಾವರ್ಧಕ ಸಂಘ (ರಿ) ಕರ್ನಾಟಕ ಸಂಯುಕ್ತ ಪದವಿಪೂರ್ವ ಕಾಲೇಜು, ಕರ್ನಾಟಕ ಬಾಲನಿಕೇತನ ಕನ್ನಡ ಪ್ರಾಥಮಿಕ ಶಾಲೆ, ಶ್ರೀ ಬಿ‌.ಕೆ.ಇಟಗಿ ರಾಷ್ಟ್ರೀಯ ಇಂಗ್ಲಿಷ್ ಮಿಡಿಯಂ ಸ್ಕೂಲ್ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ […]

ಮತ್ತಷ್ಟು ಓದಿ..

ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಳಗಾವಿ: ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದಲ್ಲಿ ನೂತನ ಅಲ್ಪಸಂಖ್ಯಾತರ ಸಮುದಾಯ ಭವನ (ಕಮ್ಯೂನಿಟಿ ಹಾಲ್) ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಮಾತನಾಡಿದ ಸಚಿವರು, ಎಲ್ಲಾ ಸಮಾಜದವರ ಸೇವೆ ಮಾಡುವ ಅವಕಾಶ ನನಗೆ ಲಭಿಸಿದೆ. […]

ಮತ್ತಷ್ಟು ಓದಿ..

ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸಂದಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಳಗಾವಿ: ಸೋಮವಾರದಿಂದ ಶನಿವಾರದೊಳಗೆ (ಡಿಸೆಂಬರ್‌ 22 ರಿಂದ 27) ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.  ಬೆಳಗಾವಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಈಗಾಗಲೇ ಅನುಮತಿ ನೀಡಿದ್ದು, ಸೋಮವಾರದಿಂದ ಹಣ ಸಂದಾಯವಾಗಲಿದೆ ಎಂದರು. ಸತ್ತವರ ಅಕೌಂಟ್‌ಗೂ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ ಆಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ […]

ಮತ್ತಷ್ಟು ಓದಿ..

ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಚಾಲನೆ

ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಮಕ್ಕಳಿದ್ದಲ್ಲಿ, ಮರೆಯದೇ ಹತ್ತಿರದ ಲಸಿಕಾ ಕೇಂದ್ರಕ್ಕೆ ಕರೆತನ್ನಿ. ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಸಚಿವರು ಕರೆ ನೀಡಿದರು. ಈ ವೇಳೆ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಮೇಶ ದಂಡಗಿ, ಪಲ್ಸ್ ಪೋಲಿಯೊ ನೊಡೆಲ್ ಅಧಿಕಾರಿ ಡಾ. ಸಂಜಯ ಡುಮ್ಮಗೋಳ, ಜಿಲ್ಲಾ ಆಯುಷ್ಯ ಅಧಿಕಾರಿ ಶ್ರೀಕಾಂತ ಸುಣಧೋಳಿ, ಡಾ.ಪವನ್ ಗಲಗಲಿ, ಅಂಗನವಾಡಿಯ ಮೇಲ್ವಿಚಾರಕರು, ಆಶಾ ಕಾರ್ಯಕರ್ತೆಯರು ಮುಂತಾದವರು ಉಪಸ್ಥಿತರಿದ್ದರು.

ಮತ್ತಷ್ಟು ಓದಿ..

ಡಿಸಿಎಂ ಡಿ.ಕೆ.ಶಿವಕುಮಾರ್ ಪಿಎಸ್ ಕಾರು ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ: ಸವದತ್ತಿ ಬಳಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಖಾಸಗಿ ಪಿಎಸ್ ರಾಜೇಂದ್ರ ಪ್ರಸಾದ್ ಕಾರು ಅಪಘಾತವಾಗಿದ್ದು, ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಡಿಸಿಎಂ ಖಾಸಗಿ ಕಾರ್ಯದರ್ಶಿ ಹಿರಿಯ ಕೆಎಎಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಕಾರು ಚಾಲಕನಿಗೂ ಗಾಯವಾಗಿದ್ದು, ಧಾರವಾಡದ ಖಾಸಗಿ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.‌ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದು ವಾಪಸ್ […]

ಮತ್ತಷ್ಟು ಓದಿ..

ಮಂಗಳವಾರ ಸುವರ್ಣ ಸೌಧದಲ್ಲಿ  ಬಾಲವಿಕಾಸ ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳ ಪ್ರಧಾನ: ಅಕಾಡೆಮಿಗೆ ಹೊಸ ಸ್ವರೂಪ ನೀಡಿದ ಸಂಗಮೇಶ ಬಬಲೇಶ್ವರ

2 ಕೋಟಿ ಮಕ್ಕಳ ಏಳಿಗೆಗಾಗಿ ಶ್ರಮಿಸುತ್ತಿರುವ ಬಾಲವಿಕಾಸ ಅಕಾಡೆಮಿ -ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾರ್ಗದರ್ಶನದಲ್ಲಿ ಅಕಾಡೆಮಿಗೆ ಹೊಸಸ್ವರೂಪ ಬೆಳಗಾವಿ: ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳ ಪ್ರಧಾನ ಸಮಾರಂಭ ಹಮ್ಮಿಕೊಂಡಿದ್ದು, 2022-23 ಹಾಗೂ 2023-24 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪುರಸ್ಕೃತರಿಗೆ ವಿತರಿಸಲಾಗುತ್ತಿದೆ.ಕರ್ನಾಟಕ ಬಾಲವಿಕಾಸ ಅಕಾಡೆಮಿಯು ರಾಜ್ಯದ ಸುಮಾರು 2 ಕೋಟಿ ಮಕ್ಕಳ ಶ್ರಯೋಭಿವೃದ್ಧಿಗಾಗಿ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶ್ರಮಿಸುತ್ತಿದೆ. ಮಹಿಳಾ ಮತ್ತು […]

ಮತ್ತಷ್ಟು ಓದಿ..